AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

HSRP ನಂಬರ್​ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ

ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ HSRP ನಂಬರ್ ಪ್ಲೇಟ್ ಅಳವಡಿಕೆ ಗಡುವನ್ನು ಮತ್ತೊಮ್ಮೆ ವಿಸ್ತರಿಸಿದೆ. ಇದು ಆರನೇ ಬಾರಿಯ ವಿಸ್ತರಣೆಯಾಗಿದ್ದು, ವಾಹನ ಮಾಲೀಕರು ತಮ್ಮ ವಾಹನಗಳಿಗೆ HSRP ಅಳವಡಿಸಿಕೊಳ್ಳಲು ಇನ್ನೂ ಅವಕಾಶವಿದೆ. HSRP ಅಳವಡಿಕೆಯು ಕಡ್ಡಾಯವಾಗಿದ್ದು, ಅದನ್ನು ಅಳವಡಿಸದಿದ್ದರೆ ವಾಹನ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ ಮೊದಲಾದ ಕೆಲಸಗಳನ್ನು ಮಾಡಲು ಸಾಧ್ಯವಿಲ್ಲ. ಆನ್‌ಲೈನ್ ಮೂಲಕ HSRP ಅಳವಡಿಕೆಗೆ ನೋಂದಾಯಿಸಿಕೊಳ್ಳಬಹುದು.

HSRP ನಂಬರ್​ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ
ಸಾಂದರ್ಭಿಕ ಚಿತ್ರ
ಕಿರಣ್​ ಸೂರ್ಯ
| Edited By: ವಿವೇಕ ಬಿರಾದಾರ|

Updated on:Jan 04, 2025 | 1:03 PM

Share

ಬೆಂಗಳೂರು, ಜನವರಿ 04: ಹೆಚ್​​ಎಸ್​​ಆರ್​​ಪಿ ನಂಬರ್​ ಪ್ಲೇಟ್ (HSRP Number Plate) ​ ಅಳವಡಿಕೆ ಗಡುವು ಮತ್ತೆ ವಿಸ್ತರಣೆಯಾಗಿದೆ. ರಾಜ್ಯ ಸಾರಿಗೆ ಇಲಾಖೆ ಈವರೆಗೆ 6 ಬಾರಿ ಗಡುವು ವಿಸ್ತರಣೆ ಮಾಡಿದೆ. ಹೆಚ್​​ಎಸ್​​ಆರ್​​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ 6 ಬಾರಿ ಸಮಯ ವಿಸ್ತರಿಸಿದರೂ ಸಹ ವಾಹನ ಮಾಲೀಕರು ತಮ್ಮ ವಾಹನಕ್ಕೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಸಿಕೊಂಡಿಲ್ಲ. ಹೀಗಾಗಿ, ರಾಜ್ಯ ಸಾರಿಗೆ ಇಲಾಖೆ ಮತ್ತೊಂದು ಅವಕಾಶ ನೀಡಿದೆ. ಈ ತಿಂಗಳು ಕೊನೆ ಅಂದರೆ ಜನವರಿ 31ರವರೆಗೆ ಹೆಚ್​​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆಗೆ ಸಮಯ ನೀಡಿ ರಾಜ್ಯ ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

ಹೈಸೆಕ್ಯೂರಿಟಿ ನಂಬರ್​ ಪ್ಲೇಟ್​ ಅಳವಡಿಕೆಗೆ ಈಗಾಗಲೇ ಅವಧಿ ಮುಗಿದಿದ್ದರೂ ಸಹ ರಾಜ್ಯ ಸಾರಿಗೆ ಇಲಾಖೆ ವಾಹನ ಮಾಲೀಕರಿಗೆ ಮತ್ತೆ ಮತ್ತೆ ಅವಕಾಶ ನೀಡುತ್ತಲೇ ಇದೆ. ಬರೊಬ್ಬರಿ ಆರು ಬಾರಿ ಗಡುವು ವಿಸ್ತರಿಸಿದೆ. 2019ಕ್ಕೂ ಮೊದಲು ನೋಂದಣಿಯಾದ ವಾಹನಗಳಿಗೆ ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆ ಮಾಡಿಕೊಳ್ಳಬೇಕು.

ಏನಿದು ಹೆಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​?

ಭದ್ರತೆ ಹಾಗೂ ಸುರಕ್ಷತೆಯ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ-1989 ಸೆಕ್ಷನ್‌ 50 ಹಾಗೂ 51 ಅನ್ವಯ ಎಲ್ಲಾ ವಾಹನಗಳಿಗೆ ಗರಿಷ್ಠ ಭದ್ರತೆಯ ನಂಬರ್‌ ಪ್ಲೇಟ್‌ಗಳನ್ನು ಅಳವಡಿಸಬೇಕಿದೆ. ಹೆಚ್‌ಎಸ್ಆರ್‌ಪಿ ನಂಬರ್ ಪ್ಲೇಟ್ ಎಂದರೆ ಹೈ ಸೆಕ್ಯೂರಿಟಿ ರಿಜಿಸ್ಟ್ರೇಶನ್ ಪ್ಲೇಟ್ ಎಂದರ್ಥ. ಕರ್ನಾಟಕದ ವಾಹಗಳಿಗೆ ಇದನ್ನು ಕಡ್ಡಾಯಗೊಳಿಸಲಾಗಿದೆ.

