Sign In

By signing in or creating an account, you agree with Associated Broadcasting Company's Terms & Conditions and Privacy Policy.

NEP Or SEP: ಎನ್​​​ಇಪಿ ಬದಲಾಯಿಸಿ, ಎಸ್​​ಇಪಿ ಜಾರಿಗೊಳಿಸುತ್ತೇವೆ; ಎಂಸಿ ಸುಧಾಕರ್​

ಎನ್​​ಇಪಿ ಬದಲಾಯಿಸಿ, ಎಸ್​​ಇಪಿ ಜಾರಿಗೊಳಿಸುತ್ತೇವೆ. ಈ ಹಿಂದೆ ತರಾತುರಿಯಲ್ಲಿ ಎನ್​ಇಪಿ ಜಾರಿಗೊಳಿಸಲಾಗಿತ್ತು ಎಂದು ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಹೇಳಿದ್ದಾರೆ.

NEP Or SEP: ಎನ್​​​ಇಪಿ ಬದಲಾಯಿಸಿ, ಎಸ್​​ಇಪಿ ಜಾರಿಗೊಳಿಸುತ್ತೇವೆ; ಎಂಸಿ ಸುಧಾಕರ್​
ಎಂಸಿ ಸುಧಾಕರ್
Follow us
Ganapathi Sharma
|

Updated on:Jun 19, 2023 | 3:11 PM

ಕಲಬುರಗಿ: ರಾಷ್ಟ್ರೀಯ ಶಿಕ್ಷಣ ನೀತಿ (NEP) ರದ್ದುಗೊಳಿಸಿ ರಾಜ್ಯ ಶಿಕ್ಷಣ ನೀತಿ (SEP) ರೂಪಿಸಲು ಕರ್ನಾಟಕದ ನೂತನ ಕಾಂಗ್ರೆಸ್ ಸರ್ಕಾರ ಮುಂದಾಗುತ್ತಿರುವ ಬಗ್ಗೆ ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ (MC Sudhakar) ಮತ್ತೊಂದು ಮಹತ್ವದ ಸುಳಿವು ನೀಡಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಅವರು, ಎನ್​​ಇಪಿ ಬದಲಾಯಿಸಿ, ಎಸ್​​ಇಪಿ ಜಾರಿಗೊಳಿಸುತ್ತೇವೆ. ಈ ಹಿಂದೆ ತರಾತುರಿಯಲ್ಲಿ ಎನ್​ಇಪಿ ಜಾರಿಗೊಳಿಸಲಾಗಿತ್ತು ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಇದೀಗ ಹದಿನೈದು ಸಾವಿರ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಸದ್ಯ 32 ವಿಶ್ವವಿದ್ಯಾಲಯಗಳಿವೆ. ಆಯವ್ಯಯದ ಆರು ಶೇಕಡಾ ಅನುದಾನ ಶಿಕ್ಷಣ ಇಲಾಖೆಗೆ ನೀಡಬೇಕು ಎಂದು ಹೇಳಲಾಗುತ್ತದೆ. ಆದರೆ ಹಿಂದಿನ ಸರ್ಕಾರ 5400 ಕೋಟಿ ರೂ. ನೀಡಿತ್ತು. ಬಜೆಟ್​​ನ ಶೇಕಡಾ 1.7 ರಷ್ಟು ಅನುದಾನ ಮಾತ್ರ ಉನ್ನತ ಶಿಕ್ಷಣ ಇಲಾಖೆಗೆ ಬಂದಿದೆ. ಬಹುತೇಕ ಅನುದಾನ ಸಂಬಳಕ್ಕೆ ಹೋಗುತ್ತಿದೆ. ಕಳೆದ ಹತ್ತು ವರ್ಷಗಳಿಂದ ಇಲಾಖೆಯ ಅನುಧಾನ ಹೆಚ್ಚಾಗಿಲ್ಲ. ಕಾನೂನು ವ್ಯಾಪ್ತಿಯಲ್ಲಿ ಅತಿಥಿ ಶಿಕ್ಷಕರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ.

ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ರೋಹಿತ್ ಚಕ್ರತೀರ್ಥ ನೇತೃತ್ವದ ಸಮಿತಿ ಪರಿಷ್ಕರಣೆ ಮಾಡಿದ್ದ ಪಠ್ಯ ಪುಸ್ತಕವನ್ನು ಕೈಬಿಟ್ಟು ಅದಕ್ಕೂ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬರಗೂರು ರಾಮಚಂದ್ರಪ್ಪ ನೇತೃತ್ವದ ಸಮಿತಿ ಪರಿಷ್ಕರಣೆ ಮಾಡಿದ್ದ ಪಠ್ಯವನ್ನೇ ಬೋಧಿಸುವಂತೆ ಕೆಲವು ದಿನಗಳ ಹಿಂದಷ್ಟೇ ಸರ್ಕಾರ ಆದೇಶಿಸಿದೆ. ಇದರ ಬೆನ್ನಲ್ಲೇ ಇದೀಗ ಉನ್ನತ ಶಿಕ್ಷಣ ಸಚಿವರು ಎನ್​​ಇಪಿ ರದ್ದತಿ ಬಗ್ಗೆ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ.

