AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಶಿಸ್ತು ಉಲ್ಲಂಘನೆ: ಸಚಿವರು, ಶಾಸಕರ ವಿರುದ್ಧ ಶಿಸ್ತುಸಮಿತಿಗೆ ದೂರು

ವಿಧಾನ ಪರಿಷತ್‌ಗೆ ನಡೆದಿದ್ದ ಚುನಾವಣೆಯಲ್ಲಿ ಹಲವು ಸಚಿವರು ಹಾಗೂ ಶಾಸಕರು ಬಿಜೆಪಿ ಹೊರತುಪಡಿಸಿ ಬೇರೆ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ ಎಂಬ ದೂರನ್ನು ದಾಖಲಿಸಲಾಯಿತು.

ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಶಿಸ್ತು ಉಲ್ಲಂಘನೆ: ಸಚಿವರು, ಶಾಸಕರ ವಿರುದ್ಧ ಶಿಸ್ತುಸಮಿತಿಗೆ ದೂರು
ಬಿಜೆಪಿ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Jan 20, 2022 | 11:20 PM

Share

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಶಿಸ್ತು ಉಲ್ಲಂಘಿಸಿದ ಆರೋಪದ ಮೇಲೆ ಹಲವು ಸಚಿವರು ಹಾಗೂ ಶಾಸಕರ ವಿರುದ್ಧ ಬಿಜೆಪಿ ರಾಜ್ಯ ಶಿಸ್ತು ಸಮಿತಿಗೆ ಕೆಲ ಅಭ್ಯರ್ಥಿಗಳು ದೂರು ನೀಡಿದ್ದಾರೆ. ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನ ಪರಿಷತ್‌ಗೆ ನಡೆದಿದ್ದ ಚುನಾವಣೆಯಲ್ಲಿ ಹಲವು ಸಚಿವರು ಹಾಗೂ ಶಾಸಕರು ಬಿಜೆಪಿ ಹೊರತುಪಡಿಸಿ ಬೇರೆ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ ಎಂಬ ದೂರನ್ನು ದಾಖಲಿಸಲಾಯಿತು. ಆರೋಪಿತರಿಗೆ ನೊಟೀಸ್ ನೀಡಲು ಬಿಜೆಪಿ ರಾಜ್ಯ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಶಿಸ್ತು ಸಮಿತಿಯು ನಿರ್ಧರಿಸಿತು. ಕೆಲ ಜಿಲ್ಲೆಗಳಲ್ಲಿ ಬಿಜೆಪಿ ಶಾಸಕರೂ ಸಹ ಇತರ ಪಕ್ಷಗಳ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಮೊದಲ ಹಂತದಲ್ಲಿ ದೂರು ಬಂದ ಜಿಲ್ಲೆಗಳಿಗೆ ಸಮಿತಿ ಭೇಟಿ ನೀಡಿ, ಸ್ಥಳೀಯ ನಾಯಕರ ಅಭಿಪ್ರಾಯ ಪಡೆಯಲು ಸಭೆ ನಿರ್ಧರಿಸಿತು. ಅಭ್ಯರ್ಥಿಗಳ ಅಭಿಪ್ರಾಯ ಕೇಳಿದ ಬಳಿಕವೇ ನೊಟೀಸ್ ಜಾರಿಮಾಡಲು ಮತ್ತು ಪಕ್ಷದ ಶಿಸ್ತು ಉಲ್ಲಂಘಿಸಿದ್ದು ಸಾಬೀತಾದರೆ ಕ್ರಮ ಜರುಗಿಸಲು ಕೇಂದ್ರ ಸಮಿತಿಗೆ ಶಿಫಾರಸು ಮಾಡಲು ಸಭೆ ನಿರ್ಧರಿಸಿತು.

ವೀಕೆಂಡ್ ನಿರ್ಧಾರ ಮರುಪರಿಶೀಲನೆಗೆ ಬಿಜೆಪಿ ಕಚೇರಿಯಲ್ಲಿ ಸಭೆ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ (ಜ.21) ಮಹತ್ವದ ಸಭೆ ಕರೆಯಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ವಿವಿಧ ಸಚಿವರು, ಶಾಸಕರು ಮತ್ತು ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದಲ್ಲಿ ವಾರಾಂತ್ಯ ಕರ್ಫ್ಯೂ ಮುಂದುವರಿಸಬೇಕೇ? ಬೇಡವೇ ಎಂಬ ಬಗ್ಗೆ ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ವೀಕೆಂಡ್ ಕರ್ಫ್ಯೂ ತೆಗೆಯಬೇಕೆಂಬ ಜನರ ಅಭಿಪ್ರಾಯದ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ ಎಂದು ತಿಳಿಸಿದರು.

ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸಿದ್ಧತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುವ ಕುರಿತು ಬಿಜೆಪಿಯು ಇಂದು (ಜ.20) ಮಹತ್ವದ ಸಭೆ ನಡೆಸಿತು. ಬಿಜೆಪಿಯ ಪ್ರಮುಖ ನಾಯಕರು ಹಾಗೂ ಮುಖಂಡರ ಜೊತೆಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಸುಮಾರು ಎರಡು ತಾಸು ಚರ್ಚೆ ನಡೆಸಿದರು. ಬೆಂಗಳೂರಿನ ಮೂವರು ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ವಿಭಾಗ ಉಸ್ತುವಾರಿಗಳು ಸೇರಿದಂತೆ ಹಲವು ಮುಖಂಡರು ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸಚಿವ ಆರಗ ಜ್ಞಾನೇಂದ್ರ, ಪಕ್ಷವನ್ನು ಬಲಪಡಿಸುವುದು ನಮ್ಮ ಉದ್ದೇಶ. ಹಾಗಾಗಿ ಸಭೆ ಸೇರಿದ್ದೆವು ಎಂದು ವಿವರಿದರು.

ಇದನ್ನೂ ಓದಿ: BBMP Elections: ಬಿಬಿಎಂಪಿ ಚುನಾವಣೆಗೆ ಸರ್ಕಾರದ ಸಿದ್ಧತೆ; ವಾರ್ಡ್ ವಿಂಗಡಣೆ ಬಗ್ಗೆ ಹೆಚ್ಚಿದ ಭಿನ್ನಾಭಿಪ್ರಾಯ ಇದನ್ನೂ ಓದಿ: ಬಿಬಿಎಂಪಿ ಚುನಾವಣೆಗೆ ಬಿಜೆಪಿಯಿಂದ ಸಿದ್ಧತೆ; ಜನವರಿ 25 ರಿಂದ 3 ದಿನಗಳ ಕಾಲ ಸಿಎಂ ಬಸವರಾಜ ಬೊಮ್ಮಾಯಿ ಸಭೆ

Follow Us
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ
ಹುಮನಾಬಾದ್ ಪುರಭವನಕ್ಕಿಲ್ಲ ಉದ್ಘಾಟನೆ ಭಾಗ್ಯ: ಪಾಳುಬಿದ್ದ ಕಟ್ಟಡ