ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ನೋಡೆಲ್ ಅಧಿಕಾರಿ ನೇಮಕ

Afghanistan Crisis: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆಸಿಕೊಳ್ಳಲು ಕೇಂದ್ರ ಸರ್ಕಾರದ ಜೊತೆ ಸಮನ್ವಯತೆಗಾಗಿ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನು ನೋಡೆಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ಕರೆತರಲು ನೋಡೆಲ್ ಅಧಿಕಾರಿ ನೇಮಕ
ಸಾಂದರ್ಭಿಕ ಚಿತ್ರ
Follow us
| Updated By: ganapathi bhat

Updated on:Aug 18, 2021 | 7:41 PM

ಬೆಂಗಳೂರು: ತಾಲಿಬಾನ್ ಉಗ್ರರ ವಶದಲ್ಲಿರುವ ಅಫ್ಘಾನಿಸ್ಥಾನದಲ್ಲಿ ಅರಾಜಕತೆ ಉಂಟಾಗಿದೆ. ಅಲ್ಲಿನ ಪರಿಸ್ಥಿತಿಯಲ್ಲಿ ಬದುಕಲು ಸಾಧ್ಯವೇ ಇಲ್ಲವೆಂದು ಸಾವಿರಾರು ಜನರು ಈಗಾಗಲೇ ತಮ್ಮ ದೇಶಗಳಿಗೆ ವಾಪಾಸಾಗಿದ್ದಾರೆ. ಅಫ್ಘಾನ್ (Afghanistan) ದೇಶದ ಮಕ್ಕಳು, ಮಹಿಳೆಯರ ಪರಿಸ್ಥಿತಿಯಂತೂ ಚಿಂತಾಜನಕವಾಗಿದೆ. ಈಗಾಗಲೇ ಅಫ್ಘಾನಿಸ್ತಾನದಲ್ಲಿರುವ ಭಾರತದ ರಾಯಭಾರ ಕಚೇರಿಯ ಬಹುತೇಕ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನು ಏರ್​ಲಿಫ್ಟ್​ (Airlift) ಮೂಲಕ ಕರೆತರಲಾಗಿದೆ. ಇನ್ನೂ ಹಲವು ಭಾರತೀಯರು ಅಲ್ಲಿ ಸಿಲುಕಿದ್ದು, ಅವರ ರಕ್ಷಣೆಗಾಗಿ ವಿದೇಶಾಂಗ ಸಚಿವಾಲಯದಿಂದ ಸಹಾಯವಾಣಿ (Helpline) ಹಾಗೂ ಇ-ಮೇಲ್ ಸೇವೆಯನ್ನು ಕೂಡ ಆರಂಭಿಸಲಾಗಿದೆ. ಇದರ ನಡುವೆ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಮಾಹಿತಿ ನೀಡಿ, ಅವರನ್ನು ಸುರಕ್ಷಿತವಾಗಿ ಕರೆಸಿಕೊಳ್ಳಲು ಕೇಂದ್ರ ಸರ್ಕಾರದ ಜೊತೆ ಸಮನ್ವಯತೆಗಾಗಿ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನು ನೋಡೆಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

ಬೆಂಗಳೂರಿನ ಸಿಐಡಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿರುವ ಐಪಿಎಸ್ ಅಧಿಕಾರಿ ಉಮೇಶ್ ಕುಮಾರ್ ಅವರನ್ನು ನೋಡೆಲ್ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ. ಇವರು ಭಾರತ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದು, ಅಫ್ಘಾನ್​ನಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಭಾರತಕ್ಕೆ ವಾಪಾಸ್ ಕರೆತರುವ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಈ ಕುರಿತು ಕರ್ನಾಟಕದ ರಾಜ್ಯಪಾಲ ಥಾವರಚಂದ ಗೆಹಲೋತ್ ಅವರ ಆದೇಶದ ಅನುಸಾರ ಉಮೇಶ್ ಕುಮಾರ್ ಅವರನ್ನು ನೋಡೆಲ್ ಅಧಿಕಾರಿಯಾಗಿ ನೇಮಿಸಲಾಗಿದೆ.

