AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದ್ಯೋಗಿ ಕಾನ್ಸ್​​ಟೇಬಲ್ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ, ಬ್ಲಾಕ್ ಮೇಲ್: 8 ಕಾನ್ಸ್​​ಟೇಬಲ್ಸ್​​ ವಜಾ ಎತ್ತಿಹಿಡಿದ ಹೈಕೋರ್ಟ್, ಏನಿದು ಪ್ರಕರಣ?

ಸಿಐಎಸ್ಎಫ್ ಶಿಸ್ತು ಮತ್ತು ನೈತಿಕತೆಗೆ ಪ್ರಾಮುಖ್ಯತೆ ನೀಡುವ ಸಂಸ್ಥೆಯಾಗಿದ್ದು, ಅಲ್ಲಿ 8 ಸಿಐಎಸ್ಎಫ್ ಸಿಬ್ಬಂದಿಗಳಿಂದ ನಡೆದಿರುವ ದುಷ್ಕೃತ್ಯವು ಕ್ಷಮಾರ್ಹವಲ್ಲ. ಪತಿ ಬೇರೆಡೆ ಇದ್ದಾಗ ಇಂತಹ ದುಷ್ಕೃತ್ಯ ನಡೆದಿರುವುದು ಪತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಕೋರ್ಟ್​ ಅಭಿಪ್ರಾಯಪಟ್ಟಿದೆ.

ಸಹೋದ್ಯೋಗಿ ಕಾನ್ಸ್​​ಟೇಬಲ್ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ, ಬ್ಲಾಕ್ ಮೇಲ್: 8  ಕಾನ್ಸ್​​ಟೇಬಲ್ಸ್​​ ವಜಾ ಎತ್ತಿಹಿಡಿದ ಹೈಕೋರ್ಟ್, ಏನಿದು ಪ್ರಕರಣ?
ಸಹೋದ್ಯೋಗಿ ಕಾನ್ಸ್​​ಟೇಬಲ್ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ, ಬ್ಲಾಕ್ ಮೇಲ್: 8 ಕಾನ್ಸ್​​ಟೇಬಲ್ಸ್​​ ವಜಾ ಎತ್ತಿಹಿಡಿದ ಹೈಕೋರ್ಟ್, ಏನಿದು ಪ್ರಕರಣ?
TV9 Web
| Edited By: |

Updated on:Jun 21, 2022 | 9:24 PM

Share

ಬೆಂಗಳೂರು: ಸಹೋದ್ಯೋಗಿ ಕಾನ್ಸ್​​ಟೇಬಲ್ ಪತ್ನಿಯ (Wife) ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಬ್ಲಾಕ್ ಮೇಲ್ ಮಾಡಿದ್ದ ಆರೋಪದ ಮೇಲೆ 8 ಕಾನ್ಸ್​​ಟೇಬಲ್ ಗಳು (CISF Constable) ವಜಾಗೊಂಡಿದ್ದರು (Dismiss). ಆದರೆ ಇದರ ವಿರುದ್ಧ ಆರೋಪಿಗಳು ಸಲ್ಲಿದಿದ್ದ ಮೇಲ್ಮನವಿಯನ್ನು ಆಲಿಸಿದ ರಾಜ್ಯ ಹೈಕೋರ್ಟ್ (Karnataka High Court)​ ಕಾನ್ಸ್​​ಟೇಬಲ್ ಗಳ ವಜಾ ಆದೇಶವನ್ನು ಎತ್ತಿಹಿಡಿದ್ದೇ ಅಲ್ಲದೆ, ಅಪರಾಧಿಗಳಿಗೆ ಛೀಮಾರಿ ಹಾಕುತ್ತಾ ನೈತಿಕತೆಯ ಪಾಠವನ್ನೂ ಬೋಧಿಸಿದೆ.

