AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Lockdown: ಕರ್ನಾಟಕ ಲಾಕ್​ಡೌನ್ ವಿಸ್ತರಣೆ; ನಾಳೆ ನಡೆಯಲಿರುವ ಸಭೆಯಲ್ಲೇ ಅಂತಿಮ ತೀರ್ಮಾನ ಖಚಿತ

Lockdown Extension: 2ನೇ ಹಂತದ ಲಾಕ್​ಡೌನ್ ಘೋಷಣೆ ಆಗುತ್ತಿದ್ದಂತೆಯೇ ಸ್ವತಃ ಮುಖ್ಯಮಂತ್ರಿಗಳೇ ಪ್ಯಾಕೇಜ್ ಘೋಷಣೆ ಮಾಡುತ್ತಾರೆ. ಸದ್ಯದ ಪರಿಸ್ಥಿತಿ ಅವಲೋಕಿಸಿ ಪ್ಯಾಕೇಜ್ ಘೋಷಣೆ ಮಾಡಲಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸಚಿವ ಆರ್. ಅಶೋಕ್ ತಿಳಿಸಿದರು.

Karnataka Lockdown: ಕರ್ನಾಟಕ ಲಾಕ್​ಡೌನ್ ವಿಸ್ತರಣೆ; ನಾಳೆ ನಡೆಯಲಿರುವ ಸಭೆಯಲ್ಲೇ ಅಂತಿಮ ತೀರ್ಮಾನ ಖಚಿತ
ಲಾಕ್ಡೌನ್
guruganesh bhat
|

Updated on:May 18, 2021 | 6:19 PM

Share

ರಾಮನಗರ: ಕರ್ನಾಟಕದಲ್ಲಿ ಲಾಕ್‌ಡೌನ್ ವಿಸ್ತರಣೆ ಬಗ್ಗೆ ನಾಳೆ ಹನ್ನೊಂದು ಗಂಟೆಗೆ ನಡೆಯಲಿರುವ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ. ಎಲ್ಲರ ಸಲಹೆ ಪಡೆದು ಅಂತಿಮ ತೀರ್ಮಾನ ಮಾಡಲಾಗುತ್ತದೆ ಎಂದು ರಾಮನಗರದಲ್ಲಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥ್ ನಾರಾಯಣ ತಿಳಿಸಿದರು.

ಆಯಾ ಜಿಲ್ಲೆಯವರು ಲಾಕ್ ಡೌನ್ ವಿಸ್ತರಣೆ ಮಾಡಿಕೊಳ್ಳಲು ಆಗುವುದಿಲ್ಲ. ಕೆಲವೊಂದು ನಿರ್ವಹಣೆ ಮಾಡಿಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಇದೆ. ನಾಳೆ ಬೆಳಗ್ಗೆ ಹನ್ನೊಂದು ಗಂಟೆಗೆ ಸಭೆ ಸೇರುತ್ತಿದ್ದೇವೆ. ಎಲ್ಲರ ಸಲಹೆ ಪಡೆದು ತೀರ್ಮಾನ ಮಾಡಲಾಗುತ್ತದೆ. ಪರಿಸ್ಥಿತಿ ನೋಡಿ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಅವರು ತಿಳಿಸಿದರು.

ಜನರು ನಗರಪ್ರದೇಶ ಬಿಟ್ಟು ಹಳ್ಳಿಗಳಿಗೆ ಹೋಗಿರುವ ಕಾರಣ ಗ್ರಾಮೀಣ ಭಾಗದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗಿವೆ. ಹೀಗಾಗಿ ವೈದ್ಯರು ಗ್ರಾಮೀಣ ಭಾಗದ ಕಡೆ ಹೋಗಬೇಕು. ಬೆಂಗಳೂರು ಗ್ರಾಮಾಂತರದಲ್ಲಿ ಪೈಲಟ್ ಪ್ರಾಜೆಕ್ಟ್‌ಗೆ ಚಾಲನೆ ನೀಡಲಾಗಿದೆ. ಈ ಯೋಜನೆಗೆ ನರ್ಸಿಂಗ್ ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ಬಳಸುತ್ತೇವೆ ಎಂದು ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದರು.

ಲಾಕ್​ಡೌನ್ ವಿಸ್ತರಣೆ ಬಗ್ಗೆ ಕಂದಾಯ ಸಚಿವರು ಹೇಳೋದೇನು? ಲಾಕ್‌ಡೌನ್ ಮುಂದುವರಿಸಬೇಕೆಂಬುದು ನನ್ನ ಅಭಿಪ್ರಾಯವಾಗಿದ್ದು, ಆದರೆ ಲಾಕ್‌ಡೌನ್ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸುತ್ತಾರೆ ಎಂದು ಉಡುಪಿಯಲ್ಲಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು.

ಮಹಾರಾಷ್ಟ್ರ, ಕೇರಳ, ದೆಹಲಿಯಲ್ಲಿ ರಾಜ್ಯದಲ್ಲೂ ಲಾಕ್‌ಡೌನ್ ಮುಂದುವರಿಸಿದರೆ ಉತ್ತಮ. 2ನೇ ಹಂತದ ಲಾಕ್​ಡೌನ್ ಘೋಷಣೆ ಆಗುತ್ತಿದ್ದಂತೆಯೇ ಸ್ವತಃ ಮುಖ್ಯಮಂತ್ರಿಗಳೇ ಪ್ಯಾಕೇಜ್ ಘೋಷಣೆ ಮಾಡುತ್ತಾರೆ. ಸದ್ಯದ ಪರಿಸ್ಥಿತಿ ಅವಲೋಕಿಸಿ ಪ್ಯಾಕೇಜ್ ಘೋಷಣೆ ಮಾಡಲಾಗುತ್ತದೆ ಎಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಸಚಿವ ಆರ್. ಅಶೋಕ್ ತಿಳಿಸಿದರು.

ಇದನ್ನೂ ಓದಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 4 ಲಕ್ಷಕ್ಕೂ ಹೆಚ್ಚು ಕೊವಿಡ್ ಸೋಂಕಿತರು ಗುಣಮುಖರಾಗಿದ್ದಾರೆ, ಈ ಟ್ರೆಂಡ್ ಮುಂದುವರೆಯಬೇಕು; ಲವ್ ಅಗರ್ವಾಲ್

ಕೊವಿಡ್ ಸಾವಿನ ಸಂಖ್ಯೆಯಲ್ಲಿ ವ್ಯತ್ಯಾಸ; ಬಿಹಾರ ಸರ್ಕಾರಕ್ಕೆ ಪಾಟ್ನಾ ಹೈಕೋರ್ಟ್ ತರಾಟೆ

(Karnataka Lockdown extending decision will be decided tomorrow says DCM Dr.Ashwath Narayan)

Published On - 6:13 pm, Tue, 18 May 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?