AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಇಎ ಸೀಟ್​ ಬ್ಲಾಕಿಂಗ್​ ಹಗರಣ: 10 ಆರೋಪಿಗಳ ಬಂಧನ

ಬೆಂಗಳೂರಿನ ಮಲ್ಲೇಶ್ವರಂ ಪೊಲೀಸರು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸೀಟ್ ಬ್ಲಾಕಿಂಗ್ ಹಗರಣಕ್ಕೆ ಸಂಬಂಧಿಸಿದಂತೆ 10 ಜನರನ್ನು ಬಂಧಿಸಿದ್ದಾರೆ. ಹಗರಣದಲ್ಲಿ ಭಾಗಿಯಾದವರು ಕೆಇಎ ನೌಕರರ ಸಹಾಯದಿಂದ ಪಾಸ್‌ವರ್ಡ್ ಪಡೆದು ಸೀಟ್‌ಗಳನ್ನು ಬ್ಲಾಕ್ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಈ ಹಗರಣದಲ್ಲಿ ಪ್ರತಿಷ್ಠಿತ ಕಾಲೇಜುಗಳ ಭಾಗಿಯಾಗಿರುವ ಶಂಕೆ ಇದೆ.

ಕೆಇಎ ಸೀಟ್​ ಬ್ಲಾಕಿಂಗ್​ ಹಗರಣ: 10 ಆರೋಪಿಗಳ ಬಂಧನ
ಕೆಇಎ
ಜಗದೀಶ ಬಿ.
| Edited By: ವಿವೇಕ ಬಿರಾದಾರ|

Updated on:Dec 03, 2024 | 4:41 PM

Share

ಬೆಂಗಳೂರು, ಡಿಸೆಂಬರ್​ 03: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಸೀಟ್​ ಬ್ಲಾಕಿಂಗ್ ಹಗರಣಕ್ಕೆ (Seat blocking Scam) ಸಂಬಂಧಿಸಿದಂತೆ 10 ಆರೋಪಿಗಳನ್ನು ಮಲ್ಲೇಶ್ವರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಗರಣದ ಕಿಂಗ್​ಪಿನ್ ಹರ್ಷ, ರವಿಶಂಕರ್, ಪುನೀತ್, ಶಶಿಕುಮಾರ್, ಪುರುಷೋತ್ತಮ್​, ಪ್ರಕಾಶ್, ಅವಿನಾಶ್ ಸೇರಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೆಇಎನಲ್ಲಿ ಕೌನ್ಸೆಲಿಂಗ್​ಗೆ ಆಯ್ಕೆಯಾಗಿ ಕಾಲೇಜು ಸೆಲೆಕ್ಟ್ ಮಾಡಿಕೊಳ್ಳದವರ ಸೀಟ್​ಗಳು ಹಾಗೂ ಸರ್ಕಾರದ ಅಡಿಯಲ್ಲಿ ಖಾಸಗಿ ಕಾಲೇಜಿನಲ್ಲಿ ಸೀಟ್ ಪಡೆದು, ದಾಖಲಾತಿ ಪಡೆಯದ ವಿದ್ಯಾರ್ಥಿಗಳ ಸೀಟ್​ಗಳನ್ನು ಗ್ಯಾಂಗ್ ಬ್ಲಾಕ್ ಮಾಡುತಿತ್ತು. ಆರೋಪಿಗಳು ಕೆಇಎ ನೌಕರ ಅವಿನಾಶ್​ ಎಂಬುವರ ಸಹಾಯದಿಂದ ಪಾಸ್‌ವರ್ಡ್ ಪಡೆದು ಸೀಟ್ ಬ್ಲಾಕಿಂಗ್ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಪಿಎಸ್​ಐ ನೇಮಕಾತಿ ಪರೀಕ್ಷೆ: ತಪ್ಪು ಪ್ರಶ್ನೆಗಳನ್ನು ನೀಡಿ ಅದರಿಂದಲೂ ಸಾವಿರಾರು ರೂ. ಸುಲಿಗೆಗೆ ಮುಂದಾದ ಕೆಇಎ

