Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಪರೇಷನ್ ಹಸ್ತ ಭೀತಿ..ಜೆಡಿಎಸ್​​ ಫುಲ್​ ಅಲರ್ಟ್​: ರಾಜ್ಯಾಧ್ಯಕ್ಷರ ಆಯ್ಕೆಗೆ ಮುಹೂರ್ತ ಫಿಕ್ಸ್

ಲೋಕಸಭೆ ಚುನಾವಣೆಗೆ ದೋಸ್ತಿ ದೋಸ್ತಿ ಎಂದು ಹೋರಾಡಿದ್ರು. ಅದರಂತೆಯೇ ಲೋಕಸಭೆ ಚುನಾವಣೆಯಲ್ಲೂ ಭರ್ಜರಿ ಗೆಲುವನ್ನೇ ಸಾಧಿಸಿದ್ರು. ಇದೀಗ ಮೈತ್ರಿಯೇ ಜೆಡಿಎಸ್​ಗೆ ಕುತ್ತು ತಂತಾ ಅನ್ನೋ ಅನುಮಾನ ಜೆಡಿಎಸ್​ ನಾಯಕರಲ್ಲೇ ಶುರುವಾಗಿದೆ. ಇದೇ ವಿಚಾರವಾಗಿಯೇ ಜೆಡಿಎಸ್​ ನಾಯಕರಲ್ಲೇ ಭಿನ್ನರಾಗ ಭುಗಿಲೆದ್ದಿದೆ. ಚನ್ನಪಟ್ಟಣದಲ್ಲಿ ನಿಖಿಲ್ ಸೋಲಿನ ಬಳಿಕ ದಳ ಮನೆಯಲ್ಲಿ ತಳಮಳ ಶುರುವಾಗಿದೆ. ಒಂದ್ಕಡೆ ಹೆಚ್​ಡಿಕೆ ವಿರುದ್ಧ ಕೆಲವರು ಅಸಮಾಧಾನ ಹೊರಹಾಕ್ತಿದ್ರೆ, ಜೆಡಿಎಸ್​ ಭಿನ್ನರಾಗವೇ ಆಪರೇಷನ್​ ಹಸ್ತಕ್ಕೆ ಅನುಕೂಲ ಆಯ್ತಾ ಅನ್ನೋ ಚರ್ಚೆ ಹುಟ್ಟುಹಾಕಿದೆ. ಆಪರೇಷನ್ ಹಸ್ತದ ಬಗ್ಗೆ ಮುನ್ಸೂಚನೆ ಸಿಕ್ಕಿರೋ ದಳಪತಿಗಳು ಇದೀಗ ಎಚ್ಚೆತ್ತುಕೊಂಡಿದ್ದು, ಸಭೆಯೂ ನಡೆಸಿದ್ದಾರೆ.

ಆಪರೇಷನ್ ಹಸ್ತ ಭೀತಿ..ಜೆಡಿಎಸ್​​ ಫುಲ್​ ಅಲರ್ಟ್​: ರಾಜ್ಯಾಧ್ಯಕ್ಷರ ಆಯ್ಕೆಗೆ ಮುಹೂರ್ತ ಫಿಕ್ಸ್
ದೇವೇಗೌಡ, ಕುಮಾರಸ್ವಾಮಿ
Follow us
ರಮೇಶ್ ಬಿ. ಜವಳಗೇರಾ
|

Updated on: Jan 12, 2025 | 5:56 PM

ಬೆಂಗಳೂರು, (ಜನವರಿ 12): ಬಿಜೆಪಿಯಲ್ಲಿನ ಬಣ ಬಡಿದಾಟದಂತೆಯೇ, ದಳ ಮನೆಯಲ್ಲೂ ಅಸಮಾಧಾನ ಇದೆ. ಬಿಜೆಪಿ ಜೊತೆ ಮೈತ್ರಿಯನ್ನೇ ಶಾಸಕ ಜಿಟಿ.ದೇವೇಗೌಡ ಬಹಿರಂಗವಾಗಿಯೇ ವಿರೋಧ ಮಾಡಿದ್ರು, ಇದಿಷ್ಟೇ ಅಲ್ಲ, ಇದೀಗ ಜೆಡಿಎಸ್​ ರಾಜ್ಯಾಧ್ಯಕ್ಷ ಪಟ್ಟಕ್ಕೆ ನಿಖಿಲ್​ ಕುಮಾರಸ್ವಾಮಿಯನ್ನ ಕೂರಿಸಲು ದೇವೇಗೌಡರು ಪ್ರಯತ್ನದಲ್ಲಿದ್ದಾರೆ. ಇದು ಜೆಡಿಎಸ್ ಹಿರಿಯ ನಾಯಕರ ಕಣ್ಣು ಕೆಂಪಗಾಗಿಸಿದೆ. ಹಿರಿಯರ ಕಡೆಗಣನೆ ಎಂದು ಆಕ್ರೋಶಕ್ಕೂ ಕಾರಣವಾಗಿದೆ. ದಳ ಮನೆಯಲ್ಲಿನ ಭಿನ್ನರಾಗವೇ ಆಪರೇಷನ್​ ಹಸ್ತಕ್ಕೆ ಚಾನ್ಸ್ ಕೊಟ್ಟಂತಾಗುತ್ತೆ ಅನ್ನೋ ಭಯದಲ್ಲಿರೋ ಕುಮಾರಸ್ವಾಮಿ ಮುನ್ನೆಚ್ಚರಿಕೆಯಾಗಿ ಸಭೆ ಮಾಡೋ ಮೂಲಕ ವಿಶ್ವಾಸಕ್ಕೆ ತೆಗೆದಕೊಳ್ಳೋ ಪ್ರಯತ್ನ ಮಾಡಿದ್ದಾರೆ. ಈ ಮೂಲಕ ಕಾಂಗ್ರೆಸ್​ ನಾಯಕರ ಆಟಕ್ಕೆ ಬ್ರೇಕ್ ಹಾಕುವ ಪ್ರಯತ್ನವನ್ನೂ ನಡೆಸುತ್ತಿದ್ದಾರೆ.