ಎನ್‌ಇಪಿ ರದ್ದುಗೊಳಿಸುವ ಬಗ್ಗೆ ಅಧಿಕೃತ ಘೋಷಣೆಯನ್ನು ಶೀಘ್ರದಲ್ಲೇ ಮಾಡಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ಇತ್ತೀಚೆಗೆ ಬೆಳಗಾವಿಯಲ್ಲಿ ಹೇಳಿದ್ದರು.

ಇದನ್ನೂ ಓದಿ: ಎನ್‌ಇಪಿ ರದ್ದು ವಿಚಾರ; ವಿದ್ಯಾರ್ಥಿಗಳ ಹಿತ ನೋಡಿಕೊಂಡು ಮುಂದಿನ ನಿರ್ಧಾರ ಮಾಡ್ತೀವಿ ಎಂದ ಸಚಿವ ಡಾ. ಎಂಸಿ ಸುಧಾಕರ್

ಕರ್ನಾಟಕದ ಎಲ್ಲಾ 30 ವಿಶ್ವವಿದ್ಯಾಲಯಗಳ ಉಪಕುಲಪತಿಗಳು ರಾಜ್ಯದಲ್ಲಿ ‘ರಾಷ್ಟ್ರೀಯ ಶಿಕ್ಷಣ ನೀತಿ 2020’ ಅನ್ನು ರದ್ದುಗೊಳಿಸದೆ ಮುಂದುವರಿಸುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾಗಿ ಇತ್ತೀಚೆಗೆ ವರದಿಯಾಗಿತ್ತು. ಎಂಸಿ ಸುಧಾಕರ್ ಅವರು ಉಪಕುಲಪತಿಗಳ ಜತೆ ಸುದೀರ್ಘ ಚರ್ಚೆ ನಡೆಸಿದ್ದರು. ಎನ್​ಇಪಿಯ ಅನುಕೂಲಗಳು ಮತ್ತು ಅನಾನುಕೂಲಗಳನ್ನು ಪರಿಗಣಿಸಿದ ನಂತರ, ಉಪಕುಲಪತಿಗಳ ಒಟ್ಟಾರೆ ಅಭಿಪ್ರಾಯವು ನೀತಿಯನ್ನು ಮುಂದುವರೆಸುವ ಪರವಾಗಿ ಇತ್ತು. ಈ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕವಾಗಿದ್ದು, ರಾಜ್ಯದ ವಿಶ್ವವಿದ್ಯಾಲಯಗಳು ವಿವಿಧ ಹಂತಗಳಲ್ಲಿ ಅದರ ಅನುಷ್ಠಾನದಲ್ಲಿ ಈಗಾಗಲೇ ಎರಡು ವರ್ಷ ಮುಂದಿವೆ ಎಂದು ಉಪಕುಲಪತಿಗಳು ತಿಳಿಸಿದ್ದಾರೆ ಎಂದು ವರದಿ ಉಲ್ಲೇಖಿಸಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:10 pm, Mon, 19 June 23

ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಹೊಸಪಕ್ಷ ಕಟ್ಟುವ ಕುರಿತು ಯತ್ನಾಳ್ ಮನಸ್ಸಿನಲ್ಲಿರೋದು ಗೊತ್ತಿಲ್ಲ: ನಿರಾಣಿ
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಮಾತಾಡಿದ್ದು ನಿರಾಣಿ, ಆಸ್ಥೆಯಿಂದ ಕೇಳಿಸಿಕೊಂಡಿದ್ದು ಶಿವಕುಮಾರ್!
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬೆಲೆಯೇರಿಕೆ ಎಲ್ಲ ಕಡೆ ಆಗುತ್ತಿದೆ, ಕೇವಲ ಕರ್ನಾಟಕ ಮಾತ್ರ ಅಲ್ಲ: ಜಾರಕಿಹೊಳಿ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಬ್ಯಾಗ್ ಕದಿಯಲು ಹೋಗಿ ತನ್ನ ಜೀವಕ್ಕೇ ಕುತ್ತು ತಂದುಕೊಂಡ ಕಳ್ಳ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ಐಪಿಎಲ್ ಮ್ಯಾಚ್ ನೋಡಲು ಹೋಗೋ ಮುನ್ನ ಸಂಚಾರ ಪೊಲೀಸರ ಈ ಸಲಹೆ ಗಮನಿಸಿ
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ತಾವು ರಾಷ್ಟ್ರೀಯ ಪಕ್ಷವೆಂಬ ಹಮ್ಮು ಬಿಜೆಪಿ ನಾಯಕರಿಗಿರಬಹುದು: ಸುರೇಶ್ ಬಾಬು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಸರ್ಕಾರದ ಏಜೆಂಟ್​​​ನಂತೆ ವರ್ತಿಸುವ ಸ್ಪೀಕರ್​ಗೆ ಧಿಕ್ಕಾರ: ಪ್ರತಿಭಟನೆಕಾರರು
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಪೊಲೀಸರ ನಿಸ್ವಾರ್ಥ ಸೇವೆ ಮತ್ತು ದಕ್ಷತೆಗೆ ಮುಖ್ಯಮಂತ್ರಿ ಮೆಚ್ಚುಗೆ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಂದ ಟಾಯ್ಲೆಟ್ ಕ್ಲೀನ್ ಮಾಡಿಸಿದ ಹೆಚ್​ಎಂ
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು
ರಸ್ತೆಯಲ್ಲಿ ಆಟವಾಡುತ್ತಿದ್ದ ಮಗುವಿನ ಮೇಲೆ ಹರಿದ ಕಾರು