AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lockdown Guidelines: ಜೂನ್ 14ರವರೆಗೆ ಲಾಕ್​ಡೌನ್ ಮುಂದುವರಿಕೆ; 500 ಕೋಟಿ ಆರ್ಥಿಕ ಪ್ಯಾಕೇಜ್: ಸಿಎಂ ಯಡಿಯೂರಪ್ಪ ಘೋಷಣೆ

CM BS Yediyurappa PC Highlights: ಮೀನುಗಾರರಿಗೆ, ಮುಜರಾಯಿ ಇಲಾಖೆ ನೋಂದಾಯಿತ ಅರ್ಚಕರು, ಮಸೀದಿಗಳ ಧಾರ್ಮಿಕ ಪೂಜಾರಿಗಳು, ಚಲನಚಿತ್ರ ಕಾರ್ಮಿಕರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಪ್ಯಾಕೇಜ್ ಘೋಷಿಸಲಾಗಿದೆ.

Lockdown Guidelines: ಜೂನ್ 14ರವರೆಗೆ ಲಾಕ್​ಡೌನ್ ಮುಂದುವರಿಕೆ; 500 ಕೋಟಿ ಆರ್ಥಿಕ ಪ್ಯಾಕೇಜ್: ಸಿಎಂ ಯಡಿಯೂರಪ್ಪ ಘೋಷಣೆ
ಬಿ.ಎಸ್​.ಯಡಿಯೂರಪ್ಪ
guruganesh bhat
|

Updated on:Jun 03, 2021 | 5:37 PM

Share

ಬೆಂಗಳೂರು: ರಾಜ್ಯದಲ್ಲಿ 1 ವಾರ ಲಾಕ್​ಡೌನ್ ಮುಂದುವರೆಸಿ ಸಿಎಂ ಯಡಿಯೂರಪ್ಪ ಘೋಷಣೆ ಮಾಡಿದ್ದು, ಜೂನ್ 14ರವರೆಗೆ ಲಾಕ್​ಡೌನ್ ಜಾರಿಯಲ್ಲಿರಲಿದೆ. ಅಲ್ಲದೇ 500 ಕೋಟಿ ರೂಪಾಯಿಗಳ ಲಾಕ್​ಡೌನ್ ಪ್ಯಾಕೇಜ್​ನ್ನು ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ. ಮೀನುಗಾರರಿಗೆ, ಮುಜರಾಯಿ ಇಲಾಖೆ ನೋಂದಾಯಿತ ಅರ್ಚಕರು, ಮಸೀದಿಗಳ ಧಾರ್ಮಿಕ ಪೂಜಾರಿಗಳು, ಚಲನಚಿತ್ರ ಕಾರ್ಮಿಕರು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರಿಗೆ ಪ್ಯಾಕೇಜ್ ಘೋಷಿಸಲಾಗಿದೆ.

ಎರಡನೇ ಹಂತದಲ್ಲಿ ಸುಮಾರು ₹500 ಕೋಟಿ ಪ್ಯಾಕೇಜ್​ ಘೋಷಿಸಿರುವ ಸಿಎಂ ಯಡಿಯೂರಪ್ಪ, ತಲಾ 3000ದಂತೆ ಮಗ್ಗಗಳ ಕಾರ್ಮಿಕರಿಗೆ, ಚಲನಚಿತ್ರ, ದೂರದರ್ಶನ ಕಲಾವಿದರಿಗೆ ತಲಾ ₹3000, ಮೀನುಗಾರರಿಗೆ ತಲಾ 3000 ರೂ, ಅರ್ಚಕರು, ಅಡುಗೆ ಕೆಲಸಗಾರರಿಗೆ ತಲಾ ₹3000, ಸಿ ವರ್ಗದ ದೇವಸ್ಥಾನದ ಅರ್ಚಕರು, ಅಡುಗೆ ಕೆಲಸ, ಸಹಾಯಕರು, ಮಸೀದಿ ಫೇಶಿಮಾಂ, ಮೌಂಜನ್​ಗೆ ತಲಾ ₹3000 ಆಶಾ ಕಾರ್ಯಕರ್ತೆಯರಿಗೂ ತಲಾ ತಲಾ ₹3000, ಅಂಗನವಾಡಿ ಕಾರ್ಯಕರ್ತೆ, ಸಹಾಯಕರಿಗೆ ತಲಾ ₹2000, ಶಾಲಾ ಮಕ್ಕಳಿಗೆ ಜೂನ್, ಜುಲೈನಲ್ಲಿ ಹಾಲಿನ ಪುಡಿ ನೀಡಿಕೆ, ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕರಿಗೆ ತಲಾ 5000 ರೂ. ಸಹಾಯ ಧನ ಘೋಷಿಸಿದ್ದಾರೆ.

ಪಾಸಿಟಿವಿಟಿ ರೇಟ್​ ಶೇ.5ಕ್ಕಿಂತ ಕಡಿಮೆಯಾದರೆ ರಿಲೀಫ್ ನೀಡಲಾಗುವುದು. ಲಾಕ್​ಡೌನ್​ ನಿಯಮಗಳನ್ನು ಸಡಿಲ ಮಾಡಲಾಗುವುದು. ಜನರು ಸಹಕರಿಸಿದರೆ ಲಾಕ್​ಡೌನ್​ ಸಡಿಲಿಸಲಾಗುವುದು. ಆದರೆ ಒಂದು ವಾರ ಯಾವುದೇ ಬದಲಾವಣೆ ಇಲ್ಲ ಎಂದು ವಿಧಾನಸೌಧದಲ್ಲಿ ಸಿಎಂ ಯಡಿಯೂರಪ್ಪ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಇದನ್ನೂ ಓದಿ: ‘ಕೇಂದ್ರ ಸರ್ಕಾರವೇ ಕೊವಿಡ್​ 19 ಲಸಿಕೆ ಖರೀದಿಸಿ ಪೂರೈಕೆ ಮಾಡಲಿ..’-ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ಒಡಿಶಾ ಸಿಎಂ

ಜೂನ್ ತಿಂಗಳಲ್ಲಿ ರಾಜ್ಯದ 60 ಲಕ್ಷಕ್ಕೂ ಹೆಚ್ಚು ಜನರಿಗೆ ಕೊವಿಡ್ ಲಸಿಕೆ ವಿತರಿಸಲು ಸಿದ್ಧತೆ: ಸಿಎಂ ಯಡಿಯೂರಪ್ಪ

(Karnataka lockdown extended till June 14 CM BS Yediyurappa announces 500 crore package)

Published On - 5:24 pm, Thu, 3 June 21

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು