AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾವಿದರಿಗೆ ಲಾಕ್​ಡೌನ್ ಪ್ಯಾಕೇಜ್: ಯಕ್ಷಗಾನದ ಯುವ ಕಲಾವಿದರಿಗೆ ಅನ್ಯಾಯ ತಪ್ಪಿಸಲು ವಯೋಮಿತಿಯನ್ನು 25ಕ್ಕೆ ಇಳಿಸಲು ಮನವಿ

Karnataka Lockdown Package: ಎಷ್ಟೋ ಯುವ ಕಲಾವಿದರು 15 ರ ಹರೆಯದಲ್ಲೇ ಯಕ್ಷಗಾನ ಮೇಳ ಸೇರುತ್ತಾರೆ. ಅಂತಹ ಕಲಾವಿದರಿಗೆ ಲಾಕ್​ಡೌನ್ ಪ್ಯಾಕೇಜ್ ಸಿಗದೇ ಅನ್ಯಾಯವಾಗಲಿದೆ. ತಮ್ಮ 15ನೇ ವಯಸ್ಸಿಗೇ ಯಕ್ಷಗಾನ ಮೇಳ ಸೇರಿ 10-20 ವರ್ಷ ಮೇಳಗಳಲ್ಲಿ ಸೇವೆ ಸಲ್ಲಿಸಿದ ಸುಮಾರು 200 ಕಲಾವಿದರು ಇದ್ದಾರೆ. ಅಂತಹ ಕಲಾವಿದರಿಗೆ ನೆರವು ಪಡೆಯುವ ಅರ್ಹತೆ ಪಡೆಯದಂತಾಗಿದೆ.

ಕಲಾವಿದರಿಗೆ ಲಾಕ್​ಡೌನ್ ಪ್ಯಾಕೇಜ್: ಯಕ್ಷಗಾನದ ಯುವ ಕಲಾವಿದರಿಗೆ ಅನ್ಯಾಯ ತಪ್ಪಿಸಲು ವಯೋಮಿತಿಯನ್ನು 25ಕ್ಕೆ ಇಳಿಸಲು ಮನವಿ
ಸಾಂದರ್ಭಿಕ ಚಿತ್ರ
Follow us
guruganesh bhat
|

Updated on:May 30, 2021 | 2:45 PM

ಉಡುಪಿ: ಕರ್ನಾಟಕದಲ್ಲಿ ಜಾರಿಯಲ್ಲಿರುವ ಕೊವಿಡ್ ಲಾಕ್​ಡೌನ್​ನಿಂದ ತೊಂದರೆಗೊಳಗಾದ ಕಲಾವಿದರಿಗೆ ಸರ್ಕಾರ ನೆರವು ಘೋಷಿಸಿದೆ. ಆದರೆ ನೆರವು ಪಡೆಯುವ ಕಲಾವಿದರಿಗೆ 35 ವರ್ಷ ಪೂರ್ಣಗೊಂಡಿರಬೇಕು ಎಂನ ನಿಯಮ ರೂಪಿಸಿದ್ದು, ಇದರಿಂದ ಯಕ್ಷಗಾನದ ಯುವ ಕಲಾವಿದರಿಗೆ ಅನ್ಯಾಯವಾಗಲಿದೆ ಎಂಬ ದೂರು ಕೇಳಿಬಂದಿದೆ. ಲಾಕ್​ಡೌನ್ ಪ್ಯಾಕೇಜ್ ಪಡೆಯಲು ನಿಗದಿಪಡಿಸಿರುವ ವಯೋಮಿತಿಯನ್ನು 35ರಿಂದ 25ಕ್ಕೆ ಇಳಿಸಲಯ ಸರ್ಕಾರಕ್ಕೆ 40 ವೃತ್ತಿಪರ ಮೇಳಗಳ ಕಲಾವಿದರು ಮನವಿ ಮಾಡಿದ್ದಾರೆ.

