AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಠ, ಮಂದಿರಗಳು, ಸಂಘ ಸಂಸ್ಥೆಗಳಿಗೆ ಸರ್ಕಾರದಿಂದ 23 ಕೋಟಿ ಅನುದಾನ ಬಿಡುಗಡೆ

ರಾಜ್ಯದಲ್ಲಿರುವ ಮಠ, ಮಂದಿರಗಳು ಹಾಗೂ ಸಂಘ ಸಂಸ್ಥೆಗಳಿಗೆ ಕರ್ನಾಟಕ ಸರ್ಕಾರದಿಂದ ಅನುದಾನ ಬಿಡುಗಡೆಯಾಗಿದೆ. ಕೆಲವು ತಿಂಗಳ ಹಿಂದೆಯಷ್ಟೇ ಸ್ಥಾಪನೆಯಾಗಿದ್ದ ವೀರಶೈವ ಲಿಂಗಾಯತ ಪಂಚಮಸಾಲಿ ಮಠಕ್ಕೆ ಅನುದಾನ ಬಿಡುಗಡೆಯಾಗಿದೆ.

ಮಠ, ಮಂದಿರಗಳು, ಸಂಘ ಸಂಸ್ಥೆಗಳಿಗೆ ಸರ್ಕಾರದಿಂದ 23 ಕೋಟಿ ಅನುದಾನ ಬಿಡುಗಡೆ
ಮಠ, ಮಂದಿರಗಳು, ಸಂಘ ಸಂಸ್ಥೆಗಳಿಗೆ ಸರ್ಕಾರದಿಂದ 23 ಕೋಟಿ ಅನುದಾನ ಬಿಡುಗಡೆ
TV9 Web
| Edited By: Rakesh Nayak Manchi|

Updated on:Nov 25, 2022 | 11:10 AM

Share

ಬಾಗಲಕೋಟೆ: ರಾಜ್ಯದಲ್ಲಿರುವ ಮಠ, ಮಂದಿರಗಳು ಹಾಗೂ ಸಂಘ ಸಂಸ್ಥೆಗಳಿಗೆ ಒಟ್ಟು 23.95 ಕೋಟಿ ರೂಪಾಯಿ ಅನುದಾನವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ನೇತೃತ್ವದ ಕರ್ನಾಟಕ ಸರ್ಕಾರ (Karnataka Government) ಬಿಡುಗಡೆ ಮಾಡಿದೆ. ಒಟ್ಟು 55 ಮಠಗಳು, 81 ದೇಗುಲಗಳು, 25 ಸಂಘ ಸಂಸ್ಥೆಗಳಿಗೆ ಒಟ್ಟು 23.95 ಕೋಟಿ ಬಿಡುಗಡೆ ಮಾಡಿ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ಪಜೀತ್ ಕೆ.ಎಂ. ನಂಬಿಯಾರ್ ಅವರು ಆದೇಶ ಹೊರಡಿಸಿದ್ದಾರೆ. ಕೆಲವು ತಿಂಗಳ ಹಿಂದೆಯಷ್ಟೇ ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಆಲಗೂರು ಗ್ರಾಮದಲ್ಲಿ ಸ್ಥಾಪನೆಯಾಗಿದ್ದ ವೀರಶೈವ ಲಿಂಗಾಯತ ಪಂಚಮಸಾಲಿ ಮಠದ 3ನೇ ಪೀಠಕ್ಕೂ ಅನುದಾನ ಬಿಡುಗಡೆಯಾಗಿದೆ.

ಇದನ್ನೂ ಓದಿ: “ಬುಟ್ಟಿಯಲ್ಲಿ ಹಣ್ಣು ಕೊಳೆತರೆ ಅದನ್ನು ತೆಗೆದು ಎಸೆಯಬೇಕು”; ಪೀಠದಿಂದ ಮುರುಘಾಶ್ರೀ ವಜಾಗೊಳಿಸುವ ಸುಳಿವು ನೀಡಿದ ಸಮುದಾಯದ ಮುಖಂಡರು

ವೀರಶೈವ ಲಿಂಗಾಯತ ಪಂಚಮಸಾಲಿ ಸ್ವಾಮೀಜಿಗಳ ಒಕ್ಕೂಟ ಹಾಗೂ ಒಕ್ಕೂಟದ ಸದಸ್ಯರಾಗಿರುವ ರಾಜ್ಯದ ಪಂಚಮಸಾಲಿ ಸ್ವಾಮೀಜಿಗಳ ಮಠಗಳ ಒಕ್ಕೂಟದ ಟ್ರಸ್ಟ್​ಗೆ 20 ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ವೀರಶೈವ ಲಿಂಗಾಯತ ಪಂಚಮಸಾಲಿ ಸ್ವಾಮೀಜಿಗಳ ಒಕ್ಕೂಟದ ಟ್ರಸ್ಟ್ ಅಡಿಯಲ್ಲಿ ಸ್ಥಾಪನೆ ಆಗಿದ್ದ 3ನೇ ಪೀಠ ಇದಾಗಿದೆ. ಈ ಪೀಠವು ಕಳೆದ ಫೆಬ್ರುವರಿ ತಿಂಗಳಲ್ಲಿ ಸ್ಥಾಪನೆಯಾಗಿದೆ.

ಇದನ್ನೂ ಓದಿ: ಪಾಂಡವಪುರದಲ್ಲಿ ಇಂದಿನಿಂದ ಪುನೀತೋತ್ಸವ; ಸ್ಯಾಂಡಲ್​ವುಡ್ ನಟ-ನಟಿಯರು ಭಾಗಿ

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:28 am, Fri, 25 November 22

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!