AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Lockdown News: ಲಾಕ್​ಡೌನ್​ ಮಾಡೋದಾದರೆ ಪ್ರತಿ ಕುಟುಂಬಕ್ಕೂ 10 ಸಾವಿರ ರೂಪಾಯಿ ಕೊಡಲಿ – ಸಿದ್ದರಾಮಯ್ಯ

Karnataka Lockdown News: ಲಾಕ್​ಡೌನ್​ ಮಾಡುವುದೇ ಆದರೆ ಒಂದು ಕೋಟಿ ಕುಟುಂಬಗಳಿಗೆ ತಲಾ ಹತ್ತು ಸಾವಿರ ರೂಪಾಯಿ ನೀಡಲಿ. ಎಲ್ಲರಿಗೂ ಕಡ್ಡಾಯವಾಗಿ ಕೊರೊನಾ ಲಸಿಕೆ ವಿತರಿಸಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

Karnataka Lockdown News: ಲಾಕ್​ಡೌನ್​ ಮಾಡೋದಾದರೆ ಪ್ರತಿ ಕುಟುಂಬಕ್ಕೂ 10 ಸಾವಿರ ರೂಪಾಯಿ ಕೊಡಲಿ - ಸಿದ್ದರಾಮಯ್ಯ
ವಿಪಕ್ಷ ನಾಯಕ ಸಿದ್ದರಾಮಯ್ಯ
Skanda
| Edited By: |

Updated on: Apr 12, 2021 | 1:07 PM

Share

ಬೀದರ್​: ರಾಜ್ಯದಲ್ಲಿ ಕೊರೊನಾ ಸೋಂಕಿನ ಭೀತಿ ಹೆಚ್ಚಳವಾಗುತ್ತಿರುವ ಹಿನ್ನೆಲೆ ಕಠಿಣ ಕ್ರಮದ ಕುರಿತು ಕರ್ನಾಟಕ ರಾಜ್ಯ ಸರ್ಕಾರ ಚಿಂತಿಸುತ್ತಿರುವ ಬೆನ್ನಲ್ಲೇ ವಿಪಕ್ಷ ನಾಯಕ ಸಿದ್ದರಾಮಯ್ಯ ಲಾಕ್​ಡೌನ್ ಕುರಿತು ಮಾತನಾಡಿ ಲಾಕ್​ಡೌನ್ ಮಾಡುವುದಾದರೆ ಪ್ರತಿ ಕುಟುಂಬಕ್ಕೂ ಹತ್ತು ಸಾವಿರ ರೂಪಾಯಿ ಕೊಟ್ಟು ಮಾಡಲಿ ಎಂದು ಹೇಳಿದ್ದಾರೆ. ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಸಿದ್ದರಾಮಯ್ಯ, ಈ ಸರ್ಕಾರದವರು ಸೋಂಕು ಕಡಿಮೆಯಾದ ಕೂಡಲೇ ಎಲ್ಲವಕ್ಕೂ ಅನುಮತಿ ನೀಡಿದರು. ಸಭೆ, ಸಮಾರಂಭಗಳು ಎಗ್ಗಿಲ್ಲದೇ ನಡೆಯುವಾಗ ಬಿಗಿ ಕ್ರಮ ಕೈಗೊಳ್ಳಲಿಲ್ಲ. ಈಗ ಲಾಕ್​ಡೌನ್​ ಅಂತಾರೆ. ಆದ್ರೆ ಸೋಂಕು ನಿಯಂತ್ರಣಕ್ಕೆ ಲಾಕ್​ಡೌನ್ ಪರಿಹಾರ ಅಲ್ಲ ಎಂದು ಟೀಕಿಸಿದ್ದಾರೆ.

ಕೊರೊನಾ ನಿಯಂತ್ರಿಸಲು ಲಾಕ್​ಡೌನ್ ಪರಿಹಾರ ಅಲ್ಲ. ಮೊದಲು ರೋಗ ಹೇಗೆ ಹರಡುತ್ತಿದೆ ಎನ್ನುವುದನ್ನು ಕಂಡುಹಿಡಿಯಬೇಕು. ಅದಕ್ಕೆ ಚಿಕಿತ್ಸೆ ಕೊಡಬೇಕು. ಆ ಮೂಲಕ ಅದನ್ನು ತಡೆಗಟ್ಟಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಅಲ್ಲದೇ ಲಾಕ್​ಡೌನ್​ ಮಾಡುವುದೇ ಆದರೆ ಒಂದು ಕೋಟಿ ಕುಟುಂಬಗಳಿಗೆ ತಲಾ ಹತ್ತು ಸಾವಿರ ರೂಪಾಯಿ ನೀಡಲಿ. ಎಲ್ಲರಿಗೂ ಕಡ್ಡಾಯವಾಗಿ ಕೊರೊನಾ ಲಸಿಕೆ ವಿತರಿಸಲಿ ಎಂದು ಆಗ್ರಹಿಸಿದ್ದಾರೆ.

ಸೋಂಕು ಇಳಿಮುಖವಾಗುತ್ತಿದ್ದಂತೆಯೇ ಹೊರಗಿನಿಂದ ಬಂದವರನ್ನು ಪರೀಕ್ಷೆ ಮಾಡಲಿಲ್ಲ. ಬಿಗಿ ಕ್ರಮ ಕೈಗೊಳ್ಳೊದು ಬಿಟ್ಟರು. ಎಲ್ಲವಕ್ಕೂ ಅನುಮತಿ ನೀಡಿದರು. ಈಗ ಸೋಂಕು ಹರಡುತ್ತಿರುವಾಗ ಎಚ್ಚೆತ್ತುಕೊಳ್ಳುತ್ತಿದ್ದಾರೆ ಎಂದು ಹೇಳಿದ್ದಾರೆ. ಅಲ್ಲದೇ, ಸರಕಾರ ಸರ್ವಪಕ್ಷ ನಿಯೋಗದ ಸಭೆ ಬಗ್ಗೆ ಮಾತನಾಡಿ ಅವರು ಕರೆಯದೇ ನಾನು ಹೋಗಲಾ ಎಂದು ಪ್ರಶ್ನಿಸಿ, ಸಭೆಗೆ ಕರೆಯಲಿ ಆಮೇಲೆ ನೋಡೋಣ ಎಂದಿದ್ದಾರೆ.

ಇದನ್ನೂ ಓದಿ: Karnataka Lockdown News: ಲಾಕ್​ಡೌನ್​ ಹೇರುವ ಪರಿಸ್ಥಿತಿ ತರಬೇಡಿ.. ಕೊರೊನಾ ಬಗ್ಗೆ ನಿರ್ಲಕ್ಷ್ಯ ಬೇಡ, ಲಸಿಕೆ ತೆಗೆದುಕೊಳ್ಳಿ : ಪ್ರತಾಪ್​ ಸಿಂಹ ಮನವಿ 

Karnataka Lockdown Latest Updates: 2ನೇ ಅಲೆ ಸಿಕ್ಕಾಪಟ್ಟೆ ಡೇಂಜರಸ್: ಆರ್ಥಿಕ ಚಟುವಟಿಕೆಗೆ ಬ್ರೇಕ್ ಹಾಕದೇ ತಡೆಗಟ್ಟುವುದು ಅಸಾಧ್ಯ, ಲಾಕ್​ಡೌನ್​ ಮುನ್ಸೂಚನೆ?

(Karnataka Lockdown News: Siddaramaiah demands to provide Rs 10 thousand compensation for each family if government announces Lockdown)

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