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್ಎಫ್-CISF) ಗೆ ಸೇರಿದ 8 ಮಂದಿ ಕಾನ್ಸ್ ಟೇಬಲ್ ಗಳು ಸಹೋದ್ಯೋಗಿ ಕಾನ್ಸ್ ಟೇಬಲ್ ಅವರ ಪತ್ನಿಯ ಮೇಲೆ ಅತ್ಯಾಚಾರವೆಸಗಿ, ಬ್ಲಾಕ್ ಮೇಲ್ ಮಾಡಿದ್ದರು. 2015 ರಲ್ಲಿ ಕಾನ್ಸ್ ಟೇಬಲ್ ಪತ್ನಿ ದೂರಿನ ಮೇಲೆ ವಿಚಾರಣೆ ನಡೆದಿತ್ತು. ಪರಿಚಯ ಬೆಳೆಸಿ ಬ್ಲಾಕ್ ಮೇಲ್ ಮಾಡಿ, ಅತ್ಯಾಚಾರವೆಸಗಿದ್ದರು. ಈ ಮಧ್ಯೆ, ಮತ್ತೊಬ್ಬರ ಜೊತೆ ಸಂಬಂಧ ಹೊಂದಿರುವುದನ್ನು ಬಹಿರಂಗಪಡಿಸುವುದಾಗಿ ಬೆದರಿಸಿ, ಎಂಟೂ ಮಂದಿ ಕುಕೃತ್ಯವೆಸಗಿದ್ದರು.

ಸಿಐಎಸ್ಎಫ್ ಶಿಸ್ತು ಮತ್ತು ನೈತಿಕತೆಗೆ ಪ್ರಾಮುಖ್ಯತೆ ನೀಡುವ ಸಂಸ್ಥೆಯಾಗಿದ್ದು, ಅಲ್ಲಿ 8 ಸಿಐಎಸ್ಎಫ್ ಸಿಬ್ಬಂದಿಗಳಿಂದ ನಡೆದಿರುವ ದುಷ್ಕೃತ್ಯವು ಕ್ಷಮಾರ್ಹವಲ್ಲ. ಪತಿ ಬೇರೆಡೆ ಇದ್ದಾಗ ಇಂತಹ ದುಷ್ಕೃತ್ಯ ನಡೆದಿರುವುದು ಪತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಪತ್ನಿಯರನ್ನು ಬಿಟ್ಟು ತೆರಳುವವರಿಗೆ ಸಿಬ್ಬಂದಿಗೆ ಅಭದ್ರತೆ ಮೂಡಿಸುತ್ತದೆ ಎಂದು ಸಿಐಎಸ್ಎಫ್ ಸಂಸ್ಥೆಯ ಶಿಸ್ತು ಪ್ರಾಧಿಕಾರವು ತಮ್ಮ 8 ಆರೋಪಿ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿತ್ತು.

ಈ ಮಧ್ಯೆ, ಕ್ರಿಮಿನಲ್ ಪ್ರಕರಣದಲ್ಲಿ ಎಲ್ಲ ಎಂಟೂ ಮಂದಿ ಖುಲಾಸೆಗೊಂಡಿದ್ದರು. ಆದರೆ ವಜಾ ಆದೇಶ ಪ್ರಶ್ನಿಸಿ, ಹೈಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಇಂತಹ ಘಟನೆಗಳು ಕಾನ್ಸ್ ಟೇಬಲ್ ಮನೋಸ್ಥೈರ್ಯ ಕುಗ್ಗಿಸುತ್ತವೆ. ಹೀಗಾಗಿ ಇಲಾಖಾ ವಿಚಾರಣೆ ನಡೆಸದೆಯೂ ವಜಾ ಮಾಡಿರುವುದು ಸೂಕ್ತವಾಗಿದೆ ಎಂದು ನ್ಯಾ. ಅಲೋಕ್ ಆರಾಧೆ, ನ್ಯಾ.ಜೆ.ಎಂ. ಖಾಜಿ ಅವರಿದ್ದ ನ್ಯಾಯ ಪೀಠ ತೀರ್ಪು ನೀಡಿದೆ.

ಮಗುವಿಗೆ ಕಾಯಿಲೆ: ಮಹಿಳೆಯ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಏನು ಮಾಡಿದರು ಗೊತ್ತಾ?

ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:27 pm, Tue, 21 June 22

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?