AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಧಾನ ಪರಿಷತ್: ನಾನು ಮೂರು ಸಚಿವರ ಮಧ್ಯೆ ಇಕ್ಕಳದಂತೆ ಸಿಕ್ಕಿಹಾಕಿಕೊಂಡಿದ್ದೇನೆ- ವಸತಿ ಸಚಿವ ಸೋಮಣ್ಣ ಅಳಲು

Karnataka Legislative session: ವಸತಿ ಇಲಾಖೆ ಕೆಲಸ ಮಾಡಬೇಕು ಅಂದ್ರೆ ಅದು ಈಸಿಯಲ್ಲ. ಬೇರೆ ಬೇರೆ ಇಲಾಖೆಗಳ ಅನುಮತಿ ಪಡೆದುಕೊಳ್ಳಬೇಕು ನಾವು. ಇವರೆಲ್ಲರ ಮಧ್ಯೆ ಇಕ್ಕಳದಲ್ಲಿ ಸಿಕ್ಕಿಕೊಂಡಂತಾಗಿದೆ ನನಗೆ ಎಂದು ಹುಸಿ ಅಸಹಾಯಕತೆ ವ್ಯಕ್ತಪಡಿಸುತ್ತಾ ಸೋಮಣ್ಣ ನಗೆ ಬೀರಿದರು.

ವಿಧಾನ ಪರಿಷತ್: ನಾನು ಮೂರು ಸಚಿವರ ಮಧ್ಯೆ ಇಕ್ಕಳದಂತೆ ಸಿಕ್ಕಿಹಾಕಿಕೊಂಡಿದ್ದೇನೆ- ವಸತಿ ಸಚಿವ ಸೋಮಣ್ಣ ಅಳಲು
ವಿಧಾನ ಪರಿಷತ್: ನಾನು 3 ಸಚಿವರ ಮಧ್ಯೆ ಇಕ್ಕಳದಂತೆ ಸಿಕ್ಕಿಹಾಕಿಕೊಂಡಿದ್ದೇನೆ- ವಸತಿ ಸಚಿವ ಸೋಮಣ್ಣ
TV9 Web
| Edited By: ಸಾಧು ಶ್ರೀನಾಥ್​|

Updated on:Sep 22, 2021 | 12:22 PM

Share

ಬೆಂಗಳೂರು: ರಾಜ್ಯ ವಿಧಾನಮಂಡಲ ಕಲಾಪ ಇಂದು ಬೆಳಗ್ಗೆ ಆರಂಭವಾಗಿದೆ. ವಸತಿ ಇಲಾಖೆ ಸಮಸ್ಯೆಗಳ ಬಗ್ಗೆ ವಸತಿ ಸಚಿವ ವಿ ಸೋಮಣ್ಣ ಮೇಲ್ಮನೆಯಲ್ಲಿ ಉತ್ತರ ನೀಡುತ್ತಾ, ತಮ್ಮ ಇಲಾಖೆಯ ಸಮಸ್ಯೆಗಳ ಬಗ್ಗೆ ಸದನದಲ್ಲಿ ಸದಸ್ಯರ ಗಮನ ಸೆಳೆದರು. ನಾನು ಮೂರು ಸಚಿವರ ಮಧ್ಯೆ ಇಕ್ಕಳದಂತೆ ಸಿಕ್ಕಿಹಾಕಿಕೊಂಡಿದ್ದೇನೆ ಎಂದು ಹುಸಿ ಅಸಹಾಯಕತೆ ವ್ಯಕ್ತಪಡಿಸಿದ ವಸತಿ ಸಚಿವ ಸೋಮಣ್ಣ ಅವರು ಆದಾಗ್ಯೂ ವಸತಿ ಇಲಾಖೆ ಸಮಸ್ಯೆಗಳನ್ನು ಬಗೆಹರಿಸುವುದಕ್ಕೆ ಪಣ ತೊಟ್ಟಿದ್ದೇನೆ ಎಂದರು. ಪ್ರಶ್ನೋತ್ತರ ಅವಧಿಯಲ್ಲಿ ಪ್ರಶ್ನೆ ಕೇಳಿದ್ದ ಹನುಮಂತ ನಿರಾಣಿ ಬಾಗಲಕೋಟೆ ಜಿಲ್ಲೆಯಲ್ಲಿ ವಾಜಪೇಯಿ ವಸತಿ ಯೋಜನೆ ಅನುಷ್ಠಾನ ಸಂಬಂಧ ಪ್ರಶ್ನೆ ಕೇಳಿದ್ದರು.

