AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಇಎ ಸೀಟ್​ ಬ್ಲಾಕಿಂಗ್​ ಹಗರಣ: 10 ಆರೋಪಿಗಳ ಬಂಧನ

ಬೆಂಗಳೂರಿನ ಮಲ್ಲೇಶ್ವರಂ ಪೊಲೀಸರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸೀಟ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ 10 ಜನರನ್ನು ಬಂಧಿಸಿದ್ದಾರೆ. ಹಗರಣದಲ್ಲಿ ಭಾಗಿಯಾದವರು ಕೆಇಎ ನೌಕರರ ಸಹಾಯದಿಂದ ಪಾಸ್‌ವರ್ಡ್ ಪಡೆದು ಸೀಟ್‌ಗಳನ್ನು ಬ್ಲಾಕ್ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಗರಣದಲ್ಲಿ ಪ್ರತಿಷ್ಠಿತ ಕಾಲೇಜುಗಳ ಭಾಗಿಯಾಗಿರುವ ಶಂಕೆ ಇದೆ.

ಕೆಇಎ ಸೀಟ್​ ಬ್ಲಾಕಿಂಗ್​ ಹಗರಣ: 10 ಆರೋಪಿಗಳ ಬಂಧನ
ಕೆಇಎ
Jagadisha B
| Edited By: |

Updated on:Dec 03, 2024 | 4:41 PM

Share

ಬೆಂಗಳೂರು, ಡಿಸೆಂಬರ್​ 03: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಸೀಟ್​ ಬ್ಲಾಕಿಂಗ್ ಹಗರಣಕ್ಕೆ (Seat blocking Scam) ಸಂಬಂಧಿಸಿದಂತೆ 10 ಆರೋಪಿಗಳನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಗರಣದ ಕಿಂಗ್​ಪಿನ್ ಹರ್ಷ, ರವಿಶಂಕರ್, ಪುನೀತ್, ಶಶಿಕುಮಾರ್, ಪುರುಷೋತ್ತಮ್​, ಪ್ರಕಾಶ್, ಅವಿನಾಶ್ ಸೇರಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೆಇಎನಲ್ಲಿ ಕೌನ್ಸೆಲಿಂಗ್​ಗೆ ಆಯ್ಕೆಯಾಗಿ ಕಾಲೇಜು ಸೆಲೆಕ್ಟ್ ಮಾಡಿಕೊಳ್ಳದವರ ಸೀಟ್​ಗಳು ಹಾಗೂ ಸರ್ಕಾರದ ಅಡಿಯಲ್ಲಿ ಖಾಸಗಿ ಕಾಲೇಜಿನಲ್ಲಿ ಸೀಟ್ ಪಡೆದು, ದಾಖಲಾತಿ ಪಡೆಯದ ವಿದ್ಯಾರ್ಥಿಗಳ ಸೀಟ್​ಗಳನ್ನು ಗ್ಯಾಂಗ್ ಬ್ಲಾಕ್ ಮಾಡುತಿತ್ತು. ಆರೋಪಿಗಳು ಕೆಇಎ ನೌಕರ ಅವಿನಾಶ್​ ಎಂಬುವರ ಸಹಾಯದಿಂದ ಪಾಸ್‌ವರ್ಡ್ ಪಡೆದು ಸೀಟ್ ಬ್ಲಾಕಿಂಗ್ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಪಿಎಸ್​ಐ ನೇಮಕಾತಿ ಪರೀಕ್ಷೆ: ತಪ್ಪು ಪ್ರಶ್ನೆಗಳನ್ನು ನೀಡಿ ಅದರಿಂದಲೂ ಸಾವಿರಾರು ರೂ. ಸುಲಿಗೆಗೆ ಮುಂದಾದ ಕೆಇಎ

ನಂತರ ಲಕ್ಷಾಂತರ ರೂಪಾಯಿಗೆ ಮ್ಯಾನೇಜ್ ಮೆಂಟ್ ಕೋಟಾದಡಿ ಮಧ್ಯವರ್ತಿಗಳ ಸಹಾಯದಿಂದ ಡೀಲ್ ಮಾಡುತ್ತಿದ್ದರು. ಈ ಡೀಲ್​ನಲ್ಲಿ ಪ್ರತಿಷ್ಠಿತ ಕಾಲೇಜುಗಳ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಹಗರಣ ಸಂಬಂಧ ಕೆಇಎ ಆಡಳಿತಾಧಿಕಾರಿ ಇಸಾಲುದ್ದೀನ್ ಜೆ ಗಾಡಿಯಲ್ ನವೆಂಬರ್ 13ರಂದು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಾಗುತಿದ್ದಂತೆ ಆರೋಪಿ ಪ್ರಕಾಶ್ ತನ್ನ ಲ್ಯಾಪ್​ ಟಾಪ್​ಗಳನ್ನು ಕಡೂರಿನ ತನ್ನ ಜಮೀನಿನಲ್ಲಿ ಸುಟ್ಟು ಹಾಕಿದ್ದನು. ಮಲ್ಲೇಶ್ವರಂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:10 am, Tue, 3 December 24

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