AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎಣ್ಣೆ’ ಪ್ರಿಯರ ಕಿಕ್ ಏರಿಸಿದ ಸರ್ಕಾರ! ಇನ್ನು ಶ್ರೀಮಂತರ ಮದ್ಯ ಅಗ್ಗ, ಬಡವರ ಮದಿರೆ ದುಬಾರಿ

ಹೊಸ ಅಬಕಾರಿ ನೀತಿ ಜಾರಿ: ಕರ್ನಾಟಕ ಸರ್ಕಾರವು ಮೇ 11 ರಿಂದ ಹೊಸ ಅಬಕಾರಿ ನೀತಿಯನ್ನು ಜಾರಿಗೆ ತಂದಿದ್ದು, ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸಲಿದೆ. ಇದರಿಂದಾಗಿ ಸಾಮಾನ್ಯ ಬ್ರಾಂಡ್‌ನ ಮದ್ಯದ ಬೆಲೆ ಶೇ 30 ರಷ್ಟು ದುಬಾರಿಯಾಗುತ್ತಿದ್ದು, ಪ್ರೀಮಿಯಂ ಮತ್ತು ವಿದೇಶಿ ಮದ್ಯದ ಬೆಲೆಗಳು ಗಣನೀಯವಾಗಿ ಇಳಿಕೆಯಾಗಲಿವೆ.

‘ಎಣ್ಣೆ’ ಪ್ರಿಯರ ಕಿಕ್ ಏರಿಸಿದ ಸರ್ಕಾರ! ಇನ್ನು ಶ್ರೀಮಂತರ ಮದ್ಯ ಅಗ್ಗ, ಬಡವರ ಮದಿರೆ ದುಬಾರಿ
ಸಾಂದರ್ಭಿಕ ಚಿತ್ರImage Credit source: tv9
ಗಣಪತಿ ಶರ್ಮಾ
|

Updated on: May 12, 2026 | 7:35 AM

Share

ಬೆಂಗಳೂರು, ಮೇ 12: ಕರ್ನಾಟಕ (Karnataka) ಸರ್ಕಾರವು ಬಹುದಿನಗಳಿಂದ ಚರ್ಚೆಯಲ್ಲಿದ್ದ ಹೊಸ ಅಬಕಾರಿ ನೀತಿಯನ್ನು (New Excise Policy) ಸೋಮವಾರದಿಂದ (ಮೇ 11) ಅಧಿಕೃತವಾಗಿ ಜಾರಿಗೆ ತಂದಿದೆ. ದಶಕಗಳ ಹಳೆಯದಾದ ಅಬಕಾರಿ ತೆರಿಗೆ ಪದ್ಧತಿಯನ್ನು ಕೈಬಿಟ್ಟು, ಮದ್ಯದಲ್ಲಿರುವ ಆಲ್ಕೋಹಾಲ್ ಪ್ರಮಾಣಕ್ಕೆ ಅನುಗುಣವಾಗಿ ತೆರಿಗೆ ವಿಧಿಸುವ ಮಾದರಿಯನ್ನು ಅಳವಡಿಸಿಕೊಂಡಿದೆ. ಈ ಮೂಲಕ, ಈ ಮಾದರಿಯ ಅಬಕಾರಿ ನೀತಿ ಅಳವಡಿಸಿಕೊಂಡ ಭಾರತದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಆದರೆ, ಈ ಬದಲಾವಣೆಯಿಂದ ಜನಸಾಮಾನ್ಯರು ಬಳಸುವ ಕಡಿಮೆ ಬೆಲೆಯ ಮದ್ಯದ ದರವನ್ನು ಏರಿಕೆ ಮಾಡಲಿದ್ದು, ಪ್ರೀಮಿಯಂ ಅಥವಾ ವಿದೇಶಿ ಬ್ರಾಂಡ್‌ಗಳ ಮದ್ಯದ ಬೆಲೆ ಇಳಿಕೆಯಾಗಲಿದೆ.

ಮುಖ್ಯಾಂಶಗಳು

  • 16 ಸ್ಲ್ಯಾಬ್‌ಗಳಿದ್ದ ಅಬಕಾರಿ ತೆರಿಗೆ ವ್ಯವಸ್ಥೆಯನ್ನು 8 ಸ್ಲ್ಯಾಬ್‌ಗಳಿಗೆ ಇಳಿಸಿದ ಸರ್ಕಾರ.
  • ಸಾಮಾನ್ಯ ಮದ್ಯದ ಬೆಲೆ (180 ಮಿ.ಲೀ) 20-30% ರಷ್ಟು ಏರಿಕೆ; ಪ್ರೀಮಿಯಂ ಬ್ರಾಂಡ್‌ಗಳ ಬೆಲೆ 16-20% ರಷ್ಟು ಇಳಿಕೆ.
  • ಸ್ಥಳೀಯ ಮದ್ಯ ತಯಾರಕರಿಗಿಂತ ಬಹುರಾಷ್ಟ್ರೀಯ ಕಂಪನಿಗಳಿಗೆ (MNC) ಹೆಚ್ಚಿನ ಲಾಭವಾಗುವ ಆತಂಕ.

