AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wistron iPhone plant violence ತಪ್ಪು ಎರಡು ಕಡೆಯಿಂದಲೂ ಆಗಿದೆ, ಆದರೆ ಯಾರದೇ ಉದ್ಯೋಗಕ್ಕೂ ಚ್ಯುತಿ ಇಲ್ಲ

ಇತ್ತ ಕರ್ನಾಟಕದ ಇಮೇಜ್ ಕೂಡ ಕೆಡಬಾರದು. ಹಾಗಂತ ಕಾರ್ಮಿಕರಿಗೆ ಕೂಡ ಅನ್ಯಾಯವಾಗಬಾರದು ಎಂಬ ದೃಷ್ಟಿಯಿಟ್ಟುಕೊಂಡು ಕರ್ನಾಟಕ ಕಾರ್ಮಿಕ ಇಲಾಖೆ ವಿಸ್ಟ್ರಾನ್ ಕಂಪೆನಿಯ ಫ್ಯಾಕ್ಟರಿಯಲ್ಲಿ ನಡೆದ ಹಿಂಸಾಚಾರಕ್ಕೆ ಒಂದು ಖಾಯಂ ಸೂತ್ರ ಕಂಡುಹಿಡಿಯಲು ಮುಂದಾಗಿದೆ.

Wistron iPhone plant violence ತಪ್ಪು ಎರಡು ಕಡೆಯಿಂದಲೂ ಆಗಿದೆ, ಆದರೆ ಯಾರದೇ ಉದ್ಯೋಗಕ್ಕೂ ಚ್ಯುತಿ ಇಲ್ಲ
Wistron iPhone plant violence ತಪ್ಪು ಎರಡು ಕಡೆಯಿಂದಲೂ ಆಗಿದೆ, ಆದರೆ ಯಾರದೇ ಉದ್ಯೋಗಕ್ಕೂ ಚ್ಯುತಿ ಇಲ್ಲ
Follow us
ಡಾ. ಭಾಸ್ಕರ ಹೆಗಡೆ
|

Updated on:Dec 21, 2020 | 3:39 PM

ಬೆಂಗಳೂರು: ಕೋಲಾರದ ನರಸಾಪುರದಲ್ಲಿರುವ ವಿಸ್ಟ್ರಾನ್ ಇನ್​ಫೊಕಾಂನ iPhone ಉತ್ಪಾದನಾ ಘಟಕದಲ್ಲಿ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಮಿಕ ಇಲಾಖೆ ನಡೆಸಿದ ತನಿಖೆ ಮುಗಿದಿದ್ದು, ಸರ್ಕಾರಕ್ಕೆ ಸಲ್ಲಿಸಿರುವ ವರದಿ ಪ್ರಕಾರ, ಕೆಲವು ಕಾರ್ಮಿಕರು ಮತ್ತು ಗುತ್ತಿಗೆ ಆಧಾರಿತ ಕಾರ್ಮಿಕರನ್ನು ತಂದ ಗುತ್ತಿಗೆದಾರ ಇಬ್ಬರೂ ತಪ್ಪು ಮಾಡಿದ್ದಾರೆ. ಇದರಿಂದಾಗಿ ಅಲ್ಲಿ ಹಿಂಸಾಚಾರವಾಗಿ ರೂ. 25 ಕೋಟಿಗೂ ಹೆಚ್ಚಿನ ಹಾನಿ ಸಂಭವಿಸಿದೆ.

ಕಾರ್ಮಿಕ ಇಲಾಖೆ ಬರೀ ಕಾರ್ಮಿಕರ ವಿಚಾರವನ್ನಿಟ್ಟುಕೊಂಡು ತನಿಖೆ ನಡೆಸಿದೆ ಮತ್ತು ಇದಕ್ಕೂ ಪೊಲೀಸ್ ತನಿಖೆಗೂ ಯಾವ ಸಂಬಂಧವೂ ಇಲ್ಲ. ಕಾರ್ಮಿಕ ಇಲಾಖೆ ವರದಿ ಪ್ರಕಾರ, ಕಾರ್ಖಾನೆಯ ಸ್ಥಳೀಯ ಮುಖ್ಯಸ್ಥರದ್ದು ಯಾವ ತಪ್ಪೂ ಇರಲಿಲ್ಲ.

