ಆಪರೇಷನ್ ಕಮಲಕ್ಕಾಗಿ ಆಮಿಷ ಪ್ರಕರಣ; ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು

ಎಫ್​ಐಆರ್​ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ನ್ಯಾಯಮೂರ್ತಿ ಜಾಮ್ ಮೈಕೆಲ್ ಕುನ್ಹಾ ಅವರ ಪೀಠ ತನಿಖೆಗೆ ಅಸ್ತು ಎಂದು ಆದೇಶ ಹೊರಡಿಸಿದೆ.

ಆಪರೇಷನ್ ಕಮಲಕ್ಕಾಗಿ ಆಮಿಷ ಪ್ರಕರಣ; ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ತನಿಖೆಗೆ ಹೈಕೋರ್ಟ್ ಅಸ್ತು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Edited By:

Updated on: Apr 05, 2022 | 1:02 PM

ಬೆಂಗಳೂರು: ಆಪರೇಷನ್ ಕಮಲಕ್ಕಾಗಿ ಬಿ.ಎಸ್‌. ಯಡಿಯೂರಪ್ಪ ಆಮಿಷ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ತನಿಖೆ ಕೈಗೊಳ್ಳಲು ಹೈಕೋರ್ಟ್ ಅನುಮತಿ ನೀಡಿದೆ. ಈ ಬಗ್ಗೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿತ್ತು. ಆದರೆ, ಎಫ್​ಐಆರ್​ಗೆ ತಡೆಯಾಜ್ಞೆಯನ್ನು ಕೋರಲಾಗಿತ್ತು. ಇದೀಗ, ಎಫ್​ಐಆರ್​ಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್ ಆದೇಶ ಹೊರಡಿಸಿದೆ.

ಜೆಡಿಎಸ್ ಬಿಟ್ಟು ಬಿಜೆಪಿ ಸೇರಲು ಆಮಿಷ ಒಡ್ಡಿದ್ದ ಬಗ್ಗೆ ಶಾಸಕ ನಾಗನಗೌಡ ಪುತ್ರ ಶರಣಗೌಡ ದೂರು ನೀಡಿದ್ದರು. ಯಡಿಯೂರಪ್ಪ, ಶಿವನಗೌಡ ನಾಯಕ್, ಪ್ರೀತಮ್ ಗೌಡ, ಎಂ.ಬಿ.ಮರಮಕಲ್ ವಿರುದ್ಧ ದೂರು ದಾಖಲಾಗಿತ್ತು. ಬಳಿಕ, ಪ್ರಕರಣವನ್ನು ರದ್ದು ಮಾಡಬೇಕೆಂದು ಕೋರಿ ಬಿ.ಎಸ್. ಯಡಿಯೂರಪ್ಪ ಅರ್ಜಿ ಸಲ್ಲಿಸಿದ್ದರು. ಆದರೆ, ಎಫ್​ಐಆರ್​ಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ. ನ್ಯಾಯಮೂರ್ತಿ ಜಾಮ್ ಮೈಕೆಲ್ ಕುನ್ಹಾ ಅವರ ಪೀಠ ತನಿಖೆಗೆ ಅಸ್ತು ಎಂದು ಆದೇಶ ಹೊರಡಿಸಿದೆ.

ಇದನ್ನೂ ಓದಿ: ಜೆಡಿಎಸ್ ತ್ಯಜಿಸಲು ಬಿಜೆಪಿ ಶಾಸಕರಿಂದ 5 ಕೋಟಿ ಆಮಿಷ? ಕುಮಾರಸ್ವಾಮಿ ಸೇರಿದಂತೆ 5 ಶಾಸಕರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ಇದನ್ನೂ ಓದಿ: ಬೆಳಗಾವಿಯಲ್ಲೇ ವಾಸ್ತವ್ಯ ಹೂಡಬೇಕಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಪ್ರವಾಸದಲ್ಲಿ ದಿಢೀರ್ ಬದಲಾವಣೆ

Published On - 3:07 pm, Wed, 31 March 21