ವಸತಿ ಇಲಾಖೆ ಕೆಲಸ ಮಾಡಬೇಕು ಅಂದ್ರೆ ಅದು ಈಸಿಯಲ್ಲ. ಬೇರೆ ಬೇರೆ ಇಲಾಖೆಗಳ ಅನುಮತಿ ಪಡೆದುಕೊಳ್ಳಬೇಕು ನಾವು. ಒಂದು ಕಡೆ ಕಂದಾಯ ಮಂತ್ರಿ, ಇನ್ನೊಂದು ಕಡೆ ಆರ್.ಡಿ.ಪಿ.ಆರ್ ಮಂತ್ರಿ, ಮತ್ತೊಂದು ಕಡೆ ಅರ್ಬನ್ ಡೆವಲಪ್ಮೆಂಟ್ ಮಂತ್ರಿ ಇದರ ಹೊರತಾಗಿ ಮತ್ತೊಂದು ಕಡೆ ಜಿಲ್ಲಾಧಿಕಾರಿಗಳೂ ಇದ್ದಾರೆ. ಇವರೆಲ್ಲರ ಮಧ್ಯೆ ಇಕ್ಕಳದಲ್ಲಿ ಸಿಕ್ಕಿಕೊಂಡಂತಾಗಿದೆ ನನಗೆ ಎಂದು ಹುಸಿ ಅಸಹಾಯಕತೆ ವ್ಯಕ್ತಪಡಿಸುತ್ತಾ ಸೋಮಣ್ಣ ನಗೆ ಬೀರಿದರು.

ವಸತಿ ಇಲಾಖೆ ಯೋಜನೆಗೆ ಸಂಬಂಧಿಸಿ ಪರಿಷತ್ ನಲ್ಲಿ ಗದ್ದಲ

3 ವರ್ಷದಿಂದ ಹೊಸ ಮನೆಗಳನ್ನು ಹಂಚಿಕೆ ಮಾಡಿಲ್ಲ. ಚರ್ಚೆಗೆ ಅವಕಾಶ ನೀಡಬೇಕೆಂದು JDS ಸದಸ್ಯರು ಗದ್ದಲ ಮಾಡಿದರು. ಆಗ ಪ್ರಶ್ನೋತ್ತರ ಅವಧಿಯಲ್ಲಿ ಚರ್ಚೆಗೆ ಅವಕಾಶ ನೀಡಲ್ಲ ಎಂದು ಪರಿಷತ್ ಸಭಾಪತಿ ಸ್ಥಾನದಲ್ಲಿದ್ದ ಪ್ರಾಣೇಶ್ ಹೇಳಿದರು. ಆದರೆ ಇದು ಇಡೀ ರಾಜ್ಯದ ಸಮಸ್ಯೆ ಇದು, ಮೂರು ವರ್ಷಗಳಿಂದ ಯಾಕೆ ಹೊಸ ವಸತಿ ಯೋಜನೆ ನೀಡಿಲ್ಲ, ಚರ್ಚೆಗೆ ಅವಕಾಶ ಕೊಡಲೇಬೇಕು ಅಂತಾ JDS ಸದಸ್ಯರು ಬಿಗಿಪಟ್ಟು ಹಿಡಿದರು.

ಇದನ್ನು ಓದಿ: 750 ಗ್ರಾಮ ಪಂಚಾಯತ್​ಗಳಲ್ಲಿ ವಸತಿ ಯೋಜನೆ; ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಆರಂಭಿಸಲು ಸೂಚನೆ

ಇದನ್ನು ಓದಿ: ಇವರಿಬ್ಬರು ನಮ್ಮ ಇಲಾಖೆಯ ತಿಮಿಂಗಿಲಗಳು; ಇನ್ನಾದ್ರೂ ಒಳ್ಳೆಯದು ಮಾಡ್ರೊ: ಅಧಿಕಾರಿಗಳಿಗೆ ವಿ ಸೋಮಣ್ಣ ಕ್ಲಾಸ್

Karnataka Assembly Session 22-09-2021 | ವಿಧಾನಸಭೆ​ ಕಲಾಪ ನೇರ ಪ್ರಸಾರ | TV9 Kannada Digital Live

(Karnataka Legislative session: Housing minister v somanna talks about housing department problems)

Published On - 11:51 am, Wed, 22 September 21

Follow Us
Web contact
Web contact

TV9 Kannada

Read More
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?