AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಲಾವಿದರಿಗೆ ಲಾಕ್​ಡೌನ್ ಪ್ಯಾಕೇಜ್: ಯಕ್ಷಗಾನದ ಯುವ ಕಲಾವಿದರಿಗೆ ಅನ್ಯಾಯ ತಪ್ಪಿಸಲು ವಯೋಮಿತಿಯನ್ನು 25ಕ್ಕೆ ಇಳಿಸಲು ಮನವಿ

Karnataka Lockdown Package: ಎಷ್ಟೋ ಯುವ ಕಲಾವಿದರು 15 ರ ಹರೆಯದಲ್ಲೇ ಯಕ್ಷಗಾನ ಮೇಳ ಸೇರುತ್ತಾರೆ. ಅಂತಹ ಕಲಾವಿದರಿಗೆ ಲಾಕ್​ಡೌನ್ ಪ್ಯಾಕೇಜ್ ಸಿಗದೇ ಅನ್ಯಾಯವಾಗಲಿದೆ. ತಮ್ಮ 15ನೇ ವಯಸ್ಸಿಗೇ ಯಕ್ಷಗಾನ ಮೇಳ ಸೇರಿ 10-20 ವರ್ಷ ಮೇಳಗಳಲ್ಲಿ ಸೇವೆ ಸಲ್ಲಿಸಿದ ಸುಮಾರು 200 ಕಲಾವಿದರು ಇದ್ದಾರೆ. ಅಂತಹ ಕಲಾವಿದರಿಗೆ ನೆರವು ಪಡೆಯುವ ಅರ್ಹತೆ ಪಡೆಯದಂತಾಗಿದೆ.

ಕಲಾವಿದರಿಗೆ ಲಾಕ್​ಡೌನ್ ಪ್ಯಾಕೇಜ್: ಯಕ್ಷಗಾನದ ಯುವ ಕಲಾವಿದರಿಗೆ ಅನ್ಯಾಯ ತಪ್ಪಿಸಲು ವಯೋಮಿತಿಯನ್ನು 25ಕ್ಕೆ ಇಳಿಸಲು ಮನವಿ
ಸಾಂದರ್ಭಿಕ ಚಿತ್ರ
guruganesh bhat
|

Updated on:May 30, 2021 | 2:45 PM

Share

ಉಡುಪಿ: ಕರ್ನಾಟಕದಲ್ಲಿ ಜಾರಿಯಲ್ಲಿರುವ ಕೊವಿಡ್ ಲಾಕ್​ಡೌನ್​ನಿಂದ ತೊಂದರೆಗೊಳಗಾದ ಕಲಾವಿದರಿಗೆ ಸರ್ಕಾರ ನೆರವು ಘೋಷಿಸಿದೆ. ಆದರೆ ನೆರವು ಪಡೆಯುವ ಕಲಾವಿದರಿಗೆ 35 ವರ್ಷ ಪೂರ್ಣಗೊಂಡಿರಬೇಕು ಎಂನ ನಿಯಮ ರೂಪಿಸಿದ್ದು, ಇದರಿಂದ ಯಕ್ಷಗಾನದ ಯುವ ಕಲಾವಿದರಿಗೆ ಅನ್ಯಾಯವಾಗಲಿದೆ ಎಂಬ ದೂರು ಕೇಳಿಬಂದಿದೆ. ಲಾಕ್​ಡೌನ್ ಪ್ಯಾಕೇಜ್ ಪಡೆಯಲು ನಿಗದಿಪಡಿಸಿರುವ ವಯೋಮಿತಿಯನ್ನು 35ರಿಂದ 25ಕ್ಕೆ ಇಳಿಸಲಯ ಸರ್ಕಾರಕ್ಕೆ 40 ವೃತ್ತಿಪರ ಮೇಳಗಳ ಕಲಾವಿದರು ಮನವಿ ಮಾಡಿದ್ದಾರೆ.

ಎಷ್ಟೋ ಯುವ ಕಲಾವಿದರು 15 ರ ಹರೆಯದಲ್ಲೇ ಯಕ್ಷಗಾನ ಮೇಳ ಸೇರುತ್ತಾರೆ. ಅಂತಹ ಕಲಾವಿದರಿಗೆ ಲಾಕ್​ಡೌನ್ ಪ್ಯಾಕೇಜ್ ಸಿಗದೇ ಅನ್ಯಾಯವಾಗಲಿದೆ. ತಮ್ಮ 15ನೇ ವಯಸ್ಸಿಗೇ ಯಕ್ಷಗಾನ ಮೇಳ ಸೇರಿ 10-20 ವರ್ಷ ಮೇಳಗಳಲ್ಲಿ ಸೇವೆ ಸಲ್ಲಿಸಿದ ಸುಮಾರು 200 ಕಲಾವಿದರು ಇದ್ದಾರೆ. ಅಂತಹ ಕಲಾವಿದರಿಗೆ ನೆರವು ಪಡೆಯುವ ಅರ್ಹತೆ ಪಡೆಯದಂತಾಗಿದೆ. ಅವರಿಗೆ ನ್ಯಾಯ ಒದಗಿಸಬೇಕು ಎಂದು ಕೋರಿ ಸುಮಾರು 40 ವೃತ್ತಿಪರ ಮೇಳಗಳ ಕಲಾವಿದರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ.

ಈ ಕಲಾವಿದರು ಸಹ ವರ್ಷದ ಏಳು ತಿಂಗಳು ರಾತ್ರಿ ಯಕ್ಷಗಾನ ಸೇವೆ ನೀಡುತ್ತಾರೆ. ಲಾಕ್​ಡೌನ್​ನಿಂದ ಯಕ್ಷಗಾನ ವಿಲ್ಲದೆ ಯುವ ಕಲಾವಿದರು ಅತಂತ್ರರಾಗಿದ್ದಾರೆ. ಹೀಗಾಗಿ ಲಾಕ್​ಡೌನ್ ಪ್ಯಾಕೇಜ್ ಪಡೆಯಲು ಕಲಾವಿದರಿಗೆ ಇರುವ ವಯೋಮಿಯನ್ನು 25 ವರ್ಷಗಳಿಗೆ ಇಳಿಸಲು ಯಕ್ಷಗಾನ ಕಲಾವಿದರು ಮನವಿ ಮಾಡಿದ್ದಾರೆ.

ಇದನ್ನೂ ಓದಿ: ಕೊರೊನಾ ಗೆದ್ದ ಬಳ್ಳಾರಿಯ ಶತಾಯುಷಿ ದಂಪತಿ; ಹದಿನೈದು ದಿನಗಳಲ್ಲಿ ಕೊವಿಡ್​ನಿಂದ ಗುಣಮುಖ

Covid Warriors: ಇನ್ಮುಂದೆ ನಗರ ಮತ್ತು ಸ್ಥಳೀಯ ಸಂಸ್ಥೆಗಳು, ಜಿ.ಪಂ, ತಾ.ಪಂ ಸದಸ್ಯರು ಮತ್ತು ಗ್ರಾ.ಪಂ. ಸದಸ್ಯರೂ ಕೊವಿಡ್ ವಾರಿಯರ್ಸ್​

(Karnataka Lockdown Package Yakshagana Young Artist requests to reduce age to 25 to avoid injustice)

Published On - 2:44 pm, Sun, 30 May 21

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?