AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಗೋಪಾಲ್ ಜೋಶಿಗೆ ಬಿಗ್​ ರಿಲೀಫ್

ಗೋಪಾಲ್ ಜೋಶಿ ಅವರನ್ನು ಲೋಕಸಭಾ ಟಿಕೆಟ್‌ಗಾಗಿ ಹಣ ಪಡೆದ ಆರೋಪದ ಮೇಲೆ ಬಂಧಿಸಲಾಗಿತ್ತು. ಆದರೆ, ಹೈಕೋರ್ಟ್‌ನ ಏಕಸದಸ್ಯ ಪೀಠವು ಎಫ್‌ಐಆರ್ ಮತ್ತು ನಂತರದ ಕ್ರಮಗಳಿಗೆ ತಡೆಯಾಜ್ಞೆ ನೀಡಿದೆ. ಹಣಕಾಸಿನ ವಿವಾದಕ್ಕೆ ಕ್ರಿಮಿನಲ್ ಪ್ರಕರಣ ದಾಖಲಿಸಿರುವುದರಿಂದ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ.

ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಗೋಪಾಲ್ ಜೋಶಿಗೆ ಬಿಗ್​ ರಿಲೀಫ್
ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚನೆ ಪ್ರಕರಣ: ಗೋಪಾಲ್ ಜೋಶಿಗೆ ಬಿಗ್​ ರಿಲೀಫ್
Ramesha M
| Updated By: ಗಂಗಾಧರ​ ಬ. ಸಾಬೋಜಿ|

Updated on: Oct 28, 2024 | 5:58 PM

Share

ಬೆಂಗಳೂರು, ಅಕ್ಟೋಬರ್​ 28: ಲೋಕಸಭಾ ಟಿಕೆಟ್ ಕೊಡಿಸಲು ಹಣ ಪಡೆದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಗೋಪಾಲ್ ಜೋಶಿಗೆ (Gopal Joshi) ಎಫ್ಐಆರ್ ಹಾಗೂ ನಂತರದ ಕ್ರಮಗಳಿಗೆ ಹೈಕೋರ್ಟ್ ಏಕಸದಸ್ಯ ಪೀಠದಿಂದ ತಡೆಯಾಜ್ಞೆ ನೀಡಿದೆ. ಹಣದ ವಿವಾದವೆಂಬ ಕಾರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ.

ಗೋಪಾಲ ಜೋಶಿ ಪರ ಹಿರಿಯ ವಕೀಲ ಡಿ.ಆರ್.ರವಿಶಂಕರ್ ವಾದ ಮಂಡಿಸಿದ್ದು, ಹಣವನ್ನು ಹಿಂದಿರುಗಿಸಲು ಅರ್ಜಿದಾರರು ಒಪ್ಪಿದ್ದರು. ಹಣಕಾಸಿನ ವ್ಯವಹಾರಕ್ಕೆ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಗೋಪಾಲ ಜೋಶಿಗೆ ಹೈಕೋರ್ಟ್​​ನಿಂದ ಮಧ್ಯಂತರ ರಿಲೀಫ್ ನೀಡಲಾಗಿದೆ.

ಇದನ್ನೂ ಓದಿ: ವಂಚನೆ ಪ್ರಕರಣದಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸುನೀತಾ ಚೌಹಾಣ್ ಸ್ಪಷ್ಟನೆ

ಗೋಪಾಲ್ ಜೋಶಿ ವಿರುದ್ದ ಸುನೀತಾ ಚವ್ಹಾಣ್​ ಎನ್ನುವವರು ದೂರು ನೀಡಿದ್ದರು. ಹೀಗಾಗಿ ಅವರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಲೋಕಸಭಾ ಟಿಕೆಟ್ ಕೊಡಿಸುತ್ತೇನೆ ಎಂದು ಗೋಪಾಲ್​ ಜೋಶಿ 2 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದು, 25 ಲಕ್ಷ ರೂ. ಪಡೆದಿದ್ದರು. ಆದರೆ ಯಾವಾಗ ಟಿಕೆಟ್ ಸಿಗದಿದ್ದಾಗ ನಾವು ಕೊಟ್ಟ ಹಣ ವಾಪಸ್ ಕೇಳಿದ್ದು, ನೀಡಿರಲಿಲ್ಲ. ಹೀಗಾಗಿ ನಾವು ಅನಿವಾರ್ಯವಾಗಿ ದೂರು ನೀಡಿದ್ದೇವು ಎಂದು ಸುನೀತಾ ಚವ್ಹಾಣ್​ ಹೇಳಿದ್ದರು.

ಅಷ್ಟೇ ಅಲ್ಲದೆ ಈ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಅವರು ಪಾತ್ರ ಏನೂ ಇಲ್ಲ. ಇದರಲ್ಲಿ ಹೈಕಮಾಂಡ್ ಹೆಸರನ್ನ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೂಡ ಅವರು ಹೇಳಿದ್ದರು.

ಎಸಿಪಿ ಚಂದನ್ ನೇತೃತ್ವದಲ್ಲಿ ಬೆಂಗಳೂರಿನಿಂದ ಆಗಮಿಸಿದ ತಂಡ ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿನ ಗೋಪಾಲ ಜೋಶಿ ಮನೆಗೆ ಸುನೀತಾ ಚವ್ಹಾಣ್​ರನ್ನು ಕರೆತಂದಿದ್ದರು. ಅಶೋಕನಗರ ಪೊಲೀಸರ ತಂಡ ಮನೆಯಲ್ಲಿ ಪಂಚನಾಮೆ ಮಾಡಿದ್ದರು.

ಇದನ್ನೂ ಓದಿ: ಹಳೇ ಹುಬ್ಬಳ್ಳಿ ಕೇಸ್​ ಹಿಂಪಡೆದಿದ್ದಕ್ಕೆ ಜೋಶಿ ವಾಗ್ದಾಳಿ: ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾದ ಬಿಜೆಪಿ

ಬಳಿಕ ಅವರನ್ನು ಸುನೀತಾ ಚವ್ಹಾಣ್​ರನ್ನು ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಮಾಡಿದ್ದರು. ಈ ವೇಳೆ ನಾನು ಯಾವದೇ ಮಾಹಿತಿ ನೀಡಲ್ಲ. ಪ್ರಕರಣ ತನಿಖೆ ಹಂತದಲ್ಲಿದೆ ಮಾತಾಡಲ್ಲ ಎಂದು ಯಾವದೇ ಪ್ರತಿಕ್ರಿಯೆ ನೀಡದೆ ತೆರಳಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!