AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಜವಾಬ್ದಾರಿ ಸಹಿಸಲ್ಲ, ಐಪಿಎಸ್ ರೂಪಾ, ಐಎಎಸ್​ ರೋಹಿಣಿ ಸಿಂಧೂರಿಗೆ ನೋಟಿಸ್ ನೀಡಿ; ಸಿಎಂ ಬೊಮ್ಮಾಯಿ ಖಡಕ್ ಸೂಚನೆ

ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುವುದನ್ನು ಸಹಿಸುವುದಿಲ್ಲ ಎಂದಿರುವ ಬೊಮ್ಮಾಯಿ, ಇಬ್ಬರಿಗೂ ನೋಟಿಸ್ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.

ಬೇಜವಾಬ್ದಾರಿ ಸಹಿಸಲ್ಲ, ಐಪಿಎಸ್ ರೂಪಾ, ಐಎಎಸ್​ ರೋಹಿಣಿ ಸಿಂಧೂರಿಗೆ ನೋಟಿಸ್ ನೀಡಿ; ಸಿಎಂ ಬೊಮ್ಮಾಯಿ ಖಡಕ್ ಸೂಚನೆ
ಡಿ. ರೂಪಾ ಮತ್ತು ರೋಹಿಣಿ ಸಿಂಧೂರಿ
ಗಣಪತಿ ಶರ್ಮಾ
|

Updated on: Feb 20, 2023 | 11:16 AM

Share

ಬೆಂಗಳೂರು: ಐಪಿಎಸ್ ಅಧಿಕಾರಿ ರೂಪಾ (D Roopa) ಮತ್ತು ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ನಡುವಣ ಆರೋಪ-ಪ್ರತ್ಯಾರೋಪಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಇಬ್ಬರು ಅಧಿಕಾರಿಗಳ ಕಿತ್ತಾಟ ಸರ್ಕಾರಕ್ಕೆ ಮುಜುಗರ ತಂದೊಡ್ಡಿದೆ. ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುವುದನ್ನು ಸಹಿಸುವುದಿಲ್ಲ ಎಂದಿರುವ ಬೊಮ್ಮಾಯಿ, ಇಬ್ಬರಿಗೂ ನೋಟಿಸ್ ನೀಡುವಂತೆ ಮುಖ್ಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ. ವೈಯಕ್ತಿಕ ವಿಚಾರಗಳನ್ನು ಮುಂದಿಟ್ಟುಕೊಂಡು ಅಧಿಕಾರಿಗಳು ಮಾಧ್ಯಮಗಳ ಎದುರು ಚರ್ಚಿಸುವುದು ಸರಿಯಲ್ಲ. ಇವರಿಬ್ಬರ ಕಿತ್ತಾಟದಿಂದ ಸರ್ಕಾರಕ್ಕೆ ಮುಜಗರ ಉಂಟಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು ಬೇಜವಾಬ್ದರಿಯಿಂದ ವರ್ತಿಸುವುದನ್ನು ಸಹಿಸಲ್ಲ. ಈ ಸಂಬಂಧ ಇಬ್ಬರಿಗೂ ನೊಟೀಸ್ ಸೂಚಿಸಿದ್ದೇನೆ ಎಂದು ಅವರು ಹೇಳಿದ್ದಾರೆ.