ಕಾರ್ಮಿಕ ಇಲಾಖೆಯ ಮೂಲಗಳ ಪ್ರಕಾರ, ಇಲಾಖೆಯು ಕಾರ್ಮಿಕರು ಮತ್ತು ಸ್ಥಳೀಯ ಮಾಲೀಕರ ನಡುವೆ ಮಾತುಕತೆ ನಡೆಸಲು ಅನುವು ಮಾಡಿಕೊಟ್ಟಿದ್ದು ಅದು ಈಗ ಫಲ ನೀಡುವ ಹಂತಕ್ಕೆ ಬಂದಿದೆ. ಆ ಪ್ರಕಾರ, ಸ್ಥಳೀಯ ಮಾಲೀಕರು ಯಾವ ಉದ್ಯೋಗಿಯನ್ನು ಕೆಲಸದಿಂದ ತೆಗೆದು ಹಾಕದಂತೆ ಮನವೊಲಿಸಲಾಗಿದೆ ಮತ್ತು ಕಾರ್ಮಿಕರಿಗೆ ಬಾಕಿ ಇರುವ ಹಣವನ್ನು ಆದಷ್ಟು ಬೇಗನೇ ನೀಡಲು ಒಪ್ಪಿಸಲಾಗಿದೆ.

ಪ್ರಾಯಶಃ ಇನ್ನು ಮೂರು ಅಥವಾ ನಾಲ್ಕು ದಿನಗಳಲ್ಲಿ ಈ ಎಲ್ಲಾ ವಿಚಾರಕ್ಕೆ ಸಂಬಂಧಿಸಿದಂತೆ, ಎರಡು ಕಡೆಯವರು ಒಂದು ಒಪ್ಪಂದಕ್ಕೆ ಬರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆ ಪ್ರಕಾರ, ಇನ್ನು ಮುಂದೆ ಎಲ್ಲ ಕಾರ್ಮಿಕರನ್ನು ಕಂಪೆನಿ ನೇರವಾಗಿ ಉದ್ಯೋಗಕ್ಕೆ ತೆಗೆದುಕೊಳ್ಳಲಿದೆ. ಮತ್ತು ಇಷ್ಟು ದಿನ ಯಾವ ಗುತ್ತಿಗೆದಾರ ಸಂಸ್ಥೆ ಈ ಕಾರ್ಮಿಕರನ್ನು ಪೂರೈಸುತ್ತಿತ್ತೋ, ಅದನ್ನು ಆ ಜವಾಬ್ದಾರಿಯಿಂದ ತೆಗೆದು ಹಾಕಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮತ್ತು ಬಾಕಿ ಇರುವ ವೇತನ ಮತ್ತು ಇನ್ನಿತರೆ ಸೌಲಭ್ಯವನ್ನು ಆದಷ್ಟು ಬೇಗ ನೀಡಲು ನಿರ್ಧರಿಸಲಾಗಿದೆ. ಇನ್ನು ಮುಂದೆ ಕಾರ್ಮಿಕರನ್ನು ತೆಗೆದುಕೊಳ್ಳುವಾಗ ಅವರನ್ನು ಗುತ್ತಿಗೆ ಆಧಾರಿತವಾಗಿ ತೆಗೆದುಕೊಳ್ಳಬೇಕೋ? ಆಥವಾ ಖಾಯಂ ಉದ್ಯೋಗಿಯಾಗಿ ತೆಗೆದುಕೊಳ್ಳಬೇಕೋ ಎಂಬ ವಿಚಾರ ಮಾತ್ರ ಇನ್ನೂ ನಿರ್ಣಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಆದರೆ, ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ ಕಾರ್ಮಿಕ ಇಲಾಖೆ ಯಾವ ಹಸ್ತಕ್ಷೇಪವನ್ನೂ ಮಾಡುವುದಿಲ್ಲ. ಯಾರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆಯೋ ಅದನ್ನು ಹಿಂತೆಗೆದುಕೊಳ್ಳುವ ಕುರಿತಾಗಿ ಕಾರ್ಮಿಕ ಇಲಾಖೆಯು ಪೊಲೀಸ್ ತನಿಖೆಯಲ್ಲಿ ಮೂಗು ತೂರಿಸುವುದಿಲ್ಲ ಎಂದೂ ಮೂಲಗಳು ಹೇಳಿವೆ.

