AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಜ್ವಲ್​ ರೇವಣ್ಣ ಅನರ್ಹ ಬೆನ್ನಲ್ಲೇ ಇದೀಗ ತಂದೆ ಹೆಚ್​.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು

ಪ್ರಜ್ವಲ್​ ರೇವಣ್ಣ ಅನರ್ಹ ಬೆನ್ನಲ್ಲೇ ಇದೀಗ ಅವರ ತಂದೆ ಹೆಚ್​.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು ಬಂದಿದೆ. ಪರಾಜಿತ ಅಭ್ಯರ್ಥಿ ಸಲ್ಲಿಸಿದ್ದ ಶಾಸಕತ್ವ ಅಸಿಂಧು ಕೋರಿ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ರೇವಣ್ಣ ಸೇರಿದಂತೆ ಹಲವರಿಗೆ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ.

ಪ್ರಜ್ವಲ್​ ರೇವಣ್ಣ ಅನರ್ಹ ಬೆನ್ನಲ್ಲೇ ಇದೀಗ ತಂದೆ ಹೆಚ್​.ಡಿ.ರೇವಣ್ಣ ಶಾಸಕ ಸ್ಥಾನಕ್ಕೂ ಕುತ್ತು
Ramesha M
| Edited By: |

Updated on: Sep 04, 2023 | 12:38 PM

Share

ಬೆಂಗಳೂರು, (ಸೆಪ್ಟೆಂಬರ್ 04): ಪ್ರಜ್ವಲ್​ ರೇವಣ್ಣ (Prajwal Revanna) ಅವರ ಸಂಸದ ಸ್ಥಾನ ಅಸಿಂಧುಗೊಳಿಸಿದ ಬೆನ್ನಲ್ಲೇ ಇದೀಗ ಶಾಸಕರಾಗಿ ಹೆಚ್​.ಡಿ.ರೇವಣ್ಣ (HD Revanna) ಆಯ್ಕೆ ಅಸಿಂಧು ಕೋರಿ ಅರ್ಜಿ ವಿಚಾರಣೆಗೆ ಬಂದಿದ್ದು, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ ಎಲ್ಲಾ ಅಭ್ಯರ್ಥಿಗಳಿಗೂ ಕರ್ನಾಟಕ ಹೈಕೋರ್ಟ್ (Karnataka High Court) ಸಮನ್ಸ್ ಜಾರಿಗೆ ಆದೇಶಿಸಿದೆ. ಪರಾಜಿತ ಬಿಜೆಪಿ(BJP) ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಇಂದು(ಸೆಪ್ಟೆಂಬರ್ 04) ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಶಾಸಕ ಹೆಚ್.ಡಿ.ರೇವಣ್ಣ ಸೇರಿದಂತೆ ಅವರ ವಿರುದ್ಧ ಸ್ಪರ್ಧಿಸಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಸಮನ್ಸ್ ಜಾರಿ ಮಾಡುವಂತೆ ಆದೇಶ ಹೊರಡಿಸಿದೆ. ವಿಧಾನಸಭೆ ಕಾರ್ಯದರ್ಶಿ ಮೂಲಕ ಸಮನ್ಸ್ ಜಾರಿಗೆ ಕೋರ್ಟ್ ಆದೇಶ ಮಾಡಿದೆ.

ಇದೇ ಚುನಾವಣಾ ತಕರಾರು ಅರ್ಜಿ ಸಂಬಂಧ ಶಾಸಕ ಹೆಚ್. ಡಿ.ರೇವಣ್ಣ ವಿರುದ್ಧ ಪರಾಜಿತ ಬಿಜೆಪಿ ಅಭ್ಯರ್ಥಿ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರವಾಗಿ ಹೈಕೋರ್ಟ್ ಏಕಸದಸ್ಯ ಪೀಠದಿಂದ ನೋಟಿಸ್​ ಜಾರಿ ಮಾಡಿತ್ತು. ಇದೀಗ ಸಮನ್ಸ್​ ಜಾರಿಗೆ ಆದೇಶಿಸಿದೆ.

ಇದನ್ನೂ ಓದಿ: ಶಾಸಕತ್ವ ಅಸಿಂಧು ಕೋರಿ ಅರ್ಜಿ: ಮಾಜಿ ಸಚಿವ ಹೆಚ್​ಡಿ ರೇವಣ್ಣಗೆ ಹೈಕೋರ್ಟ್ ನೋಟಿಸ್, ಸಚಿವ ಪ್ರಿಯಾಂಕ್ ಖರ್ಗೆಗೆ ಸಮನ್ಸ್​ ಜಾರಿ

ಚುನಾವಣಾ ಅಕ್ರಮಗಳಿಂದ ಹೆಚ್.ಡಿ. ರೇವಣ್ಣ ಜಯಗಳಿಸಿದ್ದಾರೆ. 2ನೇ ಸ್ಥಾನದಲ್ಲಿದ್ದ ಶ್ರೇಯಸ್ ಪಟೇಲ್ ಮತದಾರರಿಗೆ ಆಮಿಷ ಒಡ್ಡಿದ್ದಾರೆ. ಹೀಗಾಗಿ ಇವರಿಬ್ಬರ ಮತಗಳಿಕೆಯನ್ನು ಅಸಿಂಧುಗೊಳಿಸುವಂತೆ ಬಿಜೆಪಿ ಪರಾಜಿತ ಅಭ್ಯರ್ಥಿ ದೇವರಾಜೇಗೌಡ ಅವರು ಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯಲ್ಲಿ ಮನವಿ ಮಾಡಿದ್ದರು.

ನಿಮ್ಮ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಇಂದೋರ್‌ನಲ್ಲಿ ಕಲುಷಿತ ನೀರು ಕುಡಿದು 7 ಜನ ಸಾವು; ಆಸ್ಪತ್ರೆಗೆ ಸಿಎಂ ಭೇಟಿ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಬಸ್ಸಿನಲ್ಲಿ ನಿದ್ದೆಗೆ ಜಾರಿದ್ದ ವೇಳೆ ಯುವತಿಯ ಎದೆ ಮೇಲೆ ಕೈ ಇಟ್ಟ ಯುವಕ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಪುರಿ ಜಗನ್ನಾಥ ದೇವಸ್ಥಾನದಲ್ಲಿ ಈ ವರ್ಷದ ಕೊನೆಯ ಸೂರ್ಯಾಸ್ತ ಕಂಡಿದ್ದು ಹೀಗೆ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ಬೆಂಗಳೂರಲ್ಲಿ ಪಬ್​​ಗಳತ್ತ ಮುಖ ಮಾಡಿದ ಜನ: ಸಿಲಿಕಾನ್​​ ಸಿಟಿ ಫುಲ್​​ ಝಗಮಗ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ವರ್ಷದ ಕೊನೆಯ ಸೂರ್ಯಾಸ್ತ: ನಯನ ಮನೋಹರ ದೃಶ್ಯ ಸೆರೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ
ಒಡಿಶಾದಲ್ಲಿ 2 ಪ್ರಲೇ ಕ್ಷಿಪಣಿಗಳ ಯಶಸ್ವಿ ಉಡಾವಣೆ; ವಿಡಿಯೋ ಇಲ್ಲಿದೆ