ಈ ಮಧ್ಯೆ, ಗೃಹ ಸಚಿವ ಆರಗ ಜ್ಞಾನೇಂದ್ರ ಸಹ ಅಧಿಕಾರಿಗಳ ನಡುವಣ ಕಿತ್ತಾಟಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಜನರು ಐಎಎಸ್, ಐಪಿಎಸ್​ ಅಧಿಕಾರಿಗಳನ್ನು ದೇವ ಮಾನವರು ಅಂದುಕೊಂಡಿದ್ದಾರೆ. ಆದರೆ ಈ ಇಬ್ಬರು ಅಧಿಕಾರಿಗಳು ಬಹಳ ಕೆಟ್ಟದಾಗಿ ವರ್ತನೆ ಮಾಡುತ್ತಿದ್ದಾರೆ. ಇದರಿಂದ ನನಗೂ ನೋವಾಗಿದೆ. ವೈಯಕ್ತಿಕ ವಿಚಾರಗಳು ಏನೇ ಇದ್ದರೂ ಬೀದಿ ರಂಪಾಟ ಸಲ್ಲ. ಇವರಿಂದಾಗಿ ಎಲ್ಲ ಅಧಿಕಾರಿಗಳಿಗೂ ಮುಜುಗರ ಉಂಟಾಗುವಂತಾಗಿದೆ. ಮುಖ್ಯಮಂತ್ರಿಗಳು ಕಾನೂನಿನ ಚೌಕಟ್ಟಿನಲ್ಲಿ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: IPS vs IAS: ಉತ್ತರ ಕೊಡಿ ರೂಪಾ ಅವ್ರೆ ಎಂದು ರೋಹಿಣಿ ಸಿಂಧೂರಿ ಅಭಿಮಾನಿಗಳಿಂದ 9 ಪ್ರಶ್ನೆ

ಮತ್ತಷ್ಟು ತಾರಕಕ್ಕೇರಿದ ವಾಕ್ಸಮರ

ಈ ಮಧ್ಯೆ, ರೂಪಾ ಮತ್ತು ರೋಹಿಣಿ ಸಿಂಧೂರಿ ನಡುವಣ ವಾಕ್ಸಮರ ಮತ್ತಷ್ಟು ತಾರಕಕ್ಕೇರಿದೆ. ರೋಹಿಣಿಗೆ ಮಾಧ್ಯಮದ ಮುಂದೆ ಬಂದು ಮಾತನಾಡಲು ಧೈರ್ಯ ಇಲ್ವಾ? ಅವರ ಪತಿ ಸುದ್ದಿಗೋಷ್ಠಿ ನಡೆಸುತ್ತಾರೆ ಅಂದರೆ ಏನರ್ಥ? ರೋಹಿಣಿಗೆ ಪ್ರಶ್ನೆಗಳನ್ನು ಎದುರಿಸಲು ಧೈರ್ಯ ಇಲ್ವಾ? ಉತ್ತರಗಳಿಲ್ವಾ? ರೋಹಿಣಿ ಸಿಂಧೂರಿ ಪತಿ ಮೊಬೈಲ್ ಹ್ಯಾಕ್ ಆಗಿದೆ ಅಂತ ಹೇಳುತ್ತಿದ್ದಾರೆ. ಇದು ನಂಬುವ ಮಾತೇ? ಏನೋ ಹೇಳಬೇಕು ಪಾಪ, ಮಾನ ಹರಾಜಾಗಿದೆ ಎಂದು ರೋಹಿಣಿ ಸಿಂಧೂರಿ ವಿರುದ್ಧ ಫೇಸ್​ಬುಕ್​​ನಲ್ಲಿ ಡಿ.ರೂಪಾ ಪೋಸ್ಟ್ ಮಾಡಿದ್ದಾರೆ.

ಈ ಮಧ್ಯೆ, ರೋಹಿಣಿ ಅಭಿಮಾನಿಗಳು ಫೇಸ್​ಬುಕ್​ನಲ್ಲಿ, ಡಿ ರೂಪಾ ಅವರಿಗೆ 9 ಪ್ರಶ್ನೆಗಳನ್ನು ಕೇಳಿದ್ದಾರೆ. ರೋಹಿಣಿ ಸಿಂಧೂರಿಯ ಅಭಿಮಾನಿಗಳು ರೋಹಿಣಿ ಸಿಂಧೂರಿ ಆರ್ಗನೈಜೇಷನ್ ಫೇಸ್​ಬುಕ್ ಖಾತೆ ಮೂಲಕ ಹ್ಯಾಷಟ್ಯಾಗ್ ಉತ್ತರ ಕೊಡಿ ರೂಪಾ ಅವರೇ (#UttaraKodiRoopaAvre) ಎಂದು ಪ್ರಶ್ನೆಗಳನ್ನು ಕೇಳಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