AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Lockdown News: ಲಾಕ್​ಡೌನ್​ ಮಾಡೋದಾದರೆ ಪ್ರತಿ ಕುಟುಂಬಕ್ಕೂ 10 ಸಾವಿರ ರೂಪಾಯಿ ಕೊಡಲಿ – ಸಿದ್ದರಾಮಯ್ಯ

Karnataka Lockdown News: ಲಾಕ್​ಡೌನ್​ ಮಾಡುವುದೇ ಆದರೆ ಒಂದು ಕೋಟಿ ಕುಟುಂಬಗಳಿಗೆ ತಲಾ ಹತ್ತು ಸಾವಿರ ರೂಪಾಯಿ ನೀಡಲಿ. ಎಲ್ಲರಿಗೂ ಕಡ್ಡಾಯವಾಗಿ ಕೊರೊನಾ ಲಸಿಕೆ ವಿತರಿಸಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Karnataka Lockdown News: ಲಾಕ್​ಡೌನ್​ ಮಾಡೋದಾದರೆ ಪ್ರತಿ ಕುಟುಂಬಕ್ಕೂ 10 ಸಾವಿರ ರೂಪಾಯಿ ಕೊಡಲಿ - ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
Skanda
| Edited By: |

Updated on: Apr 12, 2021 | 1:07 PM

Share

ಬೀದರ್​: ರಾಜ್ಯದಲ್ಲಿ ಕೊರೊನಾ ಸೋಂಕಿನ ಭೀತಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಕಠಿಣ ಕ್ರಮದ ಕುರಿತು ಕರ್ನಾಟಕ ರಾಜ್ಯ ಸರ್ಕಾರ ಚಿಂತಿಸುತ್ತಿರುವ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಲಾಕ್​ಡೌನ್ ಕುರಿತು ಮಾತನಾಡಿ ಲಾಕ್​ಡೌನ್ ಮಾಡುವುದಾದರೆ ಪ್ರತಿ ಕುಟುಂಬಕ್ಕೂ ಹತ್ತು ಸಾವಿರ ರೂಪಾಯಿ ಕೊಟ್ಟು ಮಾಡಲಿ ಎಂದು ಹೇಳಿದ್ದಾರೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಈ ಸರ್ಕಾರದವರು ಸೋಂಕು ಕಡಿಮೆಯಾದ ಕೂಡಲೇ ಎಲ್ಲವಕ್ಕೂ ಅನುಮತಿ ನೀಡಿದರು. ಸಭೆ, ಸಮಾರಂಭಗಳು ಎಗ್ಗಿಲ್ಲದೇ ನಡೆಯುವಾಗ ಬಿಗಿ ಕ್ರಮ ಕೈಗೊಳ್ಳಲಿಲ್ಲ. ಈಗ ಲಾಕ್​ಡೌನ್​ ಅಂತಾರೆ. ಆದ್ರೆ ಸೋಂಕು ನಿಯಂತ್ರಣಕ್ಕೆ ಲಾಕ್​ಡೌನ್ ಪರಿಹಾರ ಅಲ್ಲ ಎಂದು ಟೀಕಿಸಿದ್ದಾರೆ.

ಕೊರೊನಾ ನಿಯಂತ್ರಿಸಲು ಲಾಕ್​ಡೌನ್ ಪರಿಹಾರ ಅಲ್ಲ. ಮೊದಲು ರೋಗ ಹೇಗೆ ಹರಡುತ್ತಿದೆ ಎನ್ನುವುದನ್ನು ಕಂಡುಹಿಡಿಯಬೇಕು. ಅದಕ್ಕೆ ಚಿಕಿತ್ಸೆ ಕೊಡಬೇಕು. ಆ ಮೂಲಕ ಅದನ್ನು ತಡೆಗಟ್ಟಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ ಲಾಕ್​ಡೌನ್​ ಮಾಡುವುದೇ ಆದರೆ ಒಂದು ಕೋಟಿ ಕುಟುಂಬಗಳಿಗೆ ತಲಾ ಹತ್ತು ಸಾವಿರ ರೂಪಾಯಿ ನೀಡಲಿ. ಎಲ್ಲರಿಗೂ ಕಡ್ಡಾಯವಾಗಿ ಕೊರೊನಾ ಲಸಿಕೆ ವಿತರಿಸಲಿ ಎಂದು ಆಗ್ರಹಿಸಿದ್ದಾರೆ.

ಸೋಂಕು ಇಳಿಮುಖವಾಗುತ್ತಿದ್ದಂತೆಯೇ ಹೊರಗಿನಿಂದ ಬಂದವರನ್ನು ಪರೀಕ್ಷೆ ಮಾಡಲಿಲ್ಲ. ಬಿಗಿ ಕ್ರಮ ಕೈಗೊಳ್ಳೊದು ಬಿಟ್ಟರು. ಎಲ್ಲವಕ್ಕೂ ಅನುಮತಿ ನೀಡಿದರು. ಈಗ ಸೋಂಕು ಹರಡುತ್ತಿರುವಾಗ ಎಚ್ಚೆತ್ತುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ, ಸರಕಾರ ಸರ್ವಪಕ್ಷ ನಿಯೋಗದ ಸಭೆ ಬಗ್ಗೆ ಮಾತನಾಡಿ ಅವರು ಕರೆಯದೇ ನಾನು ಹೋಗಲಾ ಎಂದು ಪ್ರಶ್ನಿಸಿ, ಸಭೆಗೆ ಕರೆಯಲಿ ಆಮೇಲೆ ನೋಡೋಣ ಎಂದಿದ್ದಾರೆ.

ಇದನ್ನೂ ಓದಿ: Karnataka Lockdown News: ಲಾಕ್​ಡೌನ್​ ಹೇರುವ ಪರಿಸ್ಥಿತಿ ತರಬೇಡಿ.. ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ, ಲಸಿಕೆ ತೆಗೆದುಕೊಳ್ಳಿ : ಪ್ರತಾಪ್​ ಸಿಂಹ ಮನವಿ 

Karnataka Lockdown Latest Updates: 2ನೇ ಅಲೆ ಸಿಕ್ಕಾಪಟ್ಟೆ ಡೇಂಜರಸ್: ಆರ್ಥಿಕ ಚಟುವಟಿಕೆಗೆ ಬ್ರೇಕ್ ಹಾಕದೇ ತಡೆಗಟ್ಟುವುದು ಅಸಾಧ್ಯ, ಲಾಕ್​ಡೌನ್​ ಮುನ್ಸೂಚನೆ?

(Karnataka Lockdown News: Siddaramaiah demands to provide Rs 10 thousand compensation for each family if government announces Lockdown)

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು