AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

#SaveNandiniKMF: ಅಮೂಲ್ ವಿರುದ್ಧ ಕನ್ನಡಿಗರ ಕಿಡಿ, ಸಾಮಾಜಿಕ ಜಾಲತಾಣದಲ್ಲಿ ಸೇವ್‌ ನಂದಿನಿ ಕೆಎಂಎಫ್‌ ಅಭಿಯಾನ

ನಂದಿನಿ ಹಾಲು, ಮೊಸರನ್ನಲ್ಲದೆ ಬೇರೆ ಬ್ರ್ಯಾಂಡ್​​ ಬಳಸುವುದಿಲ್ಲ. ಈಗ ನಂದಿನಿ ಜಾಗವನ್ನು ಅಮುಲ್‌ ಆಕ್ರಮಿಸಲು ಬರುತ್ತಿದೆ. ನಮ್ಮ ನಂದಿನಿಯನ್ನು ಈಗ ಕನ್ನಡಿಗರಾದ ನಾವೇ ಕಾಪಾಡಿಕೊಳ್ಳಬೇಕು. ನಂದಿನಿಯನ್ನಷ್ಟೇ ಬಳಸೋಣ ಎಂದು ಸಾರ್ವಜನಿಕರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.

#SaveNandiniKMF: ಅಮೂಲ್ ವಿರುದ್ಧ ಕನ್ನಡಿಗರ ಕಿಡಿ, ಸಾಮಾಜಿಕ ಜಾಲತಾಣದಲ್ಲಿ ಸೇವ್‌ ನಂದಿನಿ ಕೆಎಂಎಫ್‌ ಅಭಿಯಾನ
ಸೇವ್​ ನಂದಿನಿ ಕೆಎಂಎಫ್​ ಅಭಿಯಾನ
ವಿವೇಕ ಬಿರಾದಾರ
|

Updated on:Apr 08, 2023 | 2:19 PM

Share

ಬೆಂಗಳೂರು: ಗುಜರಾತ್​​ನ (Gujarat) ಅಮುಲ್​ (Amul) ಮತ್ತು ಕರುನಾಡಿನ ಕೆಎಂಎಫ್​ (KMF) ನಂದಿನಿ ಹಾಲು (Nandini Milk) ಒಕ್ಕೂಟ ವಿಚಾರವಾಗಿ ರಾಜ್ಯದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದೆ. ಬಿಜೆಪಿಯವರು (BJP) ನಂದಿನಿಯನ್ನು ಅಮುಲ್​ನಲ್ಲಿ, ​​ವಿಲೀನ ಮಾಡಲು ಮುಂದಾಗಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ (Congress)​ ನಾಯಕರು ಆರೋಪ ಮಾಡುತ್ತಿದ್ದಾರೆ. ಇನ್ನು ರಾಜ್ಯದಲ್ಲಿ ಅಮುಲ್​ ಕಂಪನಿಯ ಐಸ್​​ಕ್ರೀಂ ಸೇರಿದಂತೆ ಹಲವು ಉತ್ಪನ್ನಗಳು ಮಾರಾಟವಾಗುತ್ತಿವೆ. ಇದರ ಜೊತೆಗೆ ಈಗ ಅಮುಲ್​ ಮೊಸರು ಮತ್ತು ಹಾಲನ್ನು ಮಾರಾಟ ಮಾಡಲು ಮುಂದಾಗಿದ್ದು, ಇದನ್ನು ವಿರೋಧಿಸಿ ಸಾಮಾಜಿ ಜಾಲತಾಣದಲ್ಲಿ (Social Media) ಸಾರ್ವಜನಿಕರು ಅಭಿಯಾನ ಆರಂಭಿಸಿದ್ದಾರೆ. #SaveNandiKMF ಎಂದು ನಂದಿನಿ ಹಾಲು, ಮೊಸರನ್ನಲ್ಲದೆ ಬೇರೆ ಬ್ರ್ಯಾಂಡ್​​ ಬಳಸುವುದಿಲ್ಲ. ಕೆಎಂಎಫ್​​​ ಉತ್ಪನ್ನ ಬಳಸೋಣ ಎಂದು ಶಪಥಗೈಯುತ್ತಿದ್ದಾರೆ.

ಈಗ ನಂದಿನಿ ಜಾಗವನ್ನು ಅಮುಲ್‌ ಆಕ್ರಮಿಸಲು ಬರುತ್ತಿದೆ. ನಮ್ಮ ನಂದಿನಿಯನ್ನು ಈಗ ಕನ್ನಡಿಗರಾದ ನಾವೇ ಕಾಪಾಡಿಕೊಳ್ಳಬೇಕು. ನಂದಿನಿಯನ್ನಷ್ಟೇ ಬಳಸೋಣ ಎಂದು ಸೋಷಿಯಲ್ ಮೀಡಿಯಾದಲ್ಲಿ ಜನರು ಕರೆ ನೀಡುತ್ತಿದ್ದಾರೆ.

