AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Wistron iPhone plant violence ತಪ್ಪು ಎರಡು ಕಡೆಯಿಂದಲೂ ಆಗಿದೆ, ಆದರೆ ಯಾರದೇ ಉದ್ಯೋಗಕ್ಕೂ ಚ್ಯುತಿ ಇಲ್ಲ

ಇತ್ತ ಕರ್ನಾಟಕದ ಇಮೇಜ್ ಕೂಡ ಕೆಡಬಾರದು. ಹಾಗಂತ ಕಾರ್ಮಿಕರಿಗೆ ಕೂಡ ಅನ್ಯಾಯವಾಗಬಾರದು ಎಂಬ ದೃಷ್ಟಿಯಿಟ್ಟುಕೊಂಡು ಕರ್ನಾಟಕ ಕಾರ್ಮಿಕ ಇಲಾಖೆ ವಿಸ್ಟ್ರಾನ್ ಕಂಪೆನಿಯ ಫ್ಯಾಕ್ಟರಿಯಲ್ಲಿ ನಡೆದ ಹಿಂಸಾಚಾರಕ್ಕೆ ಒಂದು ಖಾಯಂ ಸೂತ್ರ ಕಂಡುಹಿಡಿಯಲು ಮುಂದಾಗಿದೆ.

Wistron iPhone plant violence ತಪ್ಪು ಎರಡು ಕಡೆಯಿಂದಲೂ ಆಗಿದೆ, ಆದರೆ ಯಾರದೇ ಉದ್ಯೋಗಕ್ಕೂ ಚ್ಯುತಿ ಇಲ್ಲ
Wistron iPhone plant violence ತಪ್ಪು ಎರಡು ಕಡೆಯಿಂದಲೂ ಆಗಿದೆ, ಆದರೆ ಯಾರದೇ ಉದ್ಯೋಗಕ್ಕೂ ಚ್ಯುತಿ ಇಲ್ಲ
ಡಾ. ಭಾಸ್ಕರ ಹೆಗಡೆ
|

Updated on:Dec 21, 2020 | 3:39 PM

Share

ಬೆಂಗಳೂರು: ಕೋಲಾರದ ನರಸಾಪುರದಲ್ಲಿರುವ ವಿಸ್ಟ್ರಾನ್ ಇನ್​ಫೊಕಾಂನ iPhone ಉತ್ಪಾದನಾ ಘಟಕದಲ್ಲಿ ನಡೆದ ಹಿಂಸಾಚಾರದ ಹಿನ್ನೆಲೆಯಲ್ಲಿ ಕರ್ನಾಟಕ ಕಾರ್ಮಿಕ ಇಲಾಖೆ ನಡೆಸಿದ ತನಿಖೆ ಮುಗಿದಿದ್ದು, ಸರ್ಕಾರಕ್ಕೆ ಸಲ್ಲಿಸಿರುವ ವರದಿ ಪ್ರಕಾರ, ಕೆಲವು ಕಾರ್ಮಿಕರು ಮತ್ತು ಗುತ್ತಿಗೆ ಆಧಾರಿತ ಕಾರ್ಮಿಕರನ್ನು ತಂದ ಗುತ್ತಿಗೆದಾರ ಇಬ್ಬರೂ ತಪ್ಪು ಮಾಡಿದ್ದಾರೆ. ಇದರಿಂದಾಗಿ ಅಲ್ಲಿ ಹಿಂಸಾಚಾರವಾಗಿ ರೂ. 25 ಕೋಟಿಗೂ ಹೆಚ್ಚಿನ ಹಾನಿ ಸಂಭವಿಸಿದೆ.

ಕಾರ್ಮಿಕ ಇಲಾಖೆ ಬರೀ ಕಾರ್ಮಿಕರ ವಿಚಾರವನ್ನಿಟ್ಟುಕೊಂಡು ತನಿಖೆ ನಡೆಸಿದೆ ಮತ್ತು ಇದಕ್ಕೂ ಪೊಲೀಸ್ ತನಿಖೆಗೂ ಯಾವ ಸಂಬಂಧವೂ ಇಲ್ಲ. ಕಾರ್ಮಿಕ ಇಲಾಖೆ ವರದಿ ಪ್ರಕಾರ, ಕಾರ್ಖಾನೆಯ ಸ್ಥಳೀಯ ಮುಖ್ಯಸ್ಥರದ್ದು ಯಾವ ತಪ್ಪೂ ಇರಲಿಲ್ಲ.

ಕಾರ್ಮಿಕ ಇಲಾಖೆಯ ಮೂಲಗಳ ಪ್ರಕಾರ, ಇಲಾಖೆಯು ಕಾರ್ಮಿಕರು ಮತ್ತು ಸ್ಥಳೀಯ ಮಾಲೀಕರ ನಡುವೆ ಮಾತುಕತೆ ನಡೆಸಲು ಅನುವು ಮಾಡಿಕೊಟ್ಟಿದ್ದು ಅದು ಈಗ ಫಲ ನೀಡುವ ಹಂತಕ್ಕೆ ಬಂದಿದೆ. ಆ ಪ್ರಕಾರ, ಸ್ಥಳೀಯ ಮಾಲೀಕರು ಯಾವ ಉದ್ಯೋಗಿಯನ್ನು ಕೆಲಸದಿಂದ ತೆಗೆದು ಹಾಕದಂತೆ ಮನವೊಲಿಸಲಾಗಿದೆ ಮತ್ತು ಕಾರ್ಮಿಕರಿಗೆ ಬಾಕಿ ಇರುವ ಹಣವನ್ನು ಆದಷ್ಟು ಬೇಗನೇ ನೀಡಲು ಒಪ್ಪಿಸಲಾಗಿದೆ.

