AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Lockdown: ಕರ್ನಾಟಕ ಲಾಕ್​ಡೌನ್ ವಿಸ್ತರಣೆ; ನಾಳೆ ನಡೆಯಲಿರುವ ಸಭೆಯಲ್ಲೇ ಅಂತಿಮ ತೀರ್ಮಾನ ಖಚಿತ

Lockdown Extension: 2ನೇ ಹಂತದ ಲಾಕ್​ಡೌನ್ ಘೋಷಣೆ ಆಗುತ್ತಿದ್ದಂತೆಯೇ ಸ್ವತಃ ಮುಖ್ಯಮಂತ್ರಿಗಳೇ ಪ್ಯಾಕೇಜ್ ಘೋಷಣೆ ಮಾಡುತ್ತಾರೆ. ಸದ್ಯದ ಪರಿಸ್ಥಿತಿ ಅವಲೋಕಿಸಿ ಪ್ಯಾಕೇಜ್ ಘೋಷಣೆ ಮಾಡಲಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸಚಿವ ಆರ್. ಅಶೋಕ್ ತಿಳಿಸಿದರು.

Karnataka Lockdown: ಕರ್ನಾಟಕ ಲಾಕ್​ಡೌನ್ ವಿಸ್ತರಣೆ; ನಾಳೆ ನಡೆಯಲಿರುವ ಸಭೆಯಲ್ಲೇ ಅಂತಿಮ ತೀರ್ಮಾನ ಖಚಿತ
ಲಾಕ್ಡೌನ್
Follow us
guruganesh bhat
|

Updated on:May 18, 2021 | 6:19 PM

ರಾಮನಗರ: ಕರ್ನಾಟಕದಲ್ಲಿ ಲಾಕ್‌ಡೌನ್ ವಿಸ್ತರಣೆ ಬಗ್ಗೆ ನಾಳೆ ಹನ್ನೊಂದು ಗಂಟೆಗೆ ನಡೆಯಲಿರುವ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ. ಎಲ್ಲರ ಸಲಹೆ ಪಡೆದು ಅಂತಿಮ ತೀರ್ಮಾನ ಮಾಡಲಾಗುತ್ತದೆ ಎಂದು ರಾಮನಗರದಲ್ಲಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ತಿಳಿಸಿದರು.

ಆಯಾ ಜಿಲ್ಲೆಯವರು ಲಾಕ್ ಡೌನ್ ವಿಸ್ತರಣೆ ಮಾಡಿಕೊಳ್ಳಲು ಆಗುವುದಿಲ್ಲ. ಕೆಲವೊಂದು ನಿರ್ವಹಣೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಇದೆ. ನಾಳೆ ಬೆಳಗ್ಗೆ ಹನ್ನೊಂದು ಗಂಟೆಗೆ ಸಭೆ ಸೇರುತ್ತಿದ್ದೇವೆ. ಎಲ್ಲರ ಸಲಹೆ ಪಡೆದು ತೀರ್ಮಾನ ಮಾಡಲಾಗುತ್ತದೆ. ಪರಿಸ್ಥಿತಿ ನೋಡಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

ಜನರು ನಗರಪ್ರದೇಶ ಬಿಟ್ಟು ಹಳ್ಳಿಗಳಿಗೆ ಹೋಗಿರುವ ಕಾರಣ ಗ್ರಾಮೀಣ ಭಾಗದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿವೆ. ಹೀಗಾಗಿ ವೈದ್ಯರು ಗ್ರಾಮೀಣ ಭಾಗದ ಕಡೆ ಹೋಗಬೇಕು. ಬೆಂಗಳೂರು ಗ್ರಾಮಾಂತರದಲ್ಲಿ ಪೈಲಟ್ ಪ್ರಾಜೆಕ್ಟ್‌ಗೆ ಚಾಲನೆ ನೀಡಲಾಗಿದೆ. ಈ ಯೋಜನೆಗೆ ನರ್ಸಿಂಗ್ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಬಳಸುತ್ತೇವೆ ಎಂದು ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಲಾಕ್​ಡೌನ್ ವಿಸ್ತರಣೆ ಬಗ್ಗೆ ಕಂದಾಯ ಸಚಿವರು ಹೇಳೋದೇನು? ಲಾಕ್‌ಡೌನ್ ಮುಂದುವರಿಸಬೇಕೆಂಬುದು ನನ್ನ ಅಭಿಪ್ರಾಯವಾಗಿದ್ದು, ಆದರೆ ಲಾಕ್‌ಡೌನ್ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸುತ್ತಾರೆ ಎಂದು ಉಡುಪಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಮಹಾರಾಷ್ಟ್ರ, ಕೇರಳ, ದೆಹಲಿಯಲ್ಲಿ ರಾಜ್ಯದಲ್ಲೂ ಲಾಕ್‌ಡೌನ್ ಮುಂದುವರಿಸಿದರೆ ಉತ್ತಮ. 2ನೇ ಹಂತದ ಲಾಕ್​ಡೌನ್ ಘೋಷಣೆ ಆಗುತ್ತಿದ್ದಂತೆಯೇ ಸ್ವತಃ ಮುಖ್ಯಮಂತ್ರಿಗಳೇ ಪ್ಯಾಕೇಜ್ ಘೋಷಣೆ ಮಾಡುತ್ತಾರೆ. ಸದ್ಯದ ಪರಿಸ್ಥಿತಿ ಅವಲೋಕಿಸಿ ಪ್ಯಾಕೇಜ್ ಘೋಷಣೆ ಮಾಡಲಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸಚಿವ ಆರ್. ಅಶೋಕ್ ತಿಳಿಸಿದರು.

ಇದನ್ನೂ ಓದಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 4 ಲಕ್ಷಕ್ಕೂ ಹೆಚ್ಚು ಕೊವಿಡ್ ಸೋಂಕಿತರು ಗುಣಮುಖರಾಗಿದ್ದಾರೆ, ಈ ಟ್ರೆಂಡ್ ಮುಂದುವರೆಯಬೇಕು; ಲವ್ ಅಗರ್ವಾಲ್

ಕೊವಿಡ್ ಸಾವಿನ ಸಂಖ್ಯೆಯಲ್ಲಿ ವ್ಯತ್ಯಾಸ; ಬಿಹಾರ ಸರ್ಕಾರಕ್ಕೆ ಪಾಟ್ನಾ ಹೈಕೋರ್ಟ್ ತರಾಟೆ

(Karnataka Lockdown extending decision will be decided tomorrow says DCM Dr.Ashwath Narayan)

Published On - 6:13 pm, Tue, 18 May 21

ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಮೊದಲ ಲೇಖಕಿ ಬಾನು ಮುಷ್ತಾಕ್
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಇತ್ತೀಚಿಗೆ ಪತಿ-ಪತ್ನಿ ನಡುವೆ ಪದೇಪದೆ ಜಗಳ ಅಗುತಿತ್ತು; ಸಂಬಂಧಿಕರ ಮಾತು
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಹೆಚ್​​ಎಎಲ್ ನೆಹರೂರವರು ಭಾರತಕ್ಕೆ ನೀಡಿರುವ ಕೊಡುಗೆ ಅಲ್ಲ: ಯದುವೀರ್
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ಕರ್ನಾಟಕದಲ್ಲಿ ಭಾರೀ ಮಳೆ ಎಚ್ಚರಿಕೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ವಿಧಾನಸಭೆ ವಿಸರ್ಜಸಿ ಚುನಾವಣೆ ಎದುರಿಸುವಂತೆ ಸರ್ಕಾರಕ್ಕೆ ಅಶ್ವಥ್ ಸವಾಲು
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್