AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಇಎ ಸೀಟ್​ ಬ್ಲಾಕಿಂಗ್​ ಹಗರಣ: 10 ಆರೋಪಿಗಳ ಬಂಧನ

ಬೆಂಗಳೂರಿನ ಮಲ್ಲೇಶ್ವರಂ ಪೊಲೀಸರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸೀಟ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ 10 ಜನರನ್ನು ಬಂಧಿಸಿದ್ದಾರೆ. ಹಗರಣದಲ್ಲಿ ಭಾಗಿಯಾದವರು ಕೆಇಎ ನೌಕರರ ಸಹಾಯದಿಂದ ಪಾಸ್‌ವರ್ಡ್ ಪಡೆದು ಸೀಟ್‌ಗಳನ್ನು ಬ್ಲಾಕ್ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಗರಣದಲ್ಲಿ ಪ್ರತಿಷ್ಠಿತ ಕಾಲೇಜುಗಳ ಭಾಗಿಯಾಗಿರುವ ಶಂಕೆ ಇದೆ.

ಕೆಇಎ ಸೀಟ್​ ಬ್ಲಾಕಿಂಗ್​ ಹಗರಣ: 10 ಆರೋಪಿಗಳ ಬಂಧನ
ಕೆಇಎ
Jagadisha B
| Edited By: |

Updated on:Dec 03, 2024 | 4:41 PM

Share

ಬೆಂಗಳೂರು, ಡಿಸೆಂಬರ್​ 03: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಸೀಟ್​ ಬ್ಲಾಕಿಂಗ್ ಹಗರಣಕ್ಕೆ (Seat blocking Scam) ಸಂಬಂಧಿಸಿದಂತೆ 10 ಆರೋಪಿಗಳನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಗರಣದ ಕಿಂಗ್​ಪಿನ್ ಹರ್ಷ, ರವಿಶಂಕರ್, ಪುನೀತ್, ಶಶಿಕುಮಾರ್, ಪುರುಷೋತ್ತಮ್​, ಪ್ರಕಾಶ್, ಅವಿನಾಶ್ ಸೇರಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೆಇಎನಲ್ಲಿ ಕೌನ್ಸೆಲಿಂಗ್​ಗೆ ಆಯ್ಕೆಯಾಗಿ ಕಾಲೇಜು ಸೆಲೆಕ್ಟ್ ಮಾಡಿಕೊಳ್ಳದವರ ಸೀಟ್​ಗಳು ಹಾಗೂ ಸರ್ಕಾರದ ಅಡಿಯಲ್ಲಿ ಖಾಸಗಿ ಕಾಲೇಜಿನಲ್ಲಿ ಸೀಟ್ ಪಡೆದು, ದಾಖಲಾತಿ ಪಡೆಯದ ವಿದ್ಯಾರ್ಥಿಗಳ ಸೀಟ್​ಗಳನ್ನು ಗ್ಯಾಂಗ್ ಬ್ಲಾಕ್ ಮಾಡುತಿತ್ತು. ಆರೋಪಿಗಳು ಕೆಇಎ ನೌಕರ ಅವಿನಾಶ್​ ಎಂಬುವರ ಸಹಾಯದಿಂದ ಪಾಸ್‌ವರ್ಡ್ ಪಡೆದು ಸೀಟ್ ಬ್ಲಾಕಿಂಗ್ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಪಿಎಸ್​ಐ ನೇಮಕಾತಿ ಪರೀಕ್ಷೆ: ತಪ್ಪು ಪ್ರಶ್ನೆಗಳನ್ನು ನೀಡಿ ಅದರಿಂದಲೂ ಸಾವಿರಾರು ರೂ. ಸುಲಿಗೆಗೆ ಮುಂದಾದ ಕೆಇಎ

ನಂತರ ಲಕ್ಷಾಂತರ ರೂಪಾಯಿಗೆ ಮ್ಯಾನೇಜ್ ಮೆಂಟ್ ಕೋಟಾದಡಿ ಮಧ್ಯವರ್ತಿಗಳ ಸಹಾಯದಿಂದ ಡೀಲ್ ಮಾಡುತ್ತಿದ್ದರು. ಈ ಡೀಲ್​ನಲ್ಲಿ ಪ್ರತಿಷ್ಠಿತ ಕಾಲೇಜುಗಳ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಹಗರಣ ಸಂಬಂಧ ಕೆಇಎ ಆಡಳಿತಾಧಿಕಾರಿ ಇಸಾಲುದ್ದೀನ್ ಜೆ ಗಾಡಿಯಲ್ ನವೆಂಬರ್ 13ರಂದು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಾಗುತಿದ್ದಂತೆ ಆರೋಪಿ ಪ್ರಕಾಶ್ ತನ್ನ ಲ್ಯಾಪ್​ ಟಾಪ್​ಗಳನ್ನು ಕಡೂರಿನ ತನ್ನ ಜಮೀನಿನಲ್ಲಿ ಸುಟ್ಟು ಹಾಕಿದ್ದನು. ಮಲ್ಲೇಶ್ವರಂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:10 am, Tue, 3 December 24

Follow Us
Jagadisha B
Jagadisha B

ಜಗದೀಶ್​ ಬಸವರಾಜು ಟಿವಿ9 ಕನ್ನಡದ ವರದಿಗಾರರಲ್ಲಿ ಒಬ್ಬರು. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