AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದರ್ಶನ್ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂಗೆ ಮೇಲ್ಮನವಿ: ಗೃಹ ಸಚಿವ ಪರಮೇಶ್ವರ್ ಅಚ್ಚರಿಯ ಹೇಳಿಕೆ

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್‌ಗೆ ದೊರೆತಿರುವ ಮಧ್ಯಂತರ ಜಾಮೀನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಾತನಾಡಿದ್ದಾರೆ. ಮೇಲ್ಮನವಿ ಸಲ್ಲಿಕೆಗೆ ವಿಳಂಬ ಆಗಿಲ್ಲ ಎಂದಿರುವ ಅವರು, ಅರ್ಜಿ ಸಲ್ಲಿಸುವುದಾದರೆ ಸಲ್ಲಿಸಿ ಎಂದು ಸೂಚನೆ ನೀಡಿದ್ದೇನೆ ಎಂದಿದ್ದಾರೆ. ಆದರೆ… ಏನೆಂದು ತಿಳಿಯಲು ಮುಂದೆ ಓದಿ.

ದರ್ಶನ್ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂಗೆ ಮೇಲ್ಮನವಿ: ಗೃಹ ಸಚಿವ ಪರಮೇಶ್ವರ್ ಅಚ್ಚರಿಯ ಹೇಳಿಕೆ
ದರ್ಶನ್ & ಪರಮೇಶ್ವರ
Ganapathi Sharma
|

Updated on: Nov 13, 2024 | 11:29 AM

Share

ಬೆಂಗಳೂರು, ನವೆಂಬರ್ 13: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ಗೆ ದೊರೆತಿರುವ ಮಧ್ಯಂತರ ಜಾಮೀನು ತಡೆ ಕೋರಿ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವ ವಿಚಾರವಾಗಿ ಕರ್ನಾಟಕ ಗೃಹ ಸಚಿವ ಡಾ. ಜಿ ಪರಮೇಶ್ವರ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮಧ್ಯಂತರ ಜಾಮೀನು ತಡೆ ಕೋರಿ ಮೇಲ್ಮನವಿ ಸಲ್ಲಿಕೆಗೆ ವಿಳಂಬ ಆಗಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ್, ಮೇಲ್ಮನವಿ ಯಾವಾಗ ಸಲ್ಲಿಸಬೇಕು ಎಂಬುದನ್ನು ಗೃಹ ಇಲಾಖೆ ಕಾರ್ಯದರ್ಶಿ ತೀರ್ಮಾನಿಸುತ್ತಾರೆ. ಮೇಲ್ಮನವಿ ಸಲ್ಲಿಸುವುದಾದರೆ ಸಲ್ಲಿಸಿ ಎಂದು ನಾನೂ ಸೂಚಿಸಿದ್ದೇನೆ. ಇಂಥ ಪ್ರಕರಣಗಳಲ್ಲಿ ಪ್ರಕ್ರಿಯೆಗಳನ್ನು ಅನುಸರಿಸಿ ಮುಂದುವರಿಯಬೇಕಾಗುತ್ತದೆ ಎಂದರು.

ಮೇಲ್ಮನವಿ ಸಲ್ಲಿಕೆ ವಿಚಾರವಾಗಿ ಕಾನೂನು ಇಲಾಖೆಯಿಂದಲೂ ಮಾಹಿತಿ ತೆಗೆದುಕೊಳ್ಳಬೇಕು. ಪೊಲೀಸ್​ ಇಲಾಖೆಯಿಂದಲೂ ಕೂಡ ಪ್ರಸ್ತಾವನೆ ಬರಬೇಕು. ನಂತರವೇ ಸರ್ಕಾರ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಪರಮೇಶ್ವರ್ ಹೇಳಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ2 ಆಗಿರುವ ದರ್ಶನ್​ಗೆ ಷರತ್ತುಬದ್ಧ ಮಧ್ಯಂತರ ಜಾಮೀನು ದೊರೆತಿದ್ದು ಅವರು ಜೈಲಿನಿಂದ ಬಿಡುಗಡೆಯಾಗಿ ಕೆಲವು ದಿನಗಳಾಗಿವೆ. ಅವರು ಬೆನ್ನು ನೋವಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಮುಸ್ಲಿಮರಿಗೆ ಮೀಸಲಾತಿ ವಿಚಾರದಲ್ಲಿ ತಪ್ಪು ಗ್ರಹಿಕೆ: ಪರಮೇಶ್ವರ್

ಸರ್ಕಾರದ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ವಿಚಾರದಲ್ಲಿ ತಪ್ಪು ಗ್ರಹಿಕೆ ಆಗಿದೆ ಎಂದು ಸಚಿವ ಪರಮೇಶ್ವರ್ ಹೇಳಿದರು. ಈ ವಿಚಾರವಾಗಿ ಸಿಎಂಗೆ ಕೆಲವು ಶಾಸಕರು, ಮುಖಂಡರು ಮನವಿ ಪತ್ರ ಸಲ್ಲಿಸಿದ್ದರು. ಆ ಪತ್ರ ಪರಿಶೀಲನೆಗೆ ಅಲ್ಪಸಂಖ್ಯಾತ ಇಲಾಖೆಗೆ ಸಿಎಂ ಸೂಚನೆ ನೀಡಿದ್ದರು. ಇಷ್ಟು ಬಿಟ್ಟರೆ ಬೇರೇನೂ ಆಗಿಲ್ಲ. ಏನೇ ತೀರ್ಮಾನ ಆದರೂ ಸಂಪುಟ ಸಭೆಯಲ್ಲಿ ಆಗಬೇಕು. ಪರಿಶೀಲನೆ ಮಾಡಿ ಎಂದು ಹೇಳಿದ ತಕ್ಷಣ ತೀರ್ಮಾನ ಆದಂತೆ ಅಲ್ಲ ಎಂದು ಅವರು ಹೇಳಿದರು.

ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ಮಾಜಿ ಆರೋಗ್ಯ ಸಚಿವ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್​ಗೆ ಶಿಫಾರಸು ವಿಚಾರವಾಗಿ ಪ್ರತಿಕ್ರಿಯಿಸಿ, ಕೋವಿಡ್ ಕಾಲದಲ್ಲಿ ನಡೆದ ಅಕ್ರಮಗಳಿಗೆ ಬೇರೆ ಬೇರೆ ಆಯಾಮವಿದೆ. ಬೆಡ್, ಔಷಧ, ಪಿಪಿಇ‌ ಕಿಟ್, ಟೆಸ್ಟ್ ಕಿಟ್ ಖರೀದಿ ವಿಚಾರಗಳಿವೆ. ಸಂಪುಟ ಉಪಸಮಿತಿ ಅಧ್ಯಯನ ನಡೆಸಿ ತೀರ್ಮಾನಕ್ಕೆ ಬರಲಿದೆ ಎಂದರು.

ಇದನ್ನೂ ಓದಿ: ಪವಿತ್ರಾ ಗೌಡ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಸಂಪುಟ ಉಪಸಮಿತಿಯ ತೀರ್ಮಾನವನ್ನು ಸಂಪುಟದ ಮುಂದೆ ಇಡುತ್ತೇವೆ. ನಾಳೆ ನಡೆಯುವ ಸಂಪುಟ ಸಭೆಯಲ್ಲಿ ಈ ವಿಚಾರ ಚರ್ಚೆ ಆಗಲ್ಲ. ಇನ್ನೂ ಸಂಪುಟ ಉಪಸಮಿತಿ ಸಭೆಯನ್ನೇ ಮಾಡಿಲ್ಲ. ಡಿಸಿಎಂ ಅವರೇ ಸಂಪುಟ ಉಪಸಮಿತಿ ಅಧ್ಯಕ್ಷರು, ನಾವು ಸದಸ್ಯರು. ಮೊದಲು ಸಂಪುಟ ಉಪ ಸಮಿತಿಯಲ್ಲಿ ಚರ್ಚೆ ಆಗಬೇಕು ಎಂದು ಪರಮೇಶ್ವರ್ ಹೇಳಿದರು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