AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಕಂಪನಿ ನೋಂದಣಿಗೆ ಪರದಾಡಿದ ಎನ್​ಆರ್​​ಐ ಕ್ಷಮೆ ಕೇಳಿದ ಎಂಬಿ ಪಾಟೀಲ್; ಆಮೇಲೇನಾಯ್ತು?

ಕಂಪನಿ ನೋಂದಣಿ ವಿಚಾರವಾಗಿ ಎನ್​ಆರ್​​ಐ ವ್ಯಕ್ತಿಯೊಬ್ಬರ ಟ್ವೀಟ್​ಗೆ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ತಕ್ಷಣ ಪ್ರತಿಕ್ರಿಯಿಸಿ ನೆರವಿನ ಭರವಸೆ ನೀಡಿದ್ದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಂಗಳೂರಿನಲ್ಲಿ ಕಂಪನಿ ನೋಂದಣಿಗೆ ಪರದಾಡಿದ ಎನ್​ಆರ್​​ಐ ಕ್ಷಮೆ ಕೇಳಿದ ಎಂಬಿ ಪಾಟೀಲ್; ಆಮೇಲೇನಾಯ್ತು?
ಎಂಬಿ ಪಾಟೀಲ್
ಗಣಪತಿ ಶರ್ಮಾ
|

Updated on: Jul 31, 2023 | 4:06 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಕಂಪನಿ ನೋಂದಣಿ ಮಾಡಲು ಕಷ್ಟಪಡುತ್ತಿರುವುದಾಗಿ ಟ್ವೀಟ್ ಮೂಲಕ ಅಳಲು ತೋಡಿಕೊಂಡಿದ್ದ ಅನಿವಾಸಿ ಭಾರತೀಯರೊಬ್ಬರ (NRI) ಕ್ಷಮೆ ಕೇಳಿರುವ ಕೈಗಾರಿಕಾ ಸಚಿವ ಎಂಬಿ ಪಾಟೀಲ್ (MB Patil), ಖುದ್ದು ನೆರವು ನೀಡುವುದಾಗಿ ಘೋಷಿಸಿದ್ದಾರೆ. ಬೆಂಗಳೂರಿನಲ್ಲಿ ಎಐ (AI) ಉದ್ಯಮಕ್ಕೆ ಸಂಬಂಧಿಸಿ ಕಂಪನಿ ನೋಂದಣಿ ಮಾಡುವಲ್ಲಿ ಬಹಳಷ್ಟು ವಿಳಂಬವಾಗುತ್ತಿದೆ ಎಂದು ಅನಿವಾಸಿ ಭಾರತೀಯ ಬ್ರಿಜ್ ಸಿಂಗ್ ಟ್ವೀಟ್ ಮಾಡಿದ್ದರು. ಇದಕ್ಕೆ ಸಚಿವ ಎಂಬಿ ಪಾಟೀಲ್ ತಕ್ಷಣವೇ ಪ್ರತಿಕ್ರಿಯಿಸಿದ್ದಾರೆ.

ಬೆಂಗಳೂರು ಮತ್ತು ಭಾರತವನ್ನು ಪ್ರೀತಿಸುತ್ತೇನೆ ಎಂದು ಹೇಳಿದ್ದಾರೆ. ಎರಡು ತಿಂಗಳುಗಳು ಭಾರತದಲ್ಲಿ ಕಳೆದರೂ ಕಂಪನಿ ನೋಂದಾವಣೆ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಸಂಭಾವ್ಯ ಗ್ರಾಹಕರು, ಹೂಡಿಕೆದಾರರು ಮತ್ತು ಸಹ ಸಂಸ್ಥಾಪಕರಿಂದ ವಿವಿಧ ಹಂತಗಳಲ್ಲಿ ಸಮಸ್ಯೆ ಎದುರಾಯಿತು. ಇನ್ನು ನಾನು ಅಮೆರಿಕಕ್ಕೆ ಹಿಂತಿರುಗಬೇಕಾಗಬಹುದು. ಇದನ್ನು ಭಾರವಾದ ಹೃದಯದಿಂದ ಹೇಳುತ್ತೇನೆ ಎಂದು ಬ್ರಿಜ್ ಸಿಂಗ್ ಟ್ವೀಟ್​​ನಲ್ಲಿ ಉಲ್ಲೇಖಿಸಿದ್ದರು.