ಬೆಂಗಳೂರಿನ ಶೇಷಾದ್ರಿಪುರಂನ ಜೆಡಿಎಸ್​ ಕಚೇರಿಯಲ್ಲಿ ಸಭೆ ನಡೆಸಲಾಯ್ತು, ಮಾಜಿ ಪ್ರಧಾನಿ ದೇವೇಗೌಡರು, ಕುಮಾರಸ್ವಾಮಿ ನೇತೃತ್ವದಲ್ಲಿ ಸಭೆ ನಡೀತು. ಸಭೆಯಲ್ಲಿ ಜೆಡಿಎಸ್​ನ ಹಾಲಿ, ಮಾಜಿ ಶಾಸಕರು, ಪರಿಷತ್​ ಸದಸ್ಯರು ಭಾಗಿಯಾದ್ರು, ಪಕ್ಷದಲ್ಲಿನ ಬೆಳವಣಿಗೆ ಬಗ್ಗೆ ಮುಕ್ತವಾಗಿ ಅಭಿಪ್ರಾಯ ಪಡೆದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳೋ ಪ್ರಯತ್ನ ನಡೆಸಿದರು.

ಇದನ್ನೂ ಓದಿ: ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ: ಕರ್ನಾಟಕದಲ್ಲಿ ಗರಿಗೆದರಿದ ರಾಜಕೀಯ

ಏಪ್ರಿಲ್​​ನೊಳಗೆ JDS ರಾಜ್ಯಾಧ್ಯಕ್ಷರ ಆಯ್ಕೆ

ಇನ್ನು ಸಭೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಏಪ್ರಿಲ್​​ನೊಳಗೆ JDS ರಾಜ್ಯಾಧ್ಯಕ್ಷರ ಆಯ್ಕೆ ಮಾಡುತ್ತೇವೆ. ಚುನಾವಣೆ ಮೂಲಕ JDS ರಾಜ್ಯಾಧ್ಯಕ್ಷರ ಆಯ್ಕೆ ಮಾಡುತ್ತೇವೆ. ನಾನು ನಾಲ್ಕು ದಿನಗಳ ಕಾಲ ನವದೆಹಲಿಯಲ್ಲಿ ಇರುತ್ತೇನೆ. ಹೀಗಾಗಿ ನಮ್ಮ ಪಕ್ಷದ ಎಲ್ಲ ಪ್ರಮುಖರಿಗೆ ಕಟ್ಟು ನಿಟ್ಟಾಗಿ ಹೇಳಿದ್ದೇನೆ ಎಂದು ಸ್ಪಷ್ಟಪಡಿಸಿದರು.

ನಾನು ನಾಲ್ಕು ದಿನಗಳ ಕಾಲ ನವದೆಹಲಿಯಲ್ಲಿ ಇರುತ್ತೇನೆ. ಒಂದು ಅಥವಾ ಎರಡು ದಿನ ದೇಶದ ಕೈಗಾರಿಕೆಗಳಿಗೆ ಭೇಟಿ ನೀಡುತ್ತೇನೆ. ಇತರೆ ಕೆಲಸಗಳ ಬಗ್ಗೆ ಗಮನ ಕೊಡುತ್ತೇನೆ. ಪಕ್ಷ ಸಂಘಟನೆಗೆ, ಮಂಡ್ಯ ಕ್ಷೇತ್ರಕ್ಕೂ ಗಮನ ಕೊಡುತ್ತೇನೆ. ನನ್ನ ಪಕ್ಷದ ಶಾಸಕರ ಸೆಳೆಯುವ ಕೆಲಸ ಎಲ್ಲೂ ಆಗುತ್ತಿಲ್ಲ. ಯಾವ ಜೆಡಿಎಸ್​ ಶಾಸಕರೂ ಸಹ ಪಕ್ಷ ಬಿಡುವುದಿಲ್ಲ ಎಂದು ತಿಳಿಸಿದರು.

ಒಟ್ಟಿನಲ್ಲಿ ಜೆಡಿಎಸ್ ಹೊಸ ರಾಜ್ಯಾಧ್ಯಕ್ಷ ಆಯ್ಕೆಗೆ ಮುಹೂರ್ತ ಫಿಕ್ಸ್ ಆಗಿದ್ದು, ನಿಖಿಲ್​ಗೆ ಪಟ್ಟ ಕಟ್ಟುವುದು ಗ್ಯಾರಂಟಿಯಾಗಿದೆ.

ಇನ್ನಷ್ಟು ಕರ್ನಾಟಕ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಭಲೇ ಕಳ್ಳರು! ಜಡ್ಜ್ ಮನೆಗೆ ನುಗ್ಗಿ ಕಳ್ಳತನಕ್ಕೆ ಯತ್ನ, ಖದೀಮರ ವಿಡಿಯೋ ನೋಡಿ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಸಿದ್ದರಾಮಯ್ಯ ಮತ್ತು ಶಿವಕುಮಾರ್ ಆಗಮನದ ನಂತರ ಹೆಚ್ಚಿದ ಗಲಾಟೆ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ
ಕಾಂಗ್ರೆಸ್ 2009ರಲ್ಲಿ ಸ್ಪೀಕರ್ ಜೊತೆ ನಡೆದುಕೊಂಡ ರೀತಿ ಗೊತ್ತಿದೆ: ಶಾಸಕ