AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹೋದ್ಯೋಗಿ ಕಾನ್ಸ್​​ಟೇಬಲ್ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ, ಬ್ಲಾಕ್ ಮೇಲ್: 8 ಕಾನ್ಸ್​​ಟೇಬಲ್ಸ್​​ ವಜಾ ಎತ್ತಿಹಿಡಿದ ಹೈಕೋರ್ಟ್, ಏನಿದು ಪ್ರಕರಣ?

ಸಿಐಎಸ್ಎಫ್ ಶಿಸ್ತು ಮತ್ತು ನೈತಿಕತೆಗೆ ಪ್ರಾಮುಖ್ಯತೆ ನೀಡುವ ಸಂಸ್ಥೆಯಾಗಿದ್ದು, ಅಲ್ಲಿ 8 ಸಿಐಎಸ್ಎಫ್ ಸಿಬ್ಬಂದಿಗಳಿಂದ ನಡೆದಿರುವ ದುಷ್ಕೃತ್ಯವು ಕ್ಷಮಾರ್ಹವಲ್ಲ. ಪತಿ ಬೇರೆಡೆ ಇದ್ದಾಗ ಇಂತಹ ದುಷ್ಕೃತ್ಯ ನಡೆದಿರುವುದು ಪತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ ಎಂದು ಕೋರ್ಟ್​ ಅಭಿಪ್ರಾಯಪಟ್ಟಿದೆ.

ಸಹೋದ್ಯೋಗಿ ಕಾನ್ಸ್​​ಟೇಬಲ್ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ, ಬ್ಲಾಕ್ ಮೇಲ್: 8  ಕಾನ್ಸ್​​ಟೇಬಲ್ಸ್​​ ವಜಾ ಎತ್ತಿಹಿಡಿದ ಹೈಕೋರ್ಟ್, ಏನಿದು ಪ್ರಕರಣ?
ಸಹೋದ್ಯೋಗಿ ಕಾನ್ಸ್​​ಟೇಬಲ್ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ, ಬ್ಲಾಕ್ ಮೇಲ್: 8 ಕಾನ್ಸ್​​ಟೇಬಲ್ಸ್​​ ವಜಾ ಎತ್ತಿಹಿಡಿದ ಹೈಕೋರ್ಟ್, ಏನಿದು ಪ್ರಕರಣ?
TV9 Web
| Edited By: ಸಾಧು ಶ್ರೀನಾಥ್​|

Updated on:Jun 21, 2022 | 9:24 PM

Share

ಬೆಂಗಳೂರು: ಸಹೋದ್ಯೋಗಿ ಕಾನ್ಸ್​​ಟೇಬಲ್ ಪತ್ನಿಯ (Wife) ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ, ಬ್ಲಾಕ್ ಮೇಲ್ ಮಾಡಿದ್ದ ಆರೋಪದ ಮೇಲೆ 8 ಕಾನ್ಸ್​​ಟೇಬಲ್ ಗಳು (CISF Constable) ವಜಾಗೊಂಡಿದ್ದರು (Dismiss). ಆದರೆ ಇದರ ವಿರುದ್ಧ ಆರೋಪಿಗಳು ಸಲ್ಲಿದಿದ್ದ ಮೇಲ್ಮನವಿಯನ್ನು ಆಲಿಸಿದ ರಾಜ್ಯ ಹೈಕೋರ್ಟ್ (Karnataka High Court)​ ಕಾನ್ಸ್​​ಟೇಬಲ್ ಗಳ ವಜಾ ಆದೇಶವನ್ನು ಎತ್ತಿಹಿಡಿದ್ದೇ ಅಲ್ಲದೆ, ಅಪರಾಧಿಗಳಿಗೆ ಛೀಮಾರಿ ಹಾಕುತ್ತಾ ನೈತಿಕತೆಯ ಪಾಠವನ್ನೂ ಬೋಧಿಸಿದೆ.

ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್ (ಸಿಐಎಸ್ಎಫ್-CISF) ಗೆ ಸೇರಿದ 8 ಮಂದಿ ಕಾನ್ಸ್ ಟೇಬಲ್ ಗಳು ಸಹೋದ್ಯೋಗಿ ಕಾನ್ಸ್ ಟೇಬಲ್ ಅವರ ಪತ್ನಿಯ ಮೇಲೆ ಅತ್ಯಾಚಾರವೆಸಗಿ, ಬ್ಲಾಕ್ ಮೇಲ್ ಮಾಡಿದ್ದರು. 2015 ರಲ್ಲಿ ಕಾನ್ಸ್ ಟೇಬಲ್ ಪತ್ನಿ ದೂರಿನ ಮೇಲೆ ವಿಚಾರಣೆ ನಡೆದಿತ್ತು. ಪರಿಚಯ ಬೆಳೆಸಿ ಬ್ಲಾಕ್ ಮೇಲ್ ಮಾಡಿ, ಅತ್ಯಾಚಾರವೆಸಗಿದ್ದರು. ಈ ಮಧ್ಯೆ, ಮತ್ತೊಬ್ಬರ ಜೊತೆ ಸಂಬಂಧ ಹೊಂದಿರುವುದನ್ನು ಬಹಿರಂಗಪಡಿಸುವುದಾಗಿ ಬೆದರಿಸಿ, ಎಂಟೂ ಮಂದಿ ಕುಕೃತ್ಯವೆಸಗಿದ್ದರು.

ಸಿಐಎಸ್ಎಫ್ ಶಿಸ್ತು ಮತ್ತು ನೈತಿಕತೆಗೆ ಪ್ರಾಮುಖ್ಯತೆ ನೀಡುವ ಸಂಸ್ಥೆಯಾಗಿದ್ದು, ಅಲ್ಲಿ 8 ಸಿಐಎಸ್ಎಫ್ ಸಿಬ್ಬಂದಿಗಳಿಂದ ನಡೆದಿರುವ ದುಷ್ಕೃತ್ಯವು ಕ್ಷಮಾರ್ಹವಲ್ಲ. ಪತಿ ಬೇರೆಡೆ ಇದ್ದಾಗ ಇಂತಹ ದುಷ್ಕೃತ್ಯ ನಡೆದಿರುವುದು ಪತಿಯ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಪತ್ನಿಯರನ್ನು ಬಿಟ್ಟು ತೆರಳುವವರಿಗೆ ಸಿಬ್ಬಂದಿಗೆ ಅಭದ್ರತೆ ಮೂಡಿಸುತ್ತದೆ ಎಂದು ಸಿಐಎಸ್ಎಫ್ ಸಂಸ್ಥೆಯ ಶಿಸ್ತು ಪ್ರಾಧಿಕಾರವು ತಮ್ಮ 8 ಆರೋಪಿ ಸಿಬ್ಬಂದಿಯನ್ನು ಸೇವೆಯಿಂದ ವಜಾಗೊಳಿಸಿತ್ತು.

ಈ ಮಧ್ಯೆ, ಕ್ರಿಮಿನಲ್ ಪ್ರಕರಣದಲ್ಲಿ ಎಲ್ಲ ಎಂಟೂ ಮಂದಿ ಖುಲಾಸೆಗೊಂಡಿದ್ದರು. ಆದರೆ ವಜಾ ಆದೇಶ ಪ್ರಶ್ನಿಸಿ, ಹೈಕೋರ್ಟ್​​ನಲ್ಲಿ ಮೇಲ್ಮನವಿ ಸಲ್ಲಿಸಲಾಗಿತ್ತು. ಇಂತಹ ಘಟನೆಗಳು ಕಾನ್ಸ್ ಟೇಬಲ್ ಮನೋಸ್ಥೈರ್ಯ ಕುಗ್ಗಿಸುತ್ತವೆ. ಹೀಗಾಗಿ ಇಲಾಖಾ ವಿಚಾರಣೆ ನಡೆಸದೆಯೂ ವಜಾ ಮಾಡಿರುವುದು ಸೂಕ್ತವಾಗಿದೆ ಎಂದು ನ್ಯಾ. ಅಲೋಕ್ ಆರಾಧೆ, ನ್ಯಾ.ಜೆ.ಎಂ. ಖಾಜಿ ಅವರಿದ್ದ ನ್ಯಾಯ ಪೀಠ ತೀರ್ಪು ನೀಡಿದೆ.

ಮಗುವಿಗೆ ಕಾಯಿಲೆ: ಮಹಿಳೆಯ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಏನು ಮಾಡಿದರು ಗೊತ್ತಾ?

ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:27 pm, Tue, 21 June 22

Follow Us
Web contact
Web contact

TV9 Kannada

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