ಟ್ವೀಟ್​​ಗೆ ತಕ್ಷಣ ಪ್ರತಿಕ್ರಿಯಿಸಿದ್ದ ಸಚಿವ ಪಾಟೀಲ್, ಸಿಂಗ್ ಅವರ ಕ್ಷಮೆ ಕೋರಿದ್ದಾರೆ. ನಂತರ, ಕಂಪನಿ ನೋಂದಾವಣೆಯನ್ನು ಸಾಮಾನ್ಯವಾಗಿ ಸಿಎಗಳು ಮಾಡುತ್ತಾರೆ ಮತ್ತು ಅದಕ್ಕೆ ಅನುಮೋದನೆ ನೀಡಲು ರಿಜಿಸ್ಟ್ರಾರ್​ ಆಫ್ ಕಂಪನೀಸ್​​​ (RoC / (ಇದು ಕೇಂದ್ರ ಸರ್ಕಾರದ ಅಡಿಯಲ್ಲಿ ಬರುತ್ತದೆ ಮತ್ತು ಎಲ್ಲಾ ರಾಜ್ಯಗಳಿಗೂ ಒಂದೇ ಆಗಿರುತ್ತದೆ) 15-20 ದಿನಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳಬಾರದು. ನಿಮಗೆ ಯಾವುದೇ ಸಮಸ್ಯೆಗಳಿದ್ದರೆ ನಾನು ಖುದ್ದಾಗಿ ಭೇಟಿಯಾಗಿ ಅದನ್ನು ಪರಿಹರಿಸಲು ಸಂತೋಷಪಡುತ್ತೇನೆ ಎಂದು ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಶಾಸಕಾಂಗ ಸಭೆಗೆ ಗೈರಾಗಿದ್ಯಾಕೆ? ಕೊನೆಗೂ ಕಾರಣ ಕೊಟ್ಟ ಸಚಿವ ಎಂಬಿ ಪಾಟೀಲ್​

ಸಚಿವರ ಪ್ರತಿಕ್ರಿಯೆಯಿಂದ ಹರ್ಷಗೊಂಡಿರುವ ಸಿಂಗ್, ಸಮಸ್ಯೆ ಬಗ್ಗೆ ಗಮನಹರಿಸಿದ್ದಕ್ಕೆ ನಿಮ್ಮನ್ನು ಪ್ರಶಂಸಿಸುತ್ತೇವೆ ಸರ್. ನಿಮ್ಮ ಪ್ರತಿಕ್ರಿಯೆ ಹೆಚ್ಚಿನ ಆತ್ಮವಿಶ್ವಾಸವನ್ನು ನೀಡಿದೆ. ಈಗ ಪ್ರಕ್ರಿಯೆ ಮುಂದುವರಿಯುತ್ತಿದೆ. ಅಗತ್ಯವಿದ್ದಲ್ಲಿ ನಾನು ನಿಮ್ಮ ತಂಡವನ್ನು ತಲುಪುತ್ತೇನೆ. ನಿಮ್ಮ ಬೆಂಬಲಕ್ಕಾಗಿ ಮತ್ತೊಮ್ಮೆ ಧನ್ಯವಾದಗಳು ಎಂದು ಪ್ರತಿಕ್ರಿಯಿಸಿದ್ದಾರೆ. ಉಭಯರ ಟ್ವೀಟ್​​ ಸಂಭಾಷಣೆಗೆ ಮಿಶ್ರ ಪ್ರತಿಕ್ರಿಯೆಗಳು ಬಂದಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