AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೌಕರರ ಭವಿಷ್ಯ ನಿಧಿ: ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ, ಸಚಿವೆ ಶೋಭಾ ಕರಂದ್ಲಾಜೆ ಭರವಸೆ

ಕರ್ನಾಟಕದ ಪತ್ರಕರ್ತರು ಎದುರಿಸುತ್ತಿರುವ ಪಿಂಚಣಿ ಸಮಸ್ಯೆ ಬಗ್ಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ಶೀಘ್ರ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಅಲ್ಲದೆ, ಅರ್ಜಿಗಳನ್ನು ಶೀಘ್ರ ಇತ್ಯರ್ಥಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಕೆಲವು ಸಂಸ್ಥೆಗಳ ಭವಿಷ್ಯ ನಿಧಿ ಟ್ರಸ್ಟ್‌ಗಳ ತಾಂತ್ರಿಕ ಸಮಸ್ಯೆಗಳನ್ನು ಸಹ ಸರ್ಕಾರ ಪರಿಹರಿಸುವುದಾಗಿ ಅವರು ಆಶ್ವಾಸನೆ ನೀಡಿದ್ದಾರೆ.

ನೌಕರರ ಭವಿಷ್ಯ ನಿಧಿ: ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ, ಸಚಿವೆ ಶೋಭಾ ಕರಂದ್ಲಾಜೆ ಭರವಸೆ
ಶೋಭಾ ಕರಂದ್ಲಾಜೆ ಜತೆ ಪತ್ರಕರ್ತರ ನಿಯೋಗ
ಗಣಪತಿ ಶರ್ಮಾ
|

Updated on: Jun 28, 2025 | 6:40 PM

Share

ಬೆಂಗಳೂರು, ಜೂನ್ 28: ನೌಕರರ ಭವಿಷ್ಯ ನಿಧಿ ಯೋಜನೆ ಅಡಿ ಬರುವ ‘ಹೈಯರ್ ಪೆನ್ಷನ್ ಸ್ಕೀಮ್​​’ನಲ್ಲಿ ಉಂಟಾಗಿರುವ ಸಮಸ್ಯೆಯನ್ನು ಅತಿ ಶೀಘ್ರದಲ್ಲೇ ಪರಿಹಾರ ಮಾಡುವುದಾಗಿ ಕೇಂದ್ರ ಕಾರ್ಮಿಕ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಶನಿವಾರ ತಮ್ಮನ್ನು ಭೇಟಿ ಮಾಡಿದ ಹಿರಿಯ ಪತ್ರಕರ್ತರ ನಿಯೋಗಕ್ಕೆ (Journalists Delegation) ಭರವಸೆ ನೀಡಿದರು. ಕರ್ನಾಟಕದ ಅನೇಕ ಪತ್ರಕರ್ತರು ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಹೈಯರ್ ಪೆನ್ಷನ್ (Pension) ಪಡೆಯುವ ಬಗ್ಗೆ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಗೆ ಅರ್ಜಿ ಸಲ್ಲಿಸಿದ್ದಾರೆ. ಅವು ಅನೇಕ ತಿಂಗಳಿನಿಂದ ಇತ್ಯರ್ಥ ಕಾಣದೆ ಪತ್ರಕರ್ತರು, ಅದರಲ್ಲೂ ನಿವೃತ್ತ ನೌಕರರು ತೀವ್ರ ಆರ್ಥಿಕ ಸಮಸ್ಯೆಗೆ ತುತ್ತಾಗಿರುವ ಸಂಗತಿಯನ್ನು ನಿಯೋಗ ಸಚಿವರ ಗಮನಕ್ಕೆ ತಂದಿತು.

ಅನೇಕ ಪತ್ರಕರ್ತರು ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿಯಿಂದ ಬಂದ ಡಿಮ್ಯಾಂಡ್ ನೋಟ್ ಅನುಸಾರ ಹೆಚ್ಚುವರಿ ಮೊತ್ತವನ್ನು ಜನವರಿ ತಿಂಗಳಲ್ಲೇ ಪಾವತಿ ಮಾಡಿದ್ದಾರೆ, ಇದುವರೆಗೂ ಇದು ಇತ್ಯರ್ಥವಾಗಿಲ್ಲ. ಆರು ತಿಂಗಳಿನಿಂದ ಕಟ್ಟಿದ ದುಡ್ಡಿಗೆ ಬಡ್ಡಿಯೂ ಇಲ್ಲ, ಹೆಚ್ಚಿನ ಪೆನ್ಷನ್ನೂ ಇಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ ಎಂದು ನಿಯೋಗ ವಾಸ್ತವ ಚಿತ್ರಣವನ್ನು ಸಚಿವರ ಮುಂದೆ ತೆರೆದಿಟ್ಟಿತು.

