AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾವಿದರಿಗೆ ಲಾಕ್​ಡೌನ್ ಪ್ಯಾಕೇಜ್: ಯಕ್ಷಗಾನದ ಯುವ ಕಲಾವಿದರಿಗೆ ಅನ್ಯಾಯ ತಪ್ಪಿಸಲು ವಯೋಮಿತಿಯನ್ನು 25ಕ್ಕೆ ಇಳಿಸಲು ಮನವಿ

Karnataka Lockdown Package: ಎಷ್ಟೋ ಯುವ ಕಲಾವಿದರು 15 ರ ಹರೆಯದಲ್ಲೇ ಯಕ್ಷಗಾನ ಮೇಳ ಸೇರುತ್ತಾರೆ. ಅಂತಹ ಕಲಾವಿದರಿಗೆ ಲಾಕ್​ಡೌನ್ ಪ್ಯಾಕೇಜ್ ಸಿಗದೇ ಅನ್ಯಾಯವಾಗಲಿದೆ. ತಮ್ಮ 15ನೇ ವಯಸ್ಸಿಗೇ ಯಕ್ಷಗಾನ ಮೇಳ ಸೇರಿ 10-20 ವರ್ಷ ಮೇಳಗಳಲ್ಲಿ ಸೇವೆ ಸಲ್ಲಿಸಿದ ಸುಮಾರು 200 ಕಲಾವಿದರು ಇದ್ದಾರೆ. ಅಂತಹ ಕಲಾವಿದರಿಗೆ ನೆರವು ಪಡೆಯುವ ಅರ್ಹತೆ ಪಡೆಯದಂತಾಗಿದೆ.

ಕಲಾವಿದರಿಗೆ ಲಾಕ್​ಡೌನ್ ಪ್ಯಾಕೇಜ್: ಯಕ್ಷಗಾನದ ಯುವ ಕಲಾವಿದರಿಗೆ ಅನ್ಯಾಯ ತಪ್ಪಿಸಲು ವಯೋಮಿತಿಯನ್ನು 25ಕ್ಕೆ ಇಳಿಸಲು ಮನವಿ
ಸಾಂದರ್ಭಿಕ ಚಿತ್ರ
guruganesh bhat
|

Updated on:May 30, 2021 | 2:45 PM

Share

ಉಡುಪಿ: ಕರ್ನಾಟಕದಲ್ಲಿ ಜಾರಿಯಲ್ಲಿರುವ ಕೊವಿಡ್ ಲಾಕ್​ಡೌನ್​ನಿಂದ ತೊಂದರೆಗೊಳಗಾದ ಕಲಾವಿದರಿಗೆ ಸರ್ಕಾರ ನೆರವು ಘೋಷಿಸಿದೆ. ಆದರೆ ನೆರವು ಪಡೆಯುವ ಕಲಾವಿದರಿಗೆ 35 ವರ್ಷ ಪೂರ್ಣಗೊಂಡಿರಬೇಕು ಎಂನ ನಿಯಮ ರೂಪಿಸಿದ್ದು, ಇದರಿಂದ ಯಕ್ಷಗಾನದ ಯುವ ಕಲಾವಿದರಿಗೆ ಅನ್ಯಾಯವಾಗಲಿದೆ ಎಂಬ ದೂರು ಕೇಳಿಬಂದಿದೆ. ಲಾಕ್​ಡೌನ್ ಪ್ಯಾಕೇಜ್ ಪಡೆಯಲು ನಿಗದಿಪಡಿಸಿರುವ ವಯೋಮಿತಿಯನ್ನು 35ರಿಂದ 25ಕ್ಕೆ ಇಳಿಸಲಯ ಸರ್ಕಾರಕ್ಕೆ 40 ವೃತ್ತಿಪರ ಮೇಳಗಳ ಕಲಾವಿದರು ಮನವಿ ಮಾಡಿದ್ದಾರೆ.

ಎಷ್ಟೋ ಯುವ ಕಲಾವಿದರು 15 ರ ಹರೆಯದಲ್ಲೇ ಯಕ್ಷಗಾನ ಮೇಳ ಸೇರುತ್ತಾರೆ. ಅಂತಹ ಕಲಾವಿದರಿಗೆ ಲಾಕ್​ಡೌನ್ ಪ್ಯಾಕೇಜ್ ಸಿಗದೇ ಅನ್ಯಾಯವಾಗಲಿದೆ. ತಮ್ಮ 15ನೇ ವಯಸ್ಸಿಗೇ ಯಕ್ಷಗಾನ ಮೇಳ ಸೇರಿ 10-20 ವರ್ಷ ಮೇಳಗಳಲ್ಲಿ ಸೇವೆ ಸಲ್ಲಿಸಿದ ಸುಮಾರು 200 ಕಲಾವಿದರು ಇದ್ದಾರೆ. ಅಂತಹ ಕಲಾವಿದರಿಗೆ ನೆರವು ಪಡೆಯುವ ಅರ್ಹತೆ ಪಡೆಯದಂತಾಗಿದೆ. ಅವರಿಗೆ ನ್ಯಾಯ ಒದಗಿಸಬೇಕು ಎಂದು ಕೋರಿ ಸುಮಾರು 40 ವೃತ್ತಿಪರ ಮೇಳಗಳ ಕಲಾವಿದರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಈ ಕಲಾವಿದರು ಸಹ ವರ್ಷದ ಏಳು ತಿಂಗಳು ರಾತ್ರಿ ಯಕ್ಷಗಾನ ಸೇವೆ ನೀಡುತ್ತಾರೆ. ಲಾಕ್​ಡೌನ್​ನಿಂದ ಯಕ್ಷಗಾನ ವಿಲ್ಲದೆ ಯುವ ಕಲಾವಿದರು ಅತಂತ್ರರಾಗಿದ್ದಾರೆ. ಹೀಗಾಗಿ ಲಾಕ್​ಡೌನ್ ಪ್ಯಾಕೇಜ್ ಪಡೆಯಲು ಕಲಾವಿದರಿಗೆ ಇರುವ ವಯೋಮಿಯನ್ನು 25 ವರ್ಷಗಳಿಗೆ ಇಳಿಸಲು ಯಕ್ಷಗಾನ ಕಲಾವಿದರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನಾ ಗೆದ್ದ ಬಳ್ಳಾರಿಯ ಶತಾಯುಷಿ ದಂಪತಿ; ಹದಿನೈದು ದಿನಗಳಲ್ಲಿ ಕೊವಿಡ್​ನಿಂದ ಗುಣಮುಖ

Covid Warriors: ಇನ್ಮುಂದೆ ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಜಿ.ಪಂ, ತಾ.ಪಂ ಸದಸ್ಯರು ಮತ್ತು ಗ್ರಾ.ಪಂ. ಸದಸ್ಯರೂ ಕೊವಿಡ್ ವಾರಿಯರ್ಸ್​

(Karnataka Lockdown Package Yakshagana Young Artist requests to reduce age to 25 to avoid injustice)

Published On - 2:44 pm, Sun, 30 May 21

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು