AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಮೈತ್ರಿ ಸರ್ಕಾರ ಮಾಡಿದ್ದವರು ನೀವು: ಸಿದ್ದರಾಮಯ್ಯಗೆ ಯಡಿಯೂರಪ್ಪ ತಿರುಗೇಟು

ಸರ್ಕಾರದ ಆಡಳಿತ ವೈಖರಿಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ಸಿದ್ದರಾಮಯ್ಯ ಮಾಡಿದ್ದ ಆರೋಪಗಳಿಗೆ ಶುಕ್ರವಾರ ಯಡಿಯೂರಪ್ಪ ಪ್ರತಿಕ್ರಿಯಿಸಿದರು.

ಅನೈತಿಕ ಮೈತ್ರಿ ಸರ್ಕಾರ ಮಾಡಿದ್ದವರು ನೀವು: ಸಿದ್ದರಾಮಯ್ಯಗೆ ಯಡಿಯೂರಪ್ಪ ತಿರುಗೇಟು
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ
Ghanashyam D M | ಡಿ.ಎಂ.ಘನಶ್ಯಾಮ
| Edited By: |

Updated on:Feb 05, 2021 | 4:05 PM

Share

ಬೆಂಗಳೂರು: ‘ಸ್ವತಃ ಅನೈತಿಕ ಮೈತ್ರಿ ಮಾಡಿಕೊಂಡು ಸರ್ಕಾರ ಮಾಡಿದ್ದ ನೀವು ಅದನ್ನು ಮರೆತು ಮಾತಾಡ್ತಿದ್ದೀರಿ. ಕಾಂಗ್ರೆಸ್​ ಪಕ್ಷಕ್ಕೆ ಸೇರಿ ನೀವು ಆಪರೇಷನ್ ಮಾಡಿಲ್ವಾ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.

ವಿಧಾನಸಭೆಯಲ್ಲಿ ರಾಜ್ಯಪಾಲರ ವಂದನಾ ನಿರ್ಣಯದ ಮೇಲಿನ ಚರ್ಚೆಯಲ್ಲಿ ಮಾತನಾಡುವಾಗ ಸರ್ಕಾರದ ಆಡಳಿತ ವೈಖರಿಯನ್ನು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದರು. ಸಿದ್ದರಾಮಯ್ಯ ಮಾಡಿದ್ದ ಆರೋಪಗಳಿಗೆ ಶುಕ್ರವಾರ ಯಡಿಯೂರಪ್ಪ ಪ್ರತಿಕ್ರಿಯಿಸಿದರು.

ಹಿಂದಿನ ವಿಧಾನಸಭೆ ಚುನಾವಣೆಯಲ್ಲಿ ಜನರು ಕಾಂಗ್ರೆಸ್​ ಪಕ್ಷವನ್ನು ತಿರಸ್ಕರಿಸಿದ್ದರು. ಆಗ ಅನೈತಿಕ ಮೈತ್ರಿಯಿಂದ ಸರ್ಕಾರ ಮಾಡಿದವರು ನೀವು. ಈಗ ನಮ್ಮದನ್ನು ಅನೈತಿಕ ಸರ್ಕಾರ, ಕೆಟ್ಟು ನಿಂತ ಡಕೋಟಾ ಸರ್ಕಾರ ಅಂತೀರಾ ಎಂದು ಆಕ್ಷೇಪಿಸಿದರು.

ಹಾಲಿಗೆ ಪ್ರೋತ್ಸಾಹಧನ ಶುರುವಾಗಿದ್ದು ನಾವು ಬಂದ ಮೇಲೆ, ಹೈದರಾಬಾದ್ ಕರ್ನಾಟಕವನ್ನು ಈಗ ಕಲ್ಯಾಣ ಕರ್ನಾಟಕ ಮಾಡಿದ್ದೇವೆ. ಇನ್ನೆರೆಡು ವರ್ಷಗಳಲ್ಲಿ ₹ 600 ಕೋಟಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ಮಾಣವಾಗಲಿದೆ. ಇಡೀ ಜಗತ್ತಿಗೆ ಹೆಸರುವಾಸಿಯಾಗುವ ಪ್ರವಾಸಿತಾಣವಾಗಲಿದೆ ಅನುಭವ ಮಂಟಪ ಎಂದು ಯಡಿಯೂರಪ್ಪ ತಮ್ಮ ನಿರ್ಧಾರಗಳನ್ನು ಸಮರ್ಥಿಸಿಕೊಂಡರು.

ಸಿದ್ದರಾಮಯ್ಯ ನೀಡಿರುವ ಅಂಕಿಅಂಶಗಳು ಸರಿಯಾಗಿವೆ. ಆದರೆ ಏನೂ ಕೆಲಸವಾಗಿಲ್ಲ, ರಾಜ್ಯ ಪ್ರಗತಿ ಕಂಡಿಲ್ಲ ಎಂಬ ಆರೋಪ ಸತ್ಯಕ್ಕೆ ದೂರವಾದುದು. ದೇಶದಲ್ಲಿ ಅತಿಹೆಚ್ಚು ಆರ್​ಟಿಪಿಆರ್​ (ಕೋವಿಡ್-19) ಪರೀಕ್ಷೆ ಕರ್ನಾಟಕದಲ್ಲಿ ನಡೆದಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರು ನಗರದ ಅಭಿವೃದ್ಧಿಗೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದೆ. ನಾಲ್ಕೈದು ತಿಂಗಳಲ್ಲಿ ಬಿಡಿಎ ಕಾರ್ಯವೈಖರಿಯಲ್ಲಿ ಕಣ್ಣಿಗೆ ಕಾಣುವಂಥ ಬದಲಾವಣೆಗಳು ಬರುತ್ತವೆ. ಭೂಗಳ್ಳರಿಂದ ಸುಮಾರು ಮೂರೂವರೆ ಸಾವಿರ ಕೋಟಿ ರೂಪಾಯಿ ಮೌಲ್ಯದ 300 ಎಕರೆಗೂ ಹೆಚ್ಚು ಭೂಮಿ ವಶಪಡಿಸಿಕೊಳ್ಳಲು ಅಗತ್ಯ ಕ್ರಮ ತೆಗೆದುಕೊಂಡಿದ್ದೇವೆ. ಬಿಡಿಎ ಅಕ್ರಮಕ್ಕೆ ಸಂಪೂರ್ಣ ಬ್ರೇಕ್ ಹಾಕಲು ನಿರ್ಧರಿಸಿದ್ದೇನೆ. 2025ರ ಒಳಗೆ 75 ಕಿಮೀ ಮೆಟ್ರೊ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದರು.

ವಿರೋಧಪಕ್ಷಗಳಿದ್ದೇವೆ ಎಂಬ ಒಂದೇ ಕಾರಣಕ್ಕೆ ಎಲ್ಲದಕ್ಕೂ ವಿರೋಧ ಮಾಡಬೇಕಿಲ್ಲ. ಟೀಕೆ-ಟಿಪ್ಪಣಿಗಳು ತಿದ್ದಿಕೊಳ್ಳುವಂತಿರಬೇಕು. ಕೆಲ ಸಮಸ್ಯೆಗಳಿಂದಾಗಿ ಕೆಲ ಕ್ಷೇತ್ರಗಳಿಗೆ ಅನುದಾನ ನೀಡಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಎಲ್ಲ ಶಾಸಕರಿಗೂ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು.

ಮಾರ್ಚ್​ ಅಂತ್ಯಕ್ಕೆ ಘೋಷಿತ ಅನುದಾನದ ಶೇ 85ರಷ್ಟು ಬಿಡುಗಡೆ ಮಾಡುವುದಾಗಿ ಯಡಿಯೂರಪ್ಪ ಭರವಸೆ ನೀಡಿದರು.

Published On - 4:01 pm, Fri, 5 February 21

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