AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

#KarnatakaLockdown: ‘ಉಪಚುನಾವಣೆ ಮುಗೀತಾ ಮುಖ್ಯಮಂತ್ರಿಗಳೇ’: ಲಾಕ್​ಡೌನ್ ಘೋಷಣೆಯ ಬೆನ್ನಲ್ಲೇ ಟ್ವಿಟರ್​ನಲ್ಲಿ ಮೀಮ್​ಗಳ ಸುರಿಮಳೆ

Karnataka Lockdown: ಸರ್ಕಾರದ ಕ್ರಮವನ್ನು ಹಲವು ವೈದ್ಯರು ಸ್ವಾಗತಿಸಿದ್ದಾರೆ. ವಿಷಾದದ ಆಳದಲ್ಲೂ ನಗುವಿನ ಅಲೆ ಚಿಮ್ಮಿಸುವುದರಲ್ಲಿ ಖ್ಯಾತರಾದ ಕೆಲ ನೆಟಿಜನ್ನರು ಮೀಮ್​ಗಳನ್ನು ಹರಿಬಿಡುವ ಮೂಲಕ ನಗೆಯುಕ್ಕಿಸಿದ್ದಾರೆ.

#KarnatakaLockdown: ‘ಉಪಚುನಾವಣೆ ಮುಗೀತಾ ಮುಖ್ಯಮಂತ್ರಿಗಳೇ’: ಲಾಕ್​ಡೌನ್ ಘೋಷಣೆಯ ಬೆನ್ನಲ್ಲೇ ಟ್ವಿಟರ್​ನಲ್ಲಿ ಮೀಮ್​ಗಳ ಸುರಿಮಳೆ
ಲಾಕ್​ಡೌನ್ ಘೋಷಣೆಯ ನಂತರ ತೇಲಿ ಬಂದಿರುವ ಮೀಮ್​ಗಳು
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 26, 2021 | 6:20 PM

Share

ಕೊರೊನಾ ಸೋಂಕಿನ 2ನೇ ಅಲೆ ಕಾರಣದಿಂದ ತೀವ್ರ ಆರೋಗ್ಯ ಬಿಕ್ಕಟ್ಟು ಎದುರಿಸುತ್ತಿರುವ ಕರ್ನಾಟಕದಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲೆಂದು ಸರ್ಕಾರವು ಸೋಮವಾರ (ಏಪ್ರಿಲ್ 26) ಕಠಿಣ ನಿರ್ಬಂಧ ವಿಧಿಸಲು ಮುಂದಾಗಿದೆ. ನಾಳೆಯಿಂದ 14 ದಿನಗಳ ಅವಧಿಗೆ ರಾಜ್ಯದಲ್ಲಿ ಕೊವಿಡ್ ಕರ್ಫ್ಯೂ ಇರುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸೌಧದಲ್ಲಿ ನಡೆಸಿದ ಮಾಧ್ಯಮ ಗೋಷ್ಠಿಯಲ್ಲಿ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿರುವ ಪ್ರಸ್ತುತ ಇರುವ ಅತ್ಯಂತ ಗಂಭೀರ ಮತ್ತು ಚಿಂತಾಜನಕ ಸ್ಥಿತಿಯಲ್ಲಿ ಅನಿವಾರ್ಯವಾಗಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ. ಸರ್ಕಾರದ ಕ್ರಮವನ್ನು ಹಲವು ವೈದ್ಯರು ಸ್ವಾಗತಿಸಿದ್ದಾರೆ. ವಿಷಾದದ ಆಳದಲ್ಲೂ ನಗುವಿನ ಅಲೆ ಚಿಮ್ಮಿಸುವುದರಲ್ಲಿ ಖ್ಯಾತರಾದ ಕೆಲ ನೆಟಿಜನ್ನರು ಮೀಮ್​ಗಳನ್ನು ಹರಿಬಿಡುವ ಮೂಲಕ ನಗೆಯುಕ್ಕಿಸಿದ್ದಾರೆ.

ಈ ಪೈಕಿ ಎಲ್ಲರ ಗಮನ ಸೆಳೆಯುತ್ತಿರುವುದು ಸಂಗೀತ ನಿರ್ದೇಶಕ ರಾಜೇಶ್​ ಕೃಷ್ಣನ್ ಟ್ವೀಟ್​ ಮಾಡಿರುವ ವಿಡಿಯೊ ತುಣುಕು. ‘ಗುರುಶಿಷ್ಯರು’ ಸಿನಿಮಾದ ದೃಶ್ಯವೊಂದನ್ನು ಅವರು ಹಂಚಿಕೊಂಡಿದ್ದಾರೆ. ‘ನಿಮ್ಮ ಮುಂದಿನ ಕಾರ್ಯಕ್ರಮವೇನು’ ಎಂಬ ಕಲಾವಿದರ ರಾಜಾನಂದ ಅವರ ಪ್ರಶ್ನೆಗೆ ಕಲಾವಿದ ಮುಸುರಿ ಕೃಷ್ಣಮೂರ್ತಿ ಹೇಳು ಸಾಲುಸಾಲು ಪ್ಲಾನ್​ಗಳು ಟ್ವಿಟರ್​ ಬಳಕೆದಾರರಲ್ಲಿ ನಗೆಯುಕ್ಕಿಸುತ್ತಿವೆ.

