AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಹೈಕೋರ್ಟ್ ಶಾಕ್, ಪತ್ನಿ ವಿರುದ್ಧ ಪಡೆದಿದ್ದ ವಿಚ್ಛೇದನಕ್ಕೆ ತಡೆಯಾಜ್ಞೆ

ವಿವಾಹ ವಿಚ್ಛೇದನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಕರ್ನಾಟಕ ಹೈಕೋರ್ಟ್ ಶಾಕ್ ಕೊಟ್ಟಿದೆ.

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಹೈಕೋರ್ಟ್ ಶಾಕ್, ಪತ್ನಿ ವಿರುದ್ಧ ಪಡೆದಿದ್ದ ವಿಚ್ಛೇದನಕ್ಕೆ ತಡೆಯಾಜ್ಞೆ
ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ
TV9 Web
| Edited By: |

Updated on: Jan 06, 2023 | 10:46 PM

Share

ಬೆಂಗಳೂರು: ಮೂಡಿಗೆರೆ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ(MP Kumaraswamy)  ಪತ್ನಿ ಸವಿತಾ ವಿರುದ್ಧ ಪಡೆದಿದ್ದ ವಿಚ್ಛೇದನಕ್ಕೆ (divorce) ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಮೈಸೂರಿನ ಕೋರ್ಟ್(Mysuru Court) ಎಂ.ಪಿ.ಕುಮಾರಸ್ವಾಮಿ ದಂಪತಿಗೆ ವಿಚ್ಛೇದನ ನೀಡಿತ್ತು. ಆದ್ರೆ ಇದನ್ನು ಪ್ರಶ್ನಿಸಿ ಪತ್ನಿ ಸವಿತಾ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಕೋರ್ಟ್, ವಿಚ್ಛೇದನ ತಡೆಯಾಜ್ಞೆ ನೀಡಿ ಇಂದು(ಜನವರಿ 06) ಆದೇಶ ಹೊರಡಿಸಿದೆ. ಇದರಿಂದ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಹೈಕೋರ್ಟ್ ಶಾಕ್ ಕೊಟ್ಟಿದೆ.

ಇದನ್ನೂ ಓದಿ: ಆನೆ ದಾಳಿಗೆ ಮಹಿಳೆ ಬಲಿ: ಸಾಂತ್ವನ ಹೇಳಲು ಬಂದ ಬಿಜೆಪಿ ಶಾಸಕನ ಮೇಲೆ ಹಲ್ಲೆ, ಪೊಲೀಸರ ವೈಫಲ್ಯ ಎಂದ ಕುಮಾರಸ್ವಾಮಿ

ಪತಿಯಿಂದ ವಿಚ್ಛೇದನ ಪಡೆಯುವ ಇಚ್ಛೆ ಪತ್ನಿಗೆ ಇಲ್ಲ. ಶಾಸಕ ಎಂ.ಪಿ.ಕುಮಾರಸ್ವಾಮಿ 2ನೇ ಮದುವೆಯಾಗುವ ಸಾಧ್ಯತೆ ಇದೆ. ಹೀಗಾಗಿ ವಿಚ್ಛೇದನ ಆದೇಶಕ್ಕೆ ತಡೆ ನೀಡುವಂತೆ ಸವಿತಾ ಪರ ವಕೀಲ ಕೆ.ಎ.ಚಂದ್ರಶೇಖರ್ ಅವರು ಹೈಕೋರ್ಟ್​ನಲ್ಲಿ ವಾದ ಮಂಡಿಸಿದರು. ಇದನ್ನು ಆಲಿಸಿದ ಹೈಕೋರ್ಟ್, ಮೈಸೂರು ಕೋರ್ಟ್‌ನ ವಿಚ್ಛೇದನ ಆದೇಶಕ್ಕೆ ತಡೆ ನೀಡಿದೆ.

