AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lokayukta Raids: ಬೆಂಗಳೂರು ಸೇರಿದಂತೆ ಕರ್ನಾಟಕದ 14 ಕಡೆ ಲೋಕಾಯುಕ್ತ ದಾಳಿ

Karnataka Lokayukta raids: ಕರ್ನಾಟಕದಲ್ಲಿ ಮತ್ತೆ ಲೋಕಾಯುಕ್ತ ದಾಳಿ ನಡೆದಿದೆ. ಅದಾಯ ಮೀರಿದ ಆಸ್ತಿ ಗಳಿಕೆ ಆರೋಪ ಕೇಳಿಬಂದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

Lokayukta Raids: ಬೆಂಗಳೂರು ಸೇರಿದಂತೆ ಕರ್ನಾಟಕದ 14 ಕಡೆ ಲೋಕಾಯುಕ್ತ ದಾಳಿ
ಸಾಂದರ್ಭಿಕ ಚಿತ್ರ
Shivaprasad B
| Edited By: |

Updated on:Aug 22, 2023 | 12:05 PM

Share

ಬೆಂಗಳೂರು, (ಆಗಸ್ಟ್ 22): ಬೆಂಗಳೂರು ಸೇರಿದಂತೆ ಕರ್ನಾಟಕದ 14 ಕಡೆ ಮತ್ತೆ ಲೋಕಾಯುಕ್ತ(Karnataka Lokayukta)  ದಾಳಿಯಾಗಿದೆ. ಇಂದು (ಆಗಸ್ಟ್ 22) ಬೆಂಗಳೂರು, ತುಮಕೂರು ಸೇರಿ 14 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಅದಾಯ ಮೀರಿದ ಆಸ್ತಿ ಗಳಿಕೆ ಆರೋಪ ಕೇಳಿಬಂದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಮೊನ್ನೇ ಅಷ್ಟೇ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದ 48 ಕಡೆಗಳಲ್ಲಿ ದಾಳಿ ಮಾಡಿ ಭ್ರಷ್ಟ ಅಧಿಕಾರಿಗಳಿಂದ ಕೋಟಿ-ಕೋಟಿ ಹಣ ಹಾಗೂ ಆಸ್ತಿ ಪಾಸ್ತಿ ಪತ್ತೆ ಮಾಡಿತ್ತು. ಇದೀಗ ಮತ್ತೆ ಭ್ರಷ್ಟ ಅಧಿಕಾರಿಗಳ ಬೇಟೆ ಮುಂದುವರೆಸಿದ್ದು, ಒಂದು ವಾರದಲ್ಲಿ ಇದು ಎರಡನೇ ದಾಳಿಯಾಗಿದೆ.

ಕೆ.ಆರ್.ಪುರ ಸರ್ವೆ ಅಧಿಕಾರಿ ಮನೆ, ಕಚೇರಿ ಮೇಲೆ ದಾಳಿ

ಕೆ.ಆರ್.ಪುರ ತಾಲೂಕು ಕಚೇರಿಯ ಸರ್ವೆ ಸೂಪರ್​​ವೈಸರ್​​​​ ಕೆ.ಟಿ ಶ್ರೀನಿವಾಸಮೂರ್ತಿ ಮನೆಗಳು, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಶ್ರೀನಿವಾಸಮೂರ್ತಿ 5ಕ್ಕೂ ಹೆಚ್ಚು ಕಡೆ ಅಬಕಾರಿ ಲೈಸೆನ್ಸ್ ಹೊಂದಿದ್ದು, ನಿಗದಿಗಿಂತಲೂ ಹೆಚ್ಚು ವರಿ ಆಸ್ತಿ ಗಳಿಸಿದ ಆರೋಪ ಕೇಳಿಬಂದಿದೆ. ಹೀಗಾಗಿ ಲೋಕಾಯುಕ್ತ ಅಧಿಕಾರಿಗಳು ಅಂಧ್ರಳ್ಳಿಯಲ್ಲಿರುವ ನಿವಾಸ, ಹೆಣ್ಣೂರಿನಲ್ಲಿರುವ ಸಹೋದರಿ ನಿವಾಸ ಹಾಗೂ ಪತ್ನಿ ಹೆಸರಿನಲ್ಲಿರುವ ಹೋಟೆಲ್​​​​​ ಬೋರ್ಡಿಂಗ್​ ಹೌಸ್​ಗಳ ಮೇಲೂ ದಾಳಿ ಮಾಡಿದ್ದಾರೆ. ಅಲ್ಲದೇ ತುಮಕೂರಿನಲ್ಲಿರುವ ಶ್ರೀನಿವಾಸ ಸಹೋದರನ ಮನೆಯಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ರಾಜ್ಯದ 48 ಕಡೆ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ: ಕಂತೆ ಕಂತೆ ನೋಟು, ರಾಶಿ ಆಭರಣ, ಆಸ್ತಿ ದಾಖಲೆ ಪತ್ರ ವಶಕ್ಕೆ

ಆಗಸ್ಟ್ 17ರಂದು ದಾಳಿ ಮಾಡಿದ್ದ ಲೋಕಾಯುಕ್ತ

ಆಗಸ್ಟ್ 17ರಂದು ಅಷ್ಟೇ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 48 ಕಡೆ ಏಕಕಾಲದಲ್ಲಿ ದಾಳಿ ಮಾಡಿದ್ದರು, ಬೆಂಗಳೂರು ನಗರ, ಚಿತ್ರದುರ್ಗ, ಮೈಸೂರು, ತುಮಕೂರು, ಬೀದರ್, ಧಾರವಾಡ, ದಾವಣಗೆರೆ, ರಾಯಚೂರು, ಮಡಿಕೇರಿಯಲ್ಲಿ 200 ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದು, ಕೊಟ್ಯಾಂತರ ರೂ. ಜಪ್ತಿ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:56 am, Tue, 22 August 23

ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