ಮಂಗಳೂರಿನ ಕೆಎಂಸಿ ಆಸ್ಪತ್ರೆಯ ನಿರ್ದೇಶಕರಾದ ಡಾ.ಪಿ.ಕಾಮತ್, ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ. ‘ಕರ್ನಾಟಕವು ನಾಳೆಯಿಂದ 15 ದಿನಗಳ ಲಾಕ್​ಡೌನ್​ಗೆ ಹೋಗಲಿದೆ. ರಾಜ್ಯದಲ್ಲಿ ಎಲ್ಲೆಲ್ಲೂ ವೈದ್ಯಕೀಯ ಸಿಬ್ಬಂದಿ ಹಾಗೂ ಬೆಡ್​ಗಳ ಕೊರತೆ ಕಾಣಿಸಿಕೊಂಡಿದೆ. ವೈದ್ಯಕೀಯ ಸಿಬ್ಬಂದಿಯ ಮೇಲೆ ವಿಪರೀತ ಒತ್ತಡವಿದೆ. ನಾವೆಲ್ಲರೂ ಇನ್ನು 15 ದಿನಗಳಲ್ಲಿ ನಮ್ಮ ಸಂಪನ್ಮೂಲಗಳನ್ನು ಒಗ್ಗೂಡಿಸಿಕೊಂಡು ಪುನರ್ ಸಂಘಟಿತರಾಗಬೇಕು. ಅಮೂಲ್ಯ ಜೀವಗಳನ್ನು ಉಳಿಸಲು ಸಿದ್ಧರಾಗಬೇಕು’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ರಾಜ್ಯ ಸರ್ಕಾರದ ನಿರ್ಧಾರವನ್ನು ಉಪಚುನಾವಣೆಗಳ ನೆಲೆಯಲ್ಲಿ ಶಿವಾನಂದ ಮಲಗಾವಿ ವಿಮರ್ಶಿಸಿದ್ದಾರೆ. ‘ರಾಜ್ಯ ಸರ್ಕಾರವು ಈಗ ಲಾಕ್​ಡೌನ್ ಘೋಷಿಸಿದೆ. ಬಹುಶಃ ಎಲ್ಲ ಉಪಚುನಾವಣೆಗಳನ್ನು ಯಶಸ್ವಿಯಾಗಿ ಅವರು ಪೂರೈಸಿದ್ದಾರೆ’ ಎಂದು ಅವರು ಲೇವಡಿ ಮಾಡಿದ್ದಾರೆ.

ಬೆಳಿಗ್ಗೆ 6ರಿಂದ 10ರವರೆಗೆ ಮಾತ್ರ ಅಂಗಡಿಗಳನ್ನು ತೆರೆಯಲು ಅವಕಾಶ ನೀಡುವ ರಾಜ್ಯ ಸರ್ಕಾರದ ಕ್ರಮವನ್ನೂ ಹಲವರು ವಿಮರ್ಶೆ ಮಾಡಿದ್ದಾರೆ. ‘ಕಳೆದ ವರ್ಷ ಪ್ರವೀಣ್ ಸೂದ್ ಅವರು ಅತ್ಯಗತ್ಯ ವಸ್ತುಗಳ ಮಾರಾಟದ ಅಂಗಡಿಗಳನ್ನು ದಿನವಿಡೀ ತೆರೆಯಲು ಅವಕಾಶ ನೀಡಿದ್ದರು. ಆದರೆ ಈ ವರ್ಷ ಮುಖ್ಯ ಕಾರ್ಯದರ್ಶಿ ಕೇವಲ 4 ಗಂಟೆಗಳ ಅವಧಿಗೆ ಅಂಗಡಿ ತೆರೆಯಲು ಅವಕಾಶ ನೀಡಿದ್ದಾರೆ. ಇದರಿಂದ ಅಂಗಡಿಗಳ ಎದುರು ಗುಂಪು ಸೇರುತ್ತದೆ. ಲಾಕ್​ಡೌನ್​ನ ಆಶಯ ವಿಫಲವಾಗುತ್ತದೆ’ ಎಂದು ಅನಂತು ಸುದರ್ಶನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಟ್ವಿಟರ್​ನಲ್ಲಿ ಗಮನ ಸೆಳೆದ ಕೆಲ ಮೀಮ್​ಗಳು ಇಲ್ಲಿವೆ..

(Karnataka Lockdown memes rise in twitter after Karnataka Government announces covid curfew to curtail pandemic)

ಇದನ್ನೂ ಓದಿ: ನಾಳೆಯಿಂದ ರಾಜ್ಯದಲ್ಲಿ ಕೊವಿಡ್ ಕರ್ಫ್ಯೂ: ಏನಿರುತ್ತೆ? ಏನಿರಲ್ಲ?

ಇದನ್ನೂ ಓದಿ: karnataka Covid Curfew: ರಾಜ್ಯದಲ್ಲಿ 14 ದಿನ ಕಟ್ಟುನಿಟ್ಟಿನ ಕರ್ಫ್ಯೂ ಘೋಷಿಸಿದ ಸಿಎಂ ಯಡಿಯೂರಪ್ಪ

Published On - 6:19 pm, Mon, 26 April 21

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