ಈ ಸಮಸ್ಯೆಗೆ ಕೂಡಲೇ ಸ್ಪಂದಿಸಿದ ಸಚಿವೆ ಶೋಭಾ ಕರಂದ್ಲಾಜೆ, ಈಗಾಗಲೇ ಡಿಮಾಂಡ್ ನೋಟ್ ವಿತರಿಸಿ ಹಣ ಕಟ್ಟಿಸಿಕೊಂಡ ಉದ್ಯೋಗಿಗಳ ಅರ್ಜಿಯನ್ನು ಕೂಡಲೇ ಇತ್ಯರ್ಥ ಪಡಿಸಲು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ
Image
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
Image
ಉಡುಪಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲ ಉತ್ಸವಕ್ಕೆ ಸಿದ್ದರಾಮಯ್ಯಗೆ ಆಹ್ವಾನ!
Image
ಈವರೆಗೆ ಯಾರೂ ಮಾಡದ ದಾಖಲೆ ಬರೆಯಲು ಸಿಎಂ ಸಿದ್ದರಾಮಯ್ಯ ಸಿದ್ಧ!
Image
ಮೈಸೂರು ದಸರಾ: ಜನದಟ್ಟಣೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ, ಸಿಎಂ ಸೂಚನೆ

Journalists Letter

ಇನ್ನು ಕೆಲವು ಸಂಸ್ಥೆಗಳ ಭವಿಷ್ಯ ನಿಧಿಯನ್ನು ಆಯಾ ಸಂಸ್ಥೆಗಳ ಟ್ರಸ್ಟ್​​ಗಳೇ ನಡೆಸುತ್ತಿದ್ದು ತಾಂತ್ರಿಕ ಕಾರಣದ ಮೇಲೆ ಇಂಥ ಅರ್ಜಿಗಳು ತಿರಸ್ಕಾರಗೊಂಡಿರುವ ಸಂಗತಿಯನ್ನು ಸಚಿವರ ಗಮನಕ್ಕೆ ತರಲಾಯಿತು. ಈ ವಿಷಯ ಸರ್ಕಾರದ ಮಟ್ಟದಲ್ಲಿ ಈಗಾಗಲೇ ಚರ್ಚೆಯಲ್ಲಿದ್ದು ಅತಿ ಶೀಘ್ರದಲ್ಲೇ ಪರಿಹಾರ ಹುಡುಕುವ ಭರವಸೆ ನೀಡಿದರು.

ಇದನ್ನೂ ಓದಿ: ಉಡುಪಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲ ಉತ್ಸವಕ್ಕೆ ಸಿದ್ದರಾಮಯ್ಯಗೆ ಆಹ್ವಾನ: ಹೋಗುತ್ತಾರಾ ಸಿಎಂ?

ನಿಯೋಗದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಹಿರಿಯ ಪತ್ರಕರ್ತರಾದ, ಶ್ರೀವತ್ಸ ನಾಡಿಗ್, ನೆತ್ತನಕೆರೆ ಉದಯಶಂಕರ, ಎಂ. ನಾಗರಾಜ, ಬಿಎನ್ ರಾಘವೇಂದ್ರ, ವಾದಿರಾಜ ದೇಸಾಯಿ, ಚಂದ್ರಶೇಖರ ಮತ್ತು ಹನುಮೇಶ್ ಕೆ ಯಾವಗಲ್ ಇದ್ದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
‘ಮಹಾಕವಿ’ ಸಿನಿಮಾದಲ್ಲಿ ಪಂಪನ ಪಾತ್ರ ಮಾಡಿದ ಖ್ಯಾತ ನಟ ಕಿಶೋರ್
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಕೊಲೆ ಆರೋಪಿ ದರ್ಶನ್ ಭೇಟಿಗೆ ಆಗಮಿಸಿದ ನಟಿ ರಕ್ಷಿತಾ ಪ್ರೇಮ್, ವಿಜಯಲಕ್ಷ್ಮೀ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ಪ್ರಧಾನಿ ನಿವಾಸದ ಬಳಿ ಧರಣಿ ವೇಳೆ ರಾಹುಲ್ ಗಾಂಧಿ ಪೊಲೀಸ್ ವಶಕ್ಕೆ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
ನನ್ನ ತಂದೆಗೆ ಇಲ್ಲವಾದರೆ ನನಗೆ ಸಚಿವ ಸ್ಥಾನ ನೀಡಿ: ರಾಜೇಂದ್ರ ರಾಜಣ್ಣ
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
‘ಕರಾವಳಿ’ ಸಿನಿಮಾ ಪ್ರೀಮಿಯರ್ ಶೋ ನೋಡಿದವರು ಹೇಳಿದ್ದೇನು?
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಕಬ್ಬಿಣದ ಬಾಗಿಲು ಮುರಿದು ಬಲ್ಡೋಟಾ ಕಾರ್ಖಾನೆ ನುಗ್ಗಿದ ರೈತರು
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಪೂರ್ವ ಮಾಹಿತಿ ಇಲ್ಲದೆ ಶಿವಾಜಿನಗರದಲ್ಲಿ ವ್ಯಾಪಾರಿಗಳ ಅಂಗಡಿ ಧ್ವಂಸ ಆರೋಪ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಆಲಮಟ್ಟಿ ಜಲಾಶಯಕ್ಕೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಭೇಟಿ
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಸೊಳ್ಳೆ ಕಾಟಕ್ಕೆ ಬ್ರೇಕ್, ಡೆಂಘೀಗೆ ಬಂತು ವ್ಯಾಕ್ಸಿನ್!
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ
ಕೊಪ್ಪಳದಲ್ಲಿ ಬಲ್ಡೋಟಾ ಕಾರ್ಖಾನೆ ವಿರುದ್ಧ ಅನ್ನದಾತರ ಆಕ್ರೋಶ