ಇದನ್ನೂ ಓದಿ: ನಂದಿನಿ ರಾಷ್ಟ್ರ ಮಟ್ಟದ ಬ್ರ್ಯಾಂಡ್​, ಕಾಂಗ್ರೆಸ್​ನಿಂದ ಅಮುಲ್ ವಿಚಾರದಲ್ಲಿ ರಾಜಕೀಯ; ಸಿಎಂ ಬೊಮ್ಮಾಯಿ

ಗುಜರಾತ್‌ನ ಅಮುಲ್‌ಗೆ, ಕೆಎಂಎಫ್​ ವಿಲೀನ ಮಾಡಲು ಷಡ್ಯಂತ್ರ ನಡೆಯುತ್ತಿದೆ

“ಗುಜರಾತ್‌ನ ಅಮುಲ್‌ಗೆ, ಕೆಎಂಎಫ್​ ವಿಲೀನ ಮಾಡಲು ಷಡ್ಯಂತ್ರ ನಡೆಯುತ್ತಿದೆ. ಬಿಜೆಪಿಯ ಷಡ್ಯಂತ್ರ ಈಗ ಸ್ಪಷ್ಟವಾಗಿದೆ. ಅಮುಲ್​ನಲ್ಲಿ ಕೆಎಂಎಫ್​ ವಿಲೀನ ಮಾಡಲಾಗುತ್ತೆದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ನೀಡಿದ್ದರು. ಈಗ ಅಮಿತ್ ಶಾ ಹೇಳಿಕೆಯನ್ನು ಶೋಭಾ ಕರಂದ್ಲಾಜೆ ಬೆಂಬಲಿಸಿದ್ದಾರೆ. ನಂದಿನಿ ಇಳಿಕೆ, ಅಮುಲ್​ ಗಳಿಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸರ್ಕಾರ ಮೂಕ ಬಸವ. ನಂದಿನಿ ಉಳಿಸಿ, ಬಿಜೆಪಿ ಓಡಿಸಿ” ಎಂದು ಟ್ವೀಟ್ ಮೂಲಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ​ ರಣದೀಪ್ ಸಿಂಗ್ ಸುರ್ಜೇವಾಲ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡಿಗರ ಜೀವನಾಡಿ ಕೆಎಂಎಫ್​ ಮುಗಿಸಲು 3ನೇ ಸಂಚು ನಡೆದಿದೆ

ರಾಜ್ಯದಲ್ಲಿ ಗುಜರಾತ್​ನ ಅಮುಲ್​ ಉತ್ಪನ್ನಗಳ ಮಾರಾಟ ವಿಚಾರವಾಗಿ ಟ್ವಿಟರ್​ ಮೂಲಕ ಬಿಜೆಪಿ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್​​.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. “ಕನ್ನಡಿಗರ ಜೀವನಾಡಿ ಕೆಎಂಎಫ್​ ಮುಗಿಸಲು 3ನೇ ಸಂಚು ನಡೆದಿದೆ. ಮೊದಲನೇ ಸಂಚು ಅಮುಲ್ ಜತೆ ಕೆಎಂಎಫ್​ ವಿಲೀನ. ಅಮುಲ್ ಜತೆ ಕೆಎಂಎಫ್​ ವಿಲೀನ ಎಂದು ಅಮಿತ್ ಶಾ ಹೇಳಿದ್ದರು. 2ನೇ ಸಂಚು ಮೊಸರಿನ ಪಾಕೆಟ್​ ಮೇಲೆ ಹಿಂದಿಯ ‘ದಹಿ’ ಪದ ಮುದ್ರಣ. ಕನ್ನಡಿಗರ ತೀವ್ರ ವಿರೋಧದಿಂದ ಎರಡೂ ಸಂಚು ವಿಫಲವಾಗಿದೆ” ಎಂದು ಟ್ವೀಟ್​ ಮಾಡಿದ್ದಾರೆ.

3ನೇ ಸಂಚು ಸಫಲಗೊಳಿಸಲು ಅಮುಲ್ ಮೂಲಕ ಕೇಂದ್ರ ಹೊರಟಿದೆ. ಕೆಎಂಎಫ್​​ಗೆ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ. ‘ಒಂದು ದೇಶ, ಒಂದು ಅಮುಲ್, ಒಂದೇ ಹಾಲು, ಒಂದೇ ಗುಜರಾತ್’ ಇದು ಕೇಂದ್ರ ಸರ್ಕಾರದ ಅಧಿಕೃತ ನೀತಿಯಂತಿದೆ. ಅದಕ್ಕೆ ಅಮುಲ್​​ಗೆ ಒತ್ತಾಸೆಯಾಗಿ ನಿಂತು ಕೆಎಂಎಫ್​​ ಕತ್ತು ಹಿಚುಕುತ್ತಿದೆ. ಈಗ ಅಮುಲ್ ಹಿಂಬಾಗಿಲ ಮೂಲಕ ಒಳನುಗ್ಗುತ್ತಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:50 am, Sat, 8 April 23

ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