ಪ್ರಾಯಶಃ ಇನ್ನು ಮೂರು ಅಥವಾ ನಾಲ್ಕು ದಿನಗಳಲ್ಲಿ ಈ ಎಲ್ಲಾ ವಿಚಾರಕ್ಕೆ ಸಂಬಂಧಿಸಿದಂತೆ, ಎರಡು ಕಡೆಯವರು ಒಂದು ಒಪ್ಪಂದಕ್ಕೆ ಬರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆ ಪ್ರಕಾರ, ಇನ್ನು ಮುಂದೆ ಎಲ್ಲ ಕಾರ್ಮಿಕರನ್ನು ಕಂಪೆನಿ ನೇರವಾಗಿ ಉದ್ಯೋಗಕ್ಕೆ ತೆಗೆದುಕೊಳ್ಳಲಿದೆ. ಮತ್ತು ಇಷ್ಟು ದಿನ ಯಾವ ಗುತ್ತಿಗೆದಾರ ಸಂಸ್ಥೆ ಈ ಕಾರ್ಮಿಕರನ್ನು ಪೂರೈಸುತ್ತಿತ್ತೋ, ಅದನ್ನು ಆ ಜವಾಬ್ದಾರಿಯಿಂದ ತೆಗೆದು ಹಾಕಲು ನಿರ್ಧರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮತ್ತು ಬಾಕಿ ಇರುವ ವೇತನ ಮತ್ತು ಇನ್ನಿತರೆ ಸೌಲಭ್ಯವನ್ನು ಆದಷ್ಟು ಬೇಗ ನೀಡಲು ನಿರ್ಧರಿಸಲಾಗಿದೆ. ಇನ್ನು ಮುಂದೆ ಕಾರ್ಮಿಕರನ್ನು ತೆಗೆದುಕೊಳ್ಳುವಾಗ ಅವರನ್ನು ಗುತ್ತಿಗೆ ಆಧಾರಿತವಾಗಿ ತೆಗೆದುಕೊಳ್ಳಬೇಕೋ? ಆಥವಾ ಖಾಯಂ ಉದ್ಯೋಗಿಯಾಗಿ ತೆಗೆದುಕೊಳ್ಳಬೇಕೋ ಎಂಬ ವಿಚಾರ ಮಾತ್ರ ಇನ್ನೂ ನಿರ್ಣಯವಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಆದರೆ, ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ ಕಾರ್ಮಿಕ ಇಲಾಖೆ ಯಾವ ಹಸ್ತಕ್ಷೇಪವನ್ನೂ ಮಾಡುವುದಿಲ್ಲ. ಯಾರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿದೆಯೋ ಅದನ್ನು ಹಿಂತೆಗೆದುಕೊಳ್ಳುವ ಕುರಿತಾಗಿ ಕಾರ್ಮಿಕ ಇಲಾಖೆಯು ಪೊಲೀಸ್ ತನಿಖೆಯಲ್ಲಿ ಮೂಗು ತೂರಿಸುವುದಿಲ್ಲ ಎಂದೂ ಮೂಲಗಳು ಹೇಳಿವೆ.

Published On - 3:30 pm, Mon, 21 December 20

Follow Us
Dr Bhaskar Hegde
Dr Bhaskar Hegde

ಟಿವಿ9 ಡಿಜಿಟಲ್​ ಸಂಪಾದಕ. 28 ವರ್ಷಗಳಿಂದ ಇಂಗ್ಲಿಷ್ ಮುದ್ರಣ ಮಾಧ್ಯಮ​ ಮತ್ತು ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಸುದ್ದಿ, ದೀರ್ಘ ಲೇಖನ, ನುಡಿಚಿತ್ರ, ವಿಶ್ಲೇಷಣೆ, ಅಂಕಣ ಸ್ಕೂಪ್​ ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಎರಡು ಕಥಾ ಸಂಕಲನಗಳ ಪ್ರಕಟಣೆ. ಸಾರ್ವಜನಿಕ ನೀತಿ ಮತ್ತು ಆಡಳಿತಕ್ಕೆ ಸಂಬಂಧಿಸಿದ ವಿಷಯದಲ್ಲಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಪಿಎಚ್​ಡಿ ಪದವಿ. ಹಿಂದೂಸ್ತಾನಿ ಸಂಗೀತ, ಕ್ರಿಕೆಟ್​, ತತ್ವಶಾಸ್ತ್ರ ಮತ್ತು ಕಾನೂನಿನ ವಿಷಯದ ತೀವ್ರ ಆಸಕ್ತಿ.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