ಬೆಂಗಳೂರು, ಅಕ್ಟೋಬರ್ 28: ಲೋಕಸಭಾ ಟಿಕೆಟ್ ಕೊಡಿಸಲು ಹಣ ಪಡೆದ ಆರೋಪದಲ್ಲಿ ಬಂಧನಕ್ಕೆ ಒಳಗಾಗಿರುವ ಗೋಪಾಲ್ ಜೋಶಿಗೆ (Gopal Joshi) ಎಫ್ಐಆರ್ ಹಾಗೂ ನಂತರದ ಕ್ರಮಗಳಿಗೆ ಹೈಕೋರ್ಟ್ ಏಕಸದಸ್ಯ ಪೀಠದಿಂದ ತಡೆಯಾಜ್ಞೆ ನೀಡಿದೆ. ಹಣದ ವಿವಾದವೆಂಬ ಕಾರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲಾಗಿದೆ.
ಗೋಪಾಲ ಜೋಶಿ ಪರ ಹಿರಿಯ ವಕೀಲ ಡಿ.ಆರ್.ರವಿಶಂಕರ್ ವಾದ ಮಂಡಿಸಿದ್ದು, ಹಣವನ್ನು ಹಿಂದಿರುಗಿಸಲು ಅರ್ಜಿದಾರರು ಒಪ್ಪಿದ್ದರು. ಹಣಕಾಸಿನ ವ್ಯವಹಾರಕ್ಕೆ ಕ್ರಿಮಿನಲ್ ಕೇಸ್ ದಾಖಲಿಸಿದ್ದಾರೆ. ಹೀಗಾಗಿ ಗೋಪಾಲ ಜೋಶಿಗೆ ಹೈಕೋರ್ಟ್ನಿಂದ ಮಧ್ಯಂತರ ರಿಲೀಫ್ ನೀಡಲಾಗಿದೆ.
ಇದನ್ನೂ ಓದಿ: ವಂಚನೆ ಪ್ರಕರಣದಲ್ಲಿ ಪ್ರಲ್ಹಾದ್ ಜೋಶಿ ಪಾತ್ರ ಏನೂ ಇಲ್ಲ: ದೂರುದಾರೆ ಸುನೀತಾ ಚೌಹಾಣ್ ಸ್ಪಷ್ಟನೆ
ಗೋಪಾಲ್ ಜೋಶಿ ವಿರುದ್ದ ಸುನೀತಾ ಚವ್ಹಾಣ್ ಎನ್ನುವವರು ದೂರು ನೀಡಿದ್ದರು. ಹೀಗಾಗಿ ಅವರನ್ನು ಪೊಲೀಸರು ಇತ್ತೀಚೆಗೆ ಬಂಧಿಸಿದ್ದರು. ಲೋಕಸಭಾ ಟಿಕೆಟ್ ಕೊಡಿಸುತ್ತೇನೆ ಎಂದು ಗೋಪಾಲ್ ಜೋಶಿ 2 ಕೋಟಿ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದು, 25 ಲಕ್ಷ ರೂ. ಪಡೆದಿದ್ದರು. ಆದರೆ ಯಾವಾಗ ಟಿಕೆಟ್ ಸಿಗದಿದ್ದಾಗ ನಾವು ಕೊಟ್ಟ ಹಣ ವಾಪಸ್ ಕೇಳಿದ್ದು, ನೀಡಿರಲಿಲ್ಲ. ಹೀಗಾಗಿ ನಾವು ಅನಿವಾರ್ಯವಾಗಿ ದೂರು ನೀಡಿದ್ದೇವು ಎಂದು ಸುನೀತಾ ಚವ್ಹಾಣ್ ಹೇಳಿದ್ದರು.
ಅಷ್ಟೇ ಅಲ್ಲದೆ ಈ ಪ್ರಕರಣದಲ್ಲಿ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ಪಾತ್ರ ಏನೂ ಇಲ್ಲ. ಇದರಲ್ಲಿ ಹೈಕಮಾಂಡ್ ಹೆಸರನ್ನ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಕೂಡ ಅವರು ಹೇಳಿದ್ದರು.
ಎಸಿಪಿ ಚಂದನ್ ನೇತೃತ್ವದಲ್ಲಿ ಬೆಂಗಳೂರಿನಿಂದ ಆಗಮಿಸಿದ ತಂಡ ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿನ ಗೋಪಾಲ ಜೋಶಿ ಮನೆಗೆ ಸುನೀತಾ ಚವ್ಹಾಣ್ರನ್ನು ಕರೆತಂದಿದ್ದರು. ಅಶೋಕನಗರ ಪೊಲೀಸರ ತಂಡ ಮನೆಯಲ್ಲಿ ಪಂಚನಾಮೆ ಮಾಡಿದ್ದರು.
ಇದನ್ನೂ ಓದಿ: ಹಳೇ ಹುಬ್ಬಳ್ಳಿ ಕೇಸ್ ಹಿಂಪಡೆದಿದ್ದಕ್ಕೆ ಜೋಶಿ ವಾಗ್ದಾಳಿ: ಸರ್ಕಾರದ ವಿರುದ್ಧ ಹೋರಾಟಕ್ಕೆ ಮುಂದಾದ ಬಿಜೆಪಿ
ಬಳಿಕ ಅವರನ್ನು ಸುನೀತಾ ಚವ್ಹಾಣ್ರನ್ನು ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ಮಾಡಿದ್ದರು. ಈ ವೇಳೆ ನಾನು ಯಾವದೇ ಮಾಹಿತಿ ನೀಡಲ್ಲ. ಪ್ರಕರಣ ತನಿಖೆ ಹಂತದಲ್ಲಿದೆ ಮಾತಾಡಲ್ಲ ಎಂದು
ಯಾವದೇ ಪ್ರತಿಕ್ರಿಯೆ ನೀಡದೆ ತೆರಳಿದ್ದರು.
ರಾಜ್ಯದ ಮತ್ತಷ್ಟು ಸುದ್ದಿಗನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.