ಬಜೆಟ್ ಮದ್ಯಕ್ಕೆ ಬರೆ

ಹೊಸ ನೀತಿಯಿಂದಾಗಿ ಸಾಮಾನ್ಯ ಜನರು ಹೆಚ್ಚಾಗಿ ಬಳಸುವ ವಿಸ್ಕಿ, ರಮ್, ಬ್ರಾಂಡಿ ಮತ್ತು ವೋಡ್ಕಾಗಳ ಬೆಲೆಯಲ್ಲಿ ಭಾರಿ ಏರಿಕೆಯಾಗಲಿದೆ. ವಿಶೇಷವಾಗಿ 180 ಮಿ.ಲೀ (ಕ್ವಾರ್ಟರ್) ಟೆಟ್ರಾ ಪ್ಯಾಕ್ ಮತ್ತು ಬಾಟಲಿಗಳ ಬೆಲೆ ಶೇ 20 ರಿಂದ 30 ರಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಕರ್ನಾಟಕ ಬ್ರೂವರ್ಸ್ ಮತ್ತು ಡಿಸ್ಟಿಲರ್ಸ್ ಅಸೋಸಿಯೇಷನ್ (KBDA) ಪ್ರಕಾರ, ಮೊದಲ ಐದು ಸ್ಲ್ಯಾಬ್‌ಗಳಲ್ಲಿರುವ ಹೆಚ್ಚುವರಿ ಅಬಕಾರಿ ಸುಂಕವನ್ನು (AED) ಶೇ 20-30 ರಷ್ಟು ಹೆಚ್ಚಿಸಲಾಗಿದೆ ಎಂದು ‘ಡೆಕ್ಕನ್ ಹೆರಾಲ್ಡ್’ ವರದಿ ತಿಳಿಸಿದೆ. ಕಳೆದ ವರ್ಷ 63 ರೂಪಾಯಿ ಇದ್ದ ಕ್ವಾರ್ಟರ್ ಬೆಲೆ, ಇತ್ತೀಚಿನ ಏರಿಕೆಯ ನಂತರ 80 ರೂಪಾಯಿಗೆ ತಲುಪಿತ್ತು. ಈಗ ಹೊಸ ನೀತಿಯಿಂದಾಗಿ ಅದು 105 ರೂಪಾಯಿಗೆ ಏರಿಕೆಯಾಗುವ ಲಕ್ಷಣಗಳಿವೆ.

ಶ್ರೀಮಂತರ ಮದ್ಯ ಅಗ್ಗ

ಇನ್ನೊಂದೆಡೆ, ಶ್ರೀಮಂತರು ಬಳಸುವ ಅಥವಾ ವಿದೇಶಿ ಮೂಲದ ಪ್ರೀಮಿಯಂ ಬ್ರಾಂಡ್‌ಗಳಾದ ಡಿಯಾಜಿಯೊ, ಪೆರ್ನಾಡ್ ರಿಕಾರ್ಡ್ ಮತ್ತು ಯುನೈಟೆಡ್ ಸ್ಪಿರಿಟ್ಸ್‌ನಂತಹ ಕಂಪನಿಗಳ ಮದ್ಯದ ಬೆಲೆ ಶೇ 16 ರಿಂದ 20 ರಷ್ಟು ಇಳಿಕೆಯಾಗಲಿದೆ. 6 ರಿಂದ 8ನೇ ಸ್ಲ್ಯಾಬ್‌ನಲ್ಲಿ ಬರುವ ಈ ಪಾನೀಯಗಳ ಹೆಚ್ಚುವರಿ ಅಬಕಾರಿ ಸುಂಕವನ್ನು ಶೇ 10-15 ರಷ್ಟು ಕಡಿಮೆ ಮಾಡಲಾಗಿದೆ. ಇದರಿಂದ ಬಹುರಾಷ್ಟ್ರೀಯ ಕಂಪನಿಗಳಿಗೆ ದೊಡ್ಡ ಮಟ್ಟದ ಲಾಭವಾಗಲಿದೆ ಎಂಬ ಟೀಕೆಗಳು ಕೇಳಿಬರುತ್ತಿವೆ.

ಸ್ಥಳೀಯ ಕಂಪನಿಗಳಿಗೆ ಸಂಕಷ್ಟ

ಸರ್ಕಾರದ ಈ ಕ್ರಮವು ಸ್ಥಳೀಯ ಮದ್ಯ ತಯಾರಿಕಾ ಘಟಕಗಳ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ ಎಂದು ಕೆಬಿಡಿಎ ಆತಂಕ ವ್ಯಕ್ತಪಡಿಸಿದೆ. ದೊಡ್ಡ ಕಂಪನಿಗಳು ಬೆಲೆ ಏರಿಳಿತವನ್ನು ಸರಿದೂಗಿಸಿಕೊಳ್ಳಬಲ್ಲವು. ಆದರೆ ಬಜೆಟ್ ಮದ್ಯವನ್ನೇ ನೆಚ್ಚಿಕೊಂಡಿರುವ ಸಣ್ಣ ಪ್ರಾದೇಶಿಕ ಘಟಕಗಳು ವ್ಯವಹಾರ ಕುಸಿತದ ಭೀತಿಯಿಂದಾಗಿ ಮುಚ್ಚುವ ಹಂತಕ್ಕೆ ತಲುಪಬಹುದು ಎಂದು ಸಂಘದ ಸದಸ್ಯರು ದೂರಿದ್ದಾರೆ.

ಇದನ್ನೂ ಓದಿ: ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ 5ನೇ ಬಾರಿ ಶಾಕ್: ಮೇ 1 ರಿಂದ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ!

ರಾಜ್ಯದ ಅಬಕಾರಿ ಆದಾಯಕ್ಕೆ ಶೇ 70-75 ರಷ್ಟು ಕೊಡುಗೆ ನೀಡುವ ಸಾಮಾನ್ಯ ಮದ್ಯದ ಮೇಲೆಯೇ ಹೆಚ್ಚಿನ ತೆರಿಗೆ ಹೊರೆ ಬಿದ್ದಿರುವುದು ಈಗ ಚರ್ಚೆಗೆ ಗ್ರಾಸವಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