ಒಂದು ವೇಳೆ ಹೆಚ್‌ಎಸ್‌ಆರ್‌ಪಿ ಅಳವಡಿಸದಿದ್ದರೆ ಮಾಲೀಕತ್ವದ ಬದಲಾವಣೆ, ವಿಳಾಸ ಬದಲಾವಣೆ, ನಕಲಿ ಆರ್‌ಸಿ, ವಿಮೆ ಹಾಗೂ ಇನ್ನಿತರ ಕೆಲಸಗಳನ್ನು ಮಾಡಲಾಗುವುದಿಲ್ಲ. ಸಾರಿಗೆ ಇಲಾಖೆ ಹೊರಡಿಸಿರುವ ಈ ಸೂಚನೆಯಿಂದ ಅಧಿಕೃತವಾಗಿಲ್ಲದ ವಾಹನಗಳು ರಸ್ತೆಯಲ್ಲಿ ಓಡಾಡುವುದನ್ನು ಸುಲಭವಾಗಿ ಪತ್ತೆ ಹಚ್ಚಲು ಸಹಾಯಕವಾಗಲಿದೆ.

ಹೆಚ್.ಎಸ್.ಆರ್.ಪಿ ಅಳವಡಿಕೆಯ ಕಾರ್ಯವಿಧಾನ

  • https://transport.karnataka.gov.in ಅಥವಾ www.siam.in ಭೇಟಿ ನೀಡಿ ಮತ್ತು Book HSRP ನ್ನು ಕ್ಲಿಕ್ ಮಾಡಿ.
  • ನಿಮ್ಮ ವಾಹನ ತಯಾರಕರನ್ನು ಆಯ್ಕೆಮಾಡಿ.
  • ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ.
  • ಹೆಚ್‌ಎಸ್‌ಆರ್‌ಪಿ ಅಳವಡಿಕೆಗಾಗಿ ನಿಮ್ಮ ಅನುಕೂಲಕ್ಕೆ ತಕ್ಕಂತೆ ಡೀಲರ್ ಸ್ಥಳವನ್ನು ಆಯ್ಕೆಮಾಡಿ.
  • ಹೆಚ್‌ಎಸ್‌ಆರ್‌ಪಿ ಶುಲ್ಕವನ್ನು ಆನ್‌ಲೈನ್‌ನಲ್ಲಿ ಪಾವತಿಸಿ. ಶುಲ್ಕ ಪಾವತಿಯನ್ನು ನಗದು ರೂಪದಲ್ಲಿ ಮಾಡುವಂತಿಲ್ಲ.
  • ವಾಹನ ಮಾಲೀಕರ ಮೊಬೈಲ್ ಸಂಖ್ಯೆಗೆ ಒಟಿಪಿ ರವಾನಿಸಲಾಗುವುದು.
  • ನಿಮ್ಮ ಅನುಕೂಲಕ್ಕೆ, ತಕ್ಕಂತೆ ಹೆಚ್‌ಎಸ್‌ಆರ್‌ಪಿ ಅಳವಡಿಕೆಯ ದಿನಾಂಕ ಮತ್ತು ಸಮಯವನ್ನು ಆಯ್ಕೆಮಾಡಿ.
  • ನಿಮ್ಮ ವಾಹನದ ಯಾವುದೇ ತಯಾರಕ/ಡೀಲರ್ ಸಂಖ್ಯೆಗೆ ಭೇಟಿ ನೀಡಿ.
  • ವಾಹನ ಮಾಲೀಕರ ಕಚೇರಿ ಆವರಣ/ಮನೆಯ ಸ್ಥಳದಲ್ಲಿ ಹೆಚ್‌ಎಸ್‌ಆರ್‌ಪಿ ಅಳವಡಿಕೆಗಾಗಿ ಆಯ್ಕೆ ಮಾಡಬಹುದು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 12:49 pm, Sat, 4 January 25

Follow Us
Kiran Surya
Kiran Surya

ಕಿರಣ್ ಸೂರ್ಯ (Kiran Surya) ಅವರು ಟಿವಿ9 ಕನ್ನಡ (TV9 Kannada) ವಾಹಿನಿಯಲ್ಲಿ ಹಿರಿಯ ವರದಿಗಾರರಾಗಿ (Senior Reporter) ಕಾರ್ಯನಿರ್ವಹಿಸುತ್ತಿದ್ದಾರೆ

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು