AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Lockdown: ಕರ್ನಾಟಕದಲ್ಲಿ ವಾರದ ದಿನಗಳಿಗೂ ಲಾಕ್​ಡೌನ್​ ವಿಸ್ತರಿಸುವ ಬಗ್ಗೆ ಚಿಂತನೆ; ಇಂದಿನ ಸಭೆಯಲ್ಲಿ ಮಹತ್ವದ ನಿರ್ಧಾರ

Karnataka Lockdown Updates: ಪ್ರಸ್ತುತ ಚಾಲ್ತಿಯಲ್ಲಿರುವ ಮಾರ್ಗಸೂಚಿಗಳ ಪ್ರಕಾರ ಮೇ 4ರ ತನಕ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಆದರೆ, ಈಗ ಕರ್ಫ್ಯೂವನ್ನು ವಾರದ ದಿನಗಳಿಗೂ ವಿಸ್ತರಿಸುವ ಕುರಿತು ಇಂದಿನ ಸಭೆಯಲ್ಲಿ ಚರ್ಚೆಯಾಗಲಿದೆ.

Karnataka Lockdown: ಕರ್ನಾಟಕದಲ್ಲಿ ವಾರದ ದಿನಗಳಿಗೂ ಲಾಕ್​ಡೌನ್​ ವಿಸ್ತರಿಸುವ ಬಗ್ಗೆ ಚಿಂತನೆ; ಇಂದಿನ ಸಭೆಯಲ್ಲಿ ಮಹತ್ವದ ನಿರ್ಧಾರ
ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ
Skanda
|

Updated on:Apr 26, 2021 | 10:52 AM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಅತ್ಯಂತ ಗಂಭೀರ ಸ್ವರೂಪಕ್ಕೆ ತಿರುಗಿದ್ದು, ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಮತ್ತು ವೀಕೆಂಡ್ ಕರ್ಫ್ಯೂ ಮೊರೆ ಹೋಗಿದೆ. ಇದರ ಮುಂದುವರೆದ ಭಾಗವಾಗಿ ವಾರಪೂರ್ತಿ ಕರ್ಫ್ಯೂ ವಿಧಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದ್ದು ಈ ಬಗ್ಗೆ ಇಂದು ಮಹತ್ವದ ತೀರ್ಮಾನ ಹೊರಬೀಳಲಿದೆ. ಬೆಂಗಳೂರಿನಲ್ಲಿ ಪ್ರತಿನಿತ್ಯ 20 ಸಾವಿರಕ್ಕೂ ಅಧಿಕ ಸೋಂಕಿತರು ಪತ್ತೆಯಾಗುವ ಮಟ್ಟಕ್ಕೆ ಪರಿಸ್ಥಿತಿ ಉಲ್ಬಣಿಸಿರುವುದರಿಂದ ಕಠಿಣ ಕ್ರಮಗಳನ್ನು ಕೈಗೊಳ್ಳುವುದು ಅನಿವಾರ್ಯ ಎಂಬ ಅಭಿಪ್ರಾಯ ತಜ್ಞರ ವಲಯದಲ್ಲಿ ಕೇಳಿಬರುತ್ತಿದೆ.

ಪ್ರಸ್ತುತ ಚಾಲ್ತಿಯಲ್ಲಿರುವ ಮಾರ್ಗಸೂಚಿಗಳ ಪ್ರಕಾರ ಮೇ 4ರ ತನಕ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಮತ್ತು ನೈಟ್ ಕರ್ಫ್ಯೂ ಜಾರಿಯಲ್ಲಿರಲಿದೆ. ಆದರೆ, ಈಗ ಕರ್ಫ್ಯೂವನ್ನು ವಾರದ ದಿನಗಳಿಗೂ ವಿಸ್ತರಿಸುವ ಕುರಿತು ಚರ್ಚೆಯಾಗಲಿದೆ. ಈ ಬಗ್ಗೆ ನಿನ್ನೆ (ಏಪ್ರಿಲ್ 25) ಅಭಿಪ್ರಾಯ ಹಂಚಿಕೊಂಡಿದ್ದ ಸಚಿವ ಜಗದೀಶ್ ಶೆಟ್ಟರ್, ನಾವು ಲಾಕ್​ಡೌನ್ ಪರವಾಗಿ ಇಲ್ಲ. ಆದರೆ, ಪರಿಸ್ಥಿತಿ ಕಠಿಣ ನಿರ್ಧಾರವನ್ನು ಕೈಗೊಳ್ಳಬೇಕಾದ ಅನಿವಾರ್ಯತೆ ಸೃಷ್ಟಿಸಿದೆ. ಕೊರೊನಾ ಹಬ್ಬುವುದನ್ನು ತಡೆಗಟ್ಟಲು 10-12 ದಿನಗಳ ಮಟ್ಟಿಗಾದರೂ ಕ್ರಮ ಕೈಗೊಳ್ಳಲೇಬೇಕಿದೆ ಎಂದು ಹೇಳಿದ್ದರು.

ರಾಜ್ಯ ಸರ್ಕಾರದ ಬಹುಪಾಲು ಸಚಿವರು ಲಾಕ್​ಡೌನ್​ ಬೇಡವೆಂದೇ ಬಾಯಿಮಾತಿಗೆ ಹೇಳುತ್ತಿರುವರಾದರೂ ಪರಿಸ್ಥಿತಿಯನ್ನು ನೋಡಿದರೆ ಕಠಿಣ ಕ್ರಮ ಜಾರಿಯಾಗುವುದು ಖಚಿತ ಎಂದು ಸರ್ಕಾರದ ಮೂಲಗಳು ಹೇಳುತ್ತಿವೆ. ಜತೆಗೆ, ಇಂದಿನ ಸಭೆಯಲ್ಲಿ ಕೊರೊನಾ ಲಸಿಕೆ ಬಗ್ಗೆಯೂ ಚರ್ಚೆ ನಡೆಯಲಿದ್ದು, ಉಚಿತ ಲಸಿಕೆ ವಿತರಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಮಾತುಕತೆ ಆಗಲಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಮಾಡಲು ಆಗದು; ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ 

ಕೇಂದ್ರದಿಂದ ಆಮ್ಲಜನಕ ಬರದಿದ್ದರೆ ಕೆಲವು ಆಸ್ಪತ್ರೆ ಮುಚ್ಚಬೇಕಾದ ಪರಿಸ್ಥಿತಿ ಬರಬಹುದು; ಸಿಎಂ​ ಬಿಎಸ್​ ಯಡಿಯೂರಪ್ಪ

Published On - 10:51 am, Mon, 26 April 21

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!