Published On - 3:30 pm, Mon, 21 December 20

ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಪಾತ್ರೆ ತೊಳೆಯುತ್ತಿದ್ದ ಗಂಡನಿಗೆ ಒದ್ದು ಹಿಂಸೆ ಕೊಟ್ಟ ಪತ್ನಿ
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ಫೀನಿಕ್ಸ್ ಸಿನಿಮಾ ಶೂಟಿಂಗ್ ವೇಳೆ ಅವಘಡ; ಪ್ರಾಣಾಪಾಯದಿಂದ ಪಾರಾದ ನಟ ಭಾಸ್ಕರ್
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ವಯನಾಡು: ಪ್ರಿಯಾಂಕಾ ಗಾಂಧಿಯಿಂದ ಉದ್ಘಾಟಗೊಳ್ಳುವ ಹೊತ್ತಲ್ಲೇ ಬಿದ್ದ ನಾಮಫಲಕ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಮಳೆಯಲ್ಲೂ ಹುಲಿರಾಯ ಕೆರೆಯಲ್ಲಿ ಸ್ವಿಮ್ಮಿಂಗ್: ಅಪರೂಪದ ವಿಡಿಯೋ ನೋಡಿ
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ಕಾಶಿ ವಿಶ್ವನಾಥ ದೇವಾಲಯದ ನಿರ್ಬಂಧಿತ ಪ್ರದೇಶದಲ್ಲಿ ತೇಜ್​ಪ್ರತಾಪ್ ಯಾದವ್
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ದೇವಿಮನೆ ಘಟ್ಟದಲ್ಲಿ ಮತ್ತೆ ಗುಡ್ಡ ಕುಸಿತ:ಕುಮಟಾ-ಶಿರಸಿ ಸಂಪರ್ಕ ಕಡಿತ!
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಬರೋಬ್ಬರಿ 11 ಸಿಕ್ಸ್​: IPLನಲ್ಲಿ ಅಟ್ಟರ್ ಫ್ಲಾಸ್, MLCಯಲ್ಲಿ ಸಿಡಿಲಬ್ಬರ
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿತ, ಎದೆನಡುಗಿಸುತ್ತೆ ಭಯಾನಕ ದೃಶ್ಯ!
ಮಡೆನೂರು ಮನು ಆ ರೀತಿ ಮಾತಾಡಿದ್ದರೆ ಖಂಡಿತಾ ತಪ್ಪು: ವಿನೋದ್ ಪ್ರಭಾಕರ್
ಮಡೆನೂರು ಮನು ಆ ರೀತಿ ಮಾತಾಡಿದ್ದರೆ ಖಂಡಿತಾ ತಪ್ಪು: ವಿನೋದ್ ಪ್ರಭಾಕರ್
ಸೈಪ್ರಸ್​ಗೆ ಹೊರಟ ಪ್ರಧಾನಿ ಮೋದಿ
ಸೈಪ್ರಸ್​ಗೆ ಹೊರಟ ಪ್ರಧಾನಿ ಮೋದಿ