ಅಫ್ಘಾನಿಸ್ತಾನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಜನ ಸಿಲುಕಿದ್ದಾರೆ. ಅಫ್ಘಾನಿಸ್ತಾನದಲ್ಲಿ ಕನ್ನಡಿಗರು ಮಾನಸಿಕ ಒತ್ತಡದಲ್ಲಿದ್ದಾರೆ. ಕನ್ನಡಿಗರನ್ನು ರಾಜ್ಯಕ್ಕೆ ಕರೆತರುವ ಕೆಲಸ ಮಾಡಬೇಕು. ಅದಕ್ಕಾಗಿ ಒಬ್ಬ ನೋಡಲ್ ಅಧಿಕಾರಿಯನ್ನು ನೇಮಕ ಮಾಡಬೇಕು. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಮನವಿ ಮಾಡಲಾಗಿದೆ ಎಂದು ವಿಧಾನಸೌಧದಲ್ಲಿ ಮಾಜಿ ಸಚಿವ ಯು.ಟಿ. ಖಾದರ್ ಇಂದು ಹೇಳಿಕೆ ನೀಡಿದ್ದರು. ನಮ್ಮ ಮನವಿಗೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಅವರು ತಿಳಿಸಿದ್ದರು. ಅದರ ಬೆನ್ನಲ್ಲೇ ಇಂದು ನೋಡಲ್ ಅಧಿಕಾರಿಯನ್ನು ನೇಮಕ ಮಾಡಲಾಗಿದೆ.

ಅಫ್ಘಾನ್​ನಲ್ಲಿ ಅತಂತ್ರ ಸ್ಥಿತಿಯಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ನಮ್ಮ ದೇಶಕ್ಕೆ ಕರೆತರುವ ಸಲುವಾಗಿ ಭಾರತದ ವಿದೇಶಾಂಗ ಸಚಿವಾಲಯದಿಂದ ವಿಶೇಷ ಸಹಾಯವಾಣಿ ತೆರೆಯಲಾಗಿದೆ. ಕಳೆದ ಭಾನುವಾರ ರಾತ್ರಿ ತಾಲಿಬಾನ್‌ ಉಗ್ರರು ಅಧ್ಯಕ್ಷೀಯ ಭವನವನ್ನು ವಶಪಡಿಸಿಕೊಂಡ ಬಳಿಕ ಕಾಬೂಲ್‌ನಲ್ಲಿ ಆತಂಕ ಹೆಚ್ಚಾಗಿತ್ತು. ದೇಶದಲ್ಲಿ ಶಾಂತಿ ನೆಲೆಸಬೇಕು, ಜನರ ರಕ್ತಪಾತ ನಿಲ್ಲಬೇಕೆಂಬ ಕಾರಣ ನೀಡಿ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ತಮ್ಮ ಸ್ಥಾನದಿಂದ ಕೆಳಗಿಳಿದಿರುವುದಾಗಿ ಘೋಷಿಸಿದ್ದರು. ಅಫ್ಘಾನ್ ತಾಲಿಬಾನ್ ಉಗ್ರರ ವಶವಾದ ಬಳಿಕ ಅಲ್ಲಿನ ಜನರು ಬೇರೆ ದೇಶಗಳಿಂದ ಬರುವ ವಿಮಾನಗಳನ್ನು ಹತ್ತಿಕೊಂಡು ದೇಶ ಬಿಟ್ಟು ತೆರಳುತ್ತಿದ್ದಾರೆ. 10 ದಿನಗಳಲ್ಲಿ ಇಡೀ ಅಫ್ಘಾನಿಸ್ತಾನವನ್ನು ತಾಲಿಬಾನ್ ಉಗ್ರರು ಆಕ್ರಮಿಸಿಕೊಂಡಿದ್ದಾರೆ.

ಭಾರತದ ವಿದೇಶಾಂಗ ಸಚಿವಾಲಯದಿಂದ ಅಫ್ಘಾನ್​ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗಾಗಿ 919717785379 ಸಹಾಯವಾಣಿ ತೆರೆಯಲಾಗಿದೆ. ಹಾಗೇ, MEAHelpdeskIndia@gmail.com ಇಮೇಲ್ ಹೆಲ್ಪ್​ಲೈನ್ ಮೂಲಕ ಭಾರತಕ್ಕೆ ವಾಪಾಸ್ ಬರಲು ಬಯಸುವ ಅಫ್ಘಾನ್​ನಲ್ಲಿರುವ ಭಾರತೀಯರು ಭಾರತವನ್ನು ಸಂಪರ್ಕಿಸಬಹುದು.

ಇದನ್ನೂ ಓದಿ: MEA Helpline Number: ಅಫ್ಘಾನಿಸ್ತಾನದಲ್ಲಿ ಸಿಲುಕಿದ ಭಾರತೀಯರ ರಕ್ಷಣೆಗೆ ಸಹಾಯವಾಣಿ ಆರಂಭ

ಅಫ್ಘಾನ್ ತೊರೆಯೋ ಭರದಲ್ಲಿ ಮಗುವನ್ನೇ ಮರೆತ ಪೋಷಕರು; ಏರ್​ಪೋರ್ಟ್​ನಲ್ಲಿ ಅನಾಥವಾಯ್ತು 7 ತಿಂಗಳ ಕಂದಮ್ಮ

(Karnataka IPS Officer Umesh Kumar appointed as Nodal Officer to Rescue Kannadigas from Afghanistan)

Published On - 6:23 pm, Wed, 18 August 21

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