ಎಷ್ಟೋ ಯುವ ಕಲಾವಿದರು 15 ರ ಹರೆಯದಲ್ಲೇ ಯಕ್ಷಗಾನ ಮೇಳ ಸೇರುತ್ತಾರೆ. ಅಂತಹ ಕಲಾವಿದರಿಗೆ ಲಾಕ್​ಡೌನ್ ಪ್ಯಾಕೇಜ್ ಸಿಗದೇ ಅನ್ಯಾಯವಾಗಲಿದೆ. ತಮ್ಮ 15ನೇ ವಯಸ್ಸಿಗೇ ಯಕ್ಷಗಾನ ಮೇಳ ಸೇರಿ 10-20 ವರ್ಷ ಮೇಳಗಳಲ್ಲಿ ಸೇವೆ ಸಲ್ಲಿಸಿದ ಸುಮಾರು 200 ಕಲಾವಿದರು ಇದ್ದಾರೆ. ಅಂತಹ ಕಲಾವಿದರಿಗೆ ನೆರವು ಪಡೆಯುವ ಅರ್ಹತೆ ಪಡೆಯದಂತಾಗಿದೆ. ಅವರಿಗೆ ನ್ಯಾಯ ಒದಗಿಸಬೇಕು ಎಂದು ಕೋರಿ ಸುಮಾರು 40 ವೃತ್ತಿಪರ ಮೇಳಗಳ ಕಲಾವಿದರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಈ ಕಲಾವಿದರು ಸಹ ವರ್ಷದ ಏಳು ತಿಂಗಳು ರಾತ್ರಿ ಯಕ್ಷಗಾನ ಸೇವೆ ನೀಡುತ್ತಾರೆ. ಲಾಕ್​ಡೌನ್​ನಿಂದ ಯಕ್ಷಗಾನ ವಿಲ್ಲದೆ ಯುವ ಕಲಾವಿದರು ಅತಂತ್ರರಾಗಿದ್ದಾರೆ. ಹೀಗಾಗಿ ಲಾಕ್​ಡೌನ್ ಪ್ಯಾಕೇಜ್ ಪಡೆಯಲು ಕಲಾವಿದರಿಗೆ ಇರುವ ವಯೋಮಿಯನ್ನು 25 ವರ್ಷಗಳಿಗೆ ಇಳಿಸಲು ಯಕ್ಷಗಾನ ಕಲಾವಿದರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನಾ ಗೆದ್ದ ಬಳ್ಳಾರಿಯ ಶತಾಯುಷಿ ದಂಪತಿ; ಹದಿನೈದು ದಿನಗಳಲ್ಲಿ ಕೊವಿಡ್​ನಿಂದ ಗುಣಮುಖ

Covid Warriors: ಇನ್ಮುಂದೆ ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಜಿ.ಪಂ, ತಾ.ಪಂ ಸದಸ್ಯರು ಮತ್ತು ಗ್ರಾ.ಪಂ. ಸದಸ್ಯರೂ ಕೊವಿಡ್ ವಾರಿಯರ್ಸ್​

(Karnataka Lockdown Package Yakshagana Young Artist requests to reduce age to 25 to avoid injustice)

Published On - 2:44 pm, Sun, 30 May 21

IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
IPL​​ ಕಪ್​ ಹೊತ್ತು ಬೆಂಗಳೂರಿಗೆ ಬಂದ ಆರ್​ಸಿಬಿ ಆಟಗಾರರು, ಲೈವ್​ ಇಲ್ಲಿದೆ
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಮೈಸೂರಿನ ಎಲ್ಲ ಇಂದಿರಾ ಕ್ಯಾಂಟೀನ್​ಗಳಲ್ಲಿ ಉಚಿತ ಹೋಳಿಗೆ ಊಟ
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಸಮಾರಂಭದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡದ ಡಿಸಿಎಂ ಡಿಕೆ ಶಿವಕುಮಾರ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
ಆರ್​ಸಿಬಿ ಗೆದ್ದ ಬಳಿಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
VIDEO: ಇದು ಈ ಬಾರಿಯ ಐಪಿಎಲ್​ನ 10 ಲಕ್ಷ ರೂ. ಮೌಲ್ಯದ ಕ್ಯಾಚ್
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ನಂಜೇಗೌಡರ ಕುಟುಂಬಸ್ಥರಿಂದಲೂ ರಾತ್ರಿಯಿಡೀ ವಿಜಯೋತ್ಸವ, ಕುಣಿತ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
ಮಕ್ಕಳೊಂದಿಗೆ ಮನೆಯಿಂದ ಹೊರಬಂದು ವಿಜಯೋತ್ಸವದಲ್ಲಿ ಪಾಲ್ಗೊಂಡ ಗೃಹಿಣಿ
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
RCB ಫ್ಯಾನ್ಸ್ ಗಮನಕ್ಕೆ, ಇಂದೇ ನಡೆಯಲಿದೆ ವಿಜಯಯಾತ್ರೆ: ಎಷ್ಟು ಗಂಟೆಗೆ?
ಒಂದು 'ಪದ' ಬದಲಾವಣೆಗೆ 18 ವರ್ಷ ಕಾದ RCBಯ ಮೂವರು ದಿಗ್ಗಜರು
ಒಂದು 'ಪದ' ಬದಲಾವಣೆಗೆ 18 ವರ್ಷ ಕಾದ RCBಯ ಮೂವರು ದಿಗ್ಗಜರು
ಗೃಹಲಕ್ಷ್ಮಿ ಹಣದಲ್ಲಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ
ಗೃಹಲಕ್ಷ್ಮಿ ಹಣದಲ್ಲಿ ಸಾರ್ವಜನಿಕ ರಸ್ತೆ ಸರಿಪಡಿಸಿದ ಕೊಪ್ಪಳದ ಮಹಿಳೆ