ಅಕ್ರಮ ಸಂಬಂಧ ಹೊಂದಿದ್ದನ್ನು ಪ್ರಶ್ನಿಸಿ ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ 2016ರಲ್ಲಿ ಸಾರ್ವಜನಿಕರ ಎದುರೇ ಕುಮಾರಸ್ವಾಮಿಯವರು ಪತ್ನಿಗೆ ಹೊಡೆದಿದ್ದರು. ನಂತರ 2017ರಲ್ಲಿ ಪತ್ನಿ ಸವಿತಾ ಮೈಸೂರಿನ ಜೆಎಂಎಫ್​ಸಿ ನ್ಯಾಯಾಲಯದಲ್ಲಿ ವಿಚ್ಛೇದನ ಹಾಗೂ ಜೀವನಾಂಶ ಕೊಡಬೇಕೆಂದು ಕೋರಿ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಮನೆ ನಿರ್ಮಾಣಕ್ಕೆ ಅಕ್ರಮ ಮರಳು ಸಾಗಾಟ; ಶಾಸಕ ಎಂ.ಪಿ.ಕುಮಾರಸ್ವಾಮಿ ವಿರುದ್ಧ ಗಂಭೀರ ಆರೋಪ

ಗಂಡನಿಗೆ (ಎಂ.ಪಿ.ಕುಮಾರಸ್ವಾಮಿ) ಇನ್ನೊಂದು ಹೆಣ್ಣಿನೊಂದಿಗೆ ಅಕ್ರಮ ಸಂಬಂಧ ಇದ್ದು, ಅವರ ಹೆಂಡತಿಯಾದ ನನಗೆ ಕೊಡಬೇಕಾದ ಸ್ಥಾನಮಾನಗಳನ್ನು ಕೊಡುತ್ತಿಲ್ಲ. ಇದ್ದರಿಂದ ನಾನು ಬೇಸತ್ತಿದ್ದು, ನನ್ನ ಗಂಡನಿಂದ ವಿವಾಹ ವಿಚ್ಛೇದನ ಕೊಡಿಸಿ ಜೀವನಾಂಶಕ್ಕೆ ಪ್ರತಿ ತಿಂಗಳೂ 1.5 ಲಕ್ಷ ಹಣ ಹಾಗೂ 2.50 ಕೋಟಿ ರೂ ಆಸ್ತಿಯನ್ನು ಕೊಡಿಸಬೇಕು. ಜೊತೆಗೆ ನ್ಯಾಯಾಲಯದ ವೆಚ್ಚಕ್ಕಾಗಿ 5 ಲಕ್ಷ ರೂ ಕೊಡಬೇಕೆಂದು ಅರ್ಜಿಯಲ್ಲಿ ಮನವಿ ಮಾಡಿದ್ದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Web contact
Web contact

TV9 Kannada

Read More
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ಗಡಿಪಾರಾಗಿದ್ದ ರೌಡಿಯನ್ನುಮದುವೆ ಮಂಟಪದಿಂದಲೇ ಎಳೆದೊಯ್ದ ಪೊಲೀಸರು!
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ರಕ್ಷಿತಾ ಶೆಟ್ಟಿ ಶ್ವಾನ ಪ್ರೇಮ; ಕೋಳಿ ಬೇಯಿಸಿಕೊಟ್ಟ ಬಿಗ್ ಬಾಸ್ ರನ್ನರ್ ಅಪ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಪಿಡಿಒಗೆ ಫೋನ್​​ ಕರೆಯಲ್ಲೇ ಕ್ಲಾಸ್​​ ತೆಗೆದುಕೊಂಡ ಸಂಸದ ಸುನೀಲ್ ಬೋಸ್
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಗುರು ಸಂಚಾರ; ಜೂ.2ರಿಂದ ವೃಷಭ ರಾಶಿಯ ಭವಿಷ್ಯ ಹೇಗಿರಲಿದೆ ಗೊತ್ತಾ?
ಮೆಡಿಕಲ್ ಬಂದ್ ಇದ್ರೂ ಜನರಿಗಿಲ್ಲ ತೊಂದರೆ!
ಮೆಡಿಕಲ್ ಬಂದ್ ಇದ್ರೂ ಜನರಿಗಿಲ್ಲ ತೊಂದರೆ!
ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಅಂಬಾನಿ ಫ್ಯಾಮಿಲಿ ಭೇಟಿ!
ಬೆಂಗಳೂರಿನ ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಅಂಬಾನಿ ಫ್ಯಾಮಿಲಿ ಭೇಟಿ!
ಅನಿಲ್ ಕಪೂರ್-ಶೋಭಿತಾ ನೋಡಿ ನೈಸ್ ಜೋಡಿ ಎಂದ ಫ್ಯಾನ್ಸ್; ನಟಿ ರಿಯಾಕ್ಷನ್ ಏನು
ಅನಿಲ್ ಕಪೂರ್-ಶೋಭಿತಾ ನೋಡಿ ನೈಸ್ ಜೋಡಿ ಎಂದ ಫ್ಯಾನ್ಸ್; ನಟಿ ರಿಯಾಕ್ಷನ್ ಏನು