ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ 5ನೇ ಬಾರಿ ಶಾಕ್: ಮೇ 1 ರಿಂದ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ!

ಕರ್ನಾಟಕದಲ್ಲಿ ಮೇ 1 ರಿಂದ ಹೊಸ ಅಬಕಾರಿ ನೀತಿ ಜಾರಿಗೆ ಬರಲಿದ್ದು, ಮದ್ಯದ ದರ ಶೇ 20ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಆಲ್ಕೋಹಾಲ್ ಪ್ರಮಾಣದ (AIB) ಆಧಾರದ ಮೇಲೆ ತೆರಿಗೆ ವಿಧಿಸುವುದರಿಂದ ಸಾಮಾನ್ಯ ಜನರು ಬಳಸುವ ಬ್ರಾಂಡ್‌ಗಳ ಬೆಲೆ ಒಂದು ಕ್ವಾರ್ಟರ್‌ಗೆ 15 ರಿಂದ 25 ರೂಪಾಯಿಗಳಷ್ಟು ದುಬಾರಿಯಾಗಲಿದೆ.

ಮದ್ಯಪ್ರಿಯರಿಗೆ ರಾಜ್ಯ ಸರ್ಕಾರದಿಂದ 5ನೇ ಬಾರಿ ಶಾಕ್: ಮೇ 1 ರಿಂದ ಮದ್ಯದ ದರ ಭಾರಿ ಏರಿಕೆ ಸಾಧ್ಯತೆ!
ಸಾಂದರ್ಭಿಕ ಚಿತ್ರ
Image Credit source: tv9
Edited By:

Updated on: Apr 25, 2026 | 7:32 AM

ಬೆಂಗಳೂರು, ಏಪ್ರಿಲ್ 25: ಕರ್ನಾಟಕದಲ್ಲಿ (Karnataka) ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈಗಾಗಲೇ ಮೂರ್ನಾಲ್ಕು ಬಾರಿ ಮದ್ಯದ ದರವನ್ನು ಏರಿಕೆ ಮಾಡಲಾಗಿದೆ. ಇದೀಗ ಐದನೇ ಬಾರಿಗೆ ಅಬಕಾರಿ ಸುಂಕವನ್ನು ಪರಿಷ್ಕರಿಸಲು ಸರ್ಕಾರ ಸಜ್ಜಾಗಿದ್ದು, ಮೇ 1 ರಿಂದ ಹೊಸ ದರಗಳು ಜಾರಿಗೆ ಬರುವ ಸಾಧ್ಯತೆಯಿದೆ. ಇದು ರಾಜ್ಯದ ಮಧ್ಯಮ ಮತ್ತು ಕೆಳವರ್ಗದ ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಲಿದೆ.

ಏನಿದು ಹೊಸ ಎಐಬಿ (AIB) ನೀತಿ?

ಸರ್ಕಾರವು ಹೊರಡಿಸಿರುವ ಕರಡು ಅಧಿಸೂಚನೆಯಂತೆ, ಇನ್ನು ಮುಂದೆ ಮದ್ಯದ ಬಾಟಲಿಯಲ್ಲಿರುವ ಆಲ್ಕೋಹಾಲ್ ಪ್ರಮಾಣದ (Alcohol-in-Beverage) ಆಧಾರದ ಮೇಲೆ ತೆರಿಗೆ ವಿಧಿಸಲಾಗುತ್ತದೆ. ಅಂದರೆ, ಮದ್ಯದಲ್ಲಿ ಆಲ್ಕೋಹಾಲ್ ಅಂಶ ಹೆಚ್ಚಿದ್ದಷ್ಟೂ ತೆರಿಗೆ ಹೆಚ್ಚಾಗಲಿದೆ. ಈ ಹೊಸ ನೀತಿಯಿಂದಾಗಿ ಕಡಿಮೆ ಆಲ್ಕೋಹಾಲ್ ಹೊಂದಿರುವ ಪ್ರೀಮಿಯಂ ಮದ್ಯದ ಬೆಲೆ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗುವ ಸಾಧ್ಯತೆಯಿದ್ದರೂ, ಸಾಮಾನ್ಯ ಜನರು ಬಳಸುವ ಮದ್ಯದ ಬೆಲೆ ಶೇ 20ರಷ್ಟು ಏರಿಕೆಯಾಗಲಿದೆ.