ನಂತರ ಲಕ್ಷಾಂತರ ರೂಪಾಯಿಗೆ ಮ್ಯಾನೇಜ್ ಮೆಂಟ್ ಕೋಟಾದಡಿ ಮಧ್ಯವರ್ತಿಗಳ ಸಹಾಯದಿಂದ ಡೀಲ್ ಮಾಡುತ್ತಿದ್ದರು. ಈ ಡೀಲ್​ನಲ್ಲಿ ಪ್ರತಿಷ್ಠಿತ ಕಾಲೇಜುಗಳ ಭಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಹಗರಣ ಸಂಬಂಧ ಕೆಇಎ ಆಡಳಿತಾಧಿಕಾರಿ ಇಸಾಲುದ್ದೀನ್ ಜೆ ಗಾಡಿಯಲ್ ನವೆಂಬರ್ 13ರಂದು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಾಗುತಿದ್ದಂತೆ ಆರೋಪಿ ಪ್ರಕಾಶ್ ತನ್ನ ಲ್ಯಾಪ್​ ಟಾಪ್​ಗಳನ್ನು ಕಡೂರಿನ ತನ್ನ ಜಮೀನಿನಲ್ಲಿ ಸುಟ್ಟು ಹಾಕಿದ್ದನು. ಮಲ್ಲೇಶ್ವರಂ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:10 am, Tue, 3 December 24

Follow Us
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಸಾರ್ವಜನಿಕ ಸ್ಥಳದಲ್ಲಿ ಅನುಮತಿ ಪಡೆದೇ ಕಾರ್ಯಕ್ರಮ ಮಾಡ್ಬೇಕು: ಸಿಎಂ
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಕರ್ನಾಟಕದಲ್ಲಿ ಗುಟ್ಕಾ ಬ್ಯಾನ್ ಬಗ್ಗೆ ಸಚಿವ ಯುಟಿ ಖಾದರ್ ಹೇಳಿದ್ದಿಷ್ಟು
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ
ಉತ್ತರಾಖಂಡದ ಚಮೋಲಿಯಲ್ಲಿ ಟನಲ್ ಕುಸಿತ; 16 ಕಾರ್ಮಿಕರ ರಕ್ಷಣೆ
‘ಲವ್ ಯೂ ಗಿಲ್ಲಿ’ ಚಿತ್ರ ಸೆಟ್ಟೇರುವುದು ತಡ ಆಗಿದ್ದು ಏಕೆ? ಇಲ್ಲಿದೆ ಉತ್ತರ
‘ಲವ್ ಯೂ ಗಿಲ್ಲಿ’ ಚಿತ್ರ ಸೆಟ್ಟೇರುವುದು ತಡ ಆಗಿದ್ದು ಏಕೆ? ಇಲ್ಲಿದೆ ಉತ್ತರ
‘ಅಯೋಗ್ಯ 2’ ಸಿನಿಮಾ ನೋಡಿ ಮೆಚ್ಚಿ ಮಾತನಾಡಿದ ನಟ ಶರಣ್
‘ಅಯೋಗ್ಯ 2’ ಸಿನಿಮಾ ನೋಡಿ ಮೆಚ್ಚಿ ಮಾತನಾಡಿದ ನಟ ಶರಣ್
ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಕಾರಣವೇನು?
ಕರ್ನಾಟಕದಲ್ಲಿ ಗುಟ್ಕಾ-ತಂಬಾಕು ಬ್ಯಾನ್ ಗೆ ವಿರೋಧ: ಕಾರಣವೇನು?
ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ: ಜಿರಳೆ-ಫಂಗಸ್ ಪತ್ತೆ
ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ: ಜಿರಳೆ-ಫಂಗಸ್ ಪತ್ತೆ
ಬೀದಿಗಿಳಿದು ರೈತರ ಹೋರಾಟಕ್ಕೆ ಕೈಜೋಡಿಸಿದ ವಿದ್ಯಾರ್ಥಿ ಪಡೆ
ಬೀದಿಗಿಳಿದು ರೈತರ ಹೋರಾಟಕ್ಕೆ ಕೈಜೋಡಿಸಿದ ವಿದ್ಯಾರ್ಥಿ ಪಡೆ
‘ಬಿಗ್ ಬಾಸ್ ಅಗ್ನಿಪರೀಕ್ಷೆ’; 72 ವರ್ಷದ ರತ್ನ ಹಾಗೂ 20 ವರ್ಷ ಕುಮಾರಿ ಪಾಸ್
‘ಬಿಗ್ ಬಾಸ್ ಅಗ್ನಿಪರೀಕ್ಷೆ’; 72 ವರ್ಷದ ರತ್ನ ಹಾಗೂ 20 ವರ್ಷ ಕುಮಾರಿ ಪಾಸ್
ವಿಧಾನ ಪರಿಷತ್​​ ಸಭಾ ನಾಯಕರಾಗಿ ಯತೀಂದ್ರ ಹೆಸರು ಅಧಿಕೃತ ಘೋಷಣೆ
ವಿಧಾನ ಪರಿಷತ್​​ ಸಭಾ ನಾಯಕರಾಗಿ ಯತೀಂದ್ರ ಹೆಸರು ಅಧಿಕೃತ ಘೋಷಣೆ