AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದ್ಯೋಗಿ ಕಾನ್ಸ್​​ಟೇಬಲ್ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ, ಬ್ಲಾಕ್ ಮೇಲ್: 8 ಕಾನ್ಸ್​​ಟೇಬಲ್ಸ್​​ ವಜಾ ಎತ್ತಿಹಿಡಿದ ಹೈಕೋರ್ಟ್, ಏನಿದು ಪ್ರಕರಣ?

ಸಿಐಎಸ್ಎಫ್ ಶಿಸ್ತು ಮತ್ತು ನೈತಿಕತೆಗೆ ಪ್ರಾಮುಖ್ಯತೆ ನೀಡುವ ಸಂಸ್ಥೆಯಾಗಿದ್ದು, ಅಲ್ಲಿ 8 ಸಿಐಎಸ್ಎಫ್ ಸಿಬ್ಬಂದಿಗಳಿಂದ ನಡೆದಿರುವ ದುಷ್ಕೃತ್ಯವು ಕ್ಷಮಾರ್ಹವಲ್ಲ. ಪತಿ ಬೇರೆಡೆ ಇದ್ದಾಗ ಇಂತಹ ದುಷ್ಕೃತ್ಯ ನಡೆದಿರುವುದು ಪತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಕೋರ್ಟ್​ ಅಭಿಪ್ರಾಯಪಟ್ಟಿದೆ.

ಸಹೋದ್ಯೋಗಿ ಕಾನ್ಸ್​​ಟೇಬಲ್ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ, ಬ್ಲಾಕ್ ಮೇಲ್: 8  ಕಾನ್ಸ್​​ಟೇಬಲ್ಸ್​​ ವಜಾ ಎತ್ತಿಹಿಡಿದ ಹೈಕೋರ್ಟ್, ಏನಿದು ಪ್ರಕರಣ?
ಸಹೋದ್ಯೋಗಿ ಕಾನ್ಸ್​​ಟೇಬಲ್ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ, ಬ್ಲಾಕ್ ಮೇಲ್: 8 ಕಾನ್ಸ್​​ಟೇಬಲ್ಸ್​​ ವಜಾ ಎತ್ತಿಹಿಡಿದ ಹೈಕೋರ್ಟ್, ಏನಿದು ಪ್ರಕರಣ?
TV9 Web
| Edited By: |

Updated on:Jun 21, 2022 | 9:24 PM

Share

ಬೆಂಗಳೂರು: ಸಹೋದ್ಯೋಗಿ ಕಾನ್ಸ್​​ಟೇಬಲ್ ಪತ್ನಿಯ (Wife) ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಬ್ಲಾಕ್ ಮೇಲ್ ಮಾಡಿದ್ದ ಆರೋಪದ ಮೇಲೆ 8 ಕಾನ್ಸ್​​ಟೇಬಲ್ ಗಳು (CISF Constable) ವಜಾಗೊಂಡಿದ್ದರು (Dismiss). ಆದರೆ ಇದರ ವಿರುದ್ಧ ಆರೋಪಿಗಳು ಸಲ್ಲಿದಿದ್ದ ಮೇಲ್ಮನವಿಯನ್ನು ಆಲಿಸಿದ ರಾಜ್ಯ ಹೈಕೋರ್ಟ್ (Karnataka High Court)​ ಕಾನ್ಸ್​​ಟೇಬಲ್ ಗಳ ವಜಾ ಆದೇಶವನ್ನು ಎತ್ತಿಹಿಡಿದ್ದೇ ಅಲ್ಲದೆ, ಅಪರಾಧಿಗಳಿಗೆ ಛೀಮಾರಿ ಹಾಕುತ್ತಾ ನೈತಿಕತೆಯ ಪಾಠವನ್ನೂ ಬೋಧಿಸಿದೆ.