ಯಾವ ಸ್ಲ್ಯಾಬ್‌ಗಳಿಗೆ ಎಷ್ಟು ಏರಿಕೆ?

ರಾಜ್ಯದ ಒಟ್ಟು ಅಬಕಾರಿ ಆದಾಯದಲ್ಲಿ ಶೇ 80ರಷ್ಟು ಪಾಲು ಹೊಂದಿರುವ ಮೊದಲ ನಾಲ್ಕು ಸ್ಲ್ಯಾಬ್‌ಗಳ ಮದ್ಯದ ಬೆಲೆ ಗಣನೀಯವಾಗಿ ಹೆಚ್ಚಾಗಲಿದೆ. ವಿಸ್ಕಿ, ರಮ್, ಬ್ರಾಂಡಿ ಮತ್ತು ಜಿನ್ ಬೆಲೆಯಲ್ಲಿ ಒಂದು ಕ್ವಾರ್ಟರ್‌ಗೆ 15 ರಿಂದ 25 ರೂಪಾಯಿಗಳಷ್ಟು ಏರಿಕೆಯಾಗುವ ಅಂದಾಜಿದೆ.

ಎಷ್ಟು ಹೆಚ್ಚಾಗಲಿದೆ ಮದ್ಯದ ದರ?

  • ಸ್ಲ್ಯಾಬ್-1: ₹80 ರಿಂದ ₹95ಕ್ಕೆ ಏರಿಕೆ (₹15 ಹೆಚ್ಚಳ)
  • ಸ್ಲ್ಯಾಬ್-2: ₹95 ರಿಂದ ₹110ಕ್ಕೆ ಏರಿಕೆ (₹15 ಹೆಚ್ಚಳ)
  • ಸ್ಲ್ಯಾಬ್-3: ₹120 ರಿಂದ ₹135ಕ್ಕೆ ಏರಿಕೆ (₹15 ಹೆಚ್ಚಳ)
  • ಸ್ಲ್ಯಾಬ್-4: ₹150 ರಿಂದ ₹170ಕ್ಕೆ ಏರಿಕೆ (₹20 ಹೆಚ್ಚಳ)

ಒಂದು ಫುಲ್ ಬಾಟಲ್ ಮದ್ಯದ ಮೇಲೆ ಎಂಆರ್‌ಪಿ (MRP) ದರದಲ್ಲಿ ಸುಮಾರು 50 ರಿಂದ 100 ರೂಪಾಯಿಗಳಷ್ಟು ಹೆಚ್ಚಳವಾಗಲಿದ್ದು, ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಸರ್ವಿಸ್ ಚಾರ್ಜ್ ಸೇರಿ ಈ ಹೊರೆ ಮತ್ತಷ್ಟು ಹೆಚ್ಚಾಗಲಿದೆ.

ಮದ್ಯಪ್ರಿಯರ ಆಕ್ರೋಶ

ಮೂರು ವರ್ಷಗಳ ಅವಧಿಯಲ್ಲಿ ಐದನೇ ಬಾರಿಗೆ ದರ ಏರಿಕೆ ಮಾಡುತ್ತಿರುವುದಕ್ಕೆ ಮದ್ಯಪ್ರಿಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪದೇ ಪದೇ ಕುಡುಕರನ್ನೇ ಟಾರ್ಗೆಟ್ ಮಾಡುತ್ತಿದೆ” ಎಂದು ಮದ್ಯದ ವ್ಯಾಪಾರಿಗಳು ಹಾಗೂ ಗ್ರಾಹಕರು ಕಿಡಿಕಾರಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us