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್ಎಫ್-CISF) ಗೆ ಸೇರಿದ 8 ಮಂದಿ ಕಾನ್ಸ್ ಟೇಬಲ್ ಗಳು ಸಹೋದ್ಯೋಗಿ ಕಾನ್ಸ್ ಟೇಬಲ್ ಅವರ ಪತ್ನಿಯ ಮೇಲೆ ಅತ್ಯಾಚಾರವೆಸಗಿ, ಬ್ಲಾಕ್ ಮೇಲ್ ಮಾಡಿದ್ದರು. 2015 ರಲ್ಲಿ ಕಾನ್ಸ್ ಟೇಬಲ್ ಪತ್ನಿ ದೂರಿನ ಮೇಲೆ ವಿಚಾರಣೆ ನಡೆದಿತ್ತು. ಪರಿಚಯ ಬೆಳೆಸಿ ಬ್ಲಾಕ್ ಮೇಲ್ ಮಾಡಿ, ಅತ್ಯಾಚಾರವೆಸಗಿದ್ದರು. ಈ ಮಧ್ಯೆ, ಮತ್ತೊಬ್ಬರ ಜೊತೆ ಸಂಬಂಧ ಹೊಂದಿರುವುದನ್ನು ಬಹಿರಂಗಪಡಿಸುವುದಾಗಿ ಬೆದರಿಸಿ, ಎಂಟೂ ಮಂದಿ ಕುಕೃತ್ಯವೆಸಗಿದ್ದರು.

ಸಿಐಎಸ್ಎಫ್ ಶಿಸ್ತು ಮತ್ತು ನೈತಿಕತೆಗೆ ಪ್ರಾಮುಖ್ಯತೆ ನೀಡುವ ಸಂಸ್ಥೆಯಾಗಿದ್ದು, ಅಲ್ಲಿ 8 ಸಿಐಎಸ್ಎಫ್ ಸಿಬ್ಬಂದಿಗಳಿಂದ ನಡೆದಿರುವ ದುಷ್ಕೃತ್ಯವು ಕ್ಷಮಾರ್ಹವಲ್ಲ. ಪತಿ ಬೇರೆಡೆ ಇದ್ದಾಗ ಇಂತಹ ದುಷ್ಕೃತ್ಯ ನಡೆದಿರುವುದು ಪತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಪತ್ನಿಯರನ್ನು ಬಿಟ್ಟು ತೆರಳುವವರಿಗೆ ಸಿಬ್ಬಂದಿಗೆ ಅಭದ್ರತೆ ಮೂಡಿಸುತ್ತದೆ ಎಂದು ಸಿಐಎಸ್ಎಫ್ ಸಂಸ್ಥೆಯ ಶಿಸ್ತು ಪ್ರಾಧಿಕಾರವು ತಮ್ಮ 8 ಆರೋಪಿ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿತ್ತು.

ಈ ಮಧ್ಯೆ, ಕ್ರಿಮಿನಲ್ ಪ್ರಕರಣದಲ್ಲಿ ಎಲ್ಲ ಎಂಟೂ ಮಂದಿ ಖುಲಾಸೆಗೊಂಡಿದ್ದರು. ಆದರೆ ವಜಾ ಆದೇಶ ಪ್ರಶ್ನಿಸಿ, ಹೈಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಇಂತಹ ಘಟನೆಗಳು ಕಾನ್ಸ್ ಟೇಬಲ್ ಮನೋಸ್ಥೈರ್ಯ ಕುಗ್ಗಿಸುತ್ತವೆ. ಹೀಗಾಗಿ ಇಲಾಖಾ ವಿಚಾರಣೆ ನಡೆಸದೆಯೂ ವಜಾ ಮಾಡಿರುವುದು ಸೂಕ್ತವಾಗಿದೆ ಎಂದು ನ್ಯಾ. ಅಲೋಕ್ ಆರಾಧೆ, ನ್ಯಾ.ಜೆ.ಎಂ. ಖಾಜಿ ಅವರಿದ್ದ ನ್ಯಾಯ ಪೀಠ ತೀರ್ಪು ನೀಡಿದೆ.

ಮಗುವಿಗೆ ಕಾಯಿಲೆ: ಮಹಿಳೆಯ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಏನು ಮಾಡಿದರು ಗೊತ್ತಾ?

ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:27 pm, Tue, 21 June 22

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