AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lokayukta Raids: ಬೆಂಗಳೂರು ಸೇರಿದಂತೆ ಕರ್ನಾಟಕದ 14 ಕಡೆ ಲೋಕಾಯುಕ್ತ ದಾಳಿ

Karnataka Lokayukta raids: ಕರ್ನಾಟಕದಲ್ಲಿ ಮತ್ತೆ ಲೋಕಾಯುಕ್ತ ದಾಳಿ ನಡೆದಿದೆ. ಅದಾಯ ಮೀರಿದ ಆಸ್ತಿ ಗಳಿಕೆ ಆರೋಪ ಕೇಳಿಬಂದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ.

Lokayukta Raids: ಬೆಂಗಳೂರು ಸೇರಿದಂತೆ ಕರ್ನಾಟಕದ 14 ಕಡೆ ಲೋಕಾಯುಕ್ತ ದಾಳಿ
ಸಾಂದರ್ಭಿಕ ಚಿತ್ರ
Shivaprasad B
| Edited By: |

Updated on:Aug 22, 2023 | 12:05 PM

Share

ಬೆಂಗಳೂರು, (ಆಗಸ್ಟ್ 22): ಬೆಂಗಳೂರು ಸೇರಿದಂತೆ ಕರ್ನಾಟಕದ 14 ಕಡೆ ಮತ್ತೆ ಲೋಕಾಯುಕ್ತ(Karnataka Lokayukta)  ದಾಳಿಯಾಗಿದೆ. ಇಂದು (ಆಗಸ್ಟ್ 22) ಬೆಂಗಳೂರು, ತುಮಕೂರು ಸೇರಿ 14 ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಅದಾಯ ಮೀರಿದ ಆಸ್ತಿ ಗಳಿಕೆ ಆರೋಪ ಕೇಳಿಬಂದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸಿದ್ದಾರೆ. ಮೊನ್ನೇ ಅಷ್ಟೇ ಲೋಕಾಯುಕ್ತ ಅಧಿಕಾರಿಗಳು ಕರ್ನಾಟಕದ 48 ಕಡೆಗಳಲ್ಲಿ ದಾಳಿ ಮಾಡಿ ಭ್ರಷ್ಟ ಅಧಿಕಾರಿಗಳಿಂದ ಕೋಟಿ-ಕೋಟಿ ಹಣ ಹಾಗೂ ಆಸ್ತಿ ಪಾಸ್ತಿ ಪತ್ತೆ ಮಾಡಿತ್ತು. ಇದೀಗ ಮತ್ತೆ ಭ್ರಷ್ಟ ಅಧಿಕಾರಿಗಳ ಬೇಟೆ ಮುಂದುವರೆಸಿದ್ದು, ಒಂದು ವಾರದಲ್ಲಿ ಇದು ಎರಡನೇ ದಾಳಿಯಾಗಿದೆ.

ಕೆ.ಆರ್.ಪುರ ಸರ್ವೆ ಅಧಿಕಾರಿ ಮನೆ, ಕಚೇರಿ ಮೇಲೆ ದಾಳಿ

ಕೆ.ಆರ್.ಪುರ ತಾಲೂಕು ಕಚೇರಿಯ ಸರ್ವೆ ಸೂಪರ್​​ವೈಸರ್​​​​ ಕೆ.ಟಿ ಶ್ರೀನಿವಾಸಮೂರ್ತಿ ಮನೆಗಳು, ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಶ್ರೀನಿವಾಸಮೂರ್ತಿ 5ಕ್ಕೂ ಹೆಚ್ಚು ಕಡೆ ಅಬಕಾರಿ ಲೈಸೆನ್ಸ್ ಹೊಂದಿದ್ದು, ನಿಗದಿಗಿಂತಲೂ ಹೆಚ್ಚು ವರಿ ಆಸ್ತಿ ಗಳಿಸಿದ ಆರೋಪ ಕೇಳಿಬಂದಿದೆ. ಹೀಗಾಗಿ ಲೋಕಾಯುಕ್ತ ಅಧಿಕಾರಿಗಳು ಅಂಧ್ರಳ್ಳಿಯಲ್ಲಿರುವ ನಿವಾಸ, ಹೆಣ್ಣೂರಿನಲ್ಲಿರುವ ಸಹೋದರಿ ನಿವಾಸ ಹಾಗೂ ಪತ್ನಿ ಹೆಸರಿನಲ್ಲಿರುವ ಹೋಟೆಲ್​​​​​ ಬೋರ್ಡಿಂಗ್​ ಹೌಸ್​ಗಳ ಮೇಲೂ ದಾಳಿ ಮಾಡಿದ್ದಾರೆ. ಅಲ್ಲದೇ ತುಮಕೂರಿನಲ್ಲಿರುವ ಶ್ರೀನಿವಾಸ ಸಹೋದರನ ಮನೆಯಲ್ಲೂ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ರಾಜ್ಯದ 48 ಕಡೆ ಲೋಕಾಯುಕ್ತ ಅಧಿಕಾರಿಗಳ ಭರ್ಜರಿ ಬೇಟೆ: ಕಂತೆ ಕಂತೆ ನೋಟು, ರಾಶಿ ಆಭರಣ, ಆಸ್ತಿ ದಾಖಲೆ ಪತ್ರ ವಶಕ್ಕೆ

ಆಗಸ್ಟ್ 17ರಂದು ದಾಳಿ ಮಾಡಿದ್ದ ಲೋಕಾಯುಕ್ತ

ಆಗಸ್ಟ್ 17ರಂದು ಅಷ್ಟೇ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ 48 ಕಡೆ ಏಕಕಾಲದಲ್ಲಿ ದಾಳಿ ಮಾಡಿದ್ದರು, ಬೆಂಗಳೂರು ನಗರ, ಚಿತ್ರದುರ್ಗ, ಮೈಸೂರು, ತುಮಕೂರು, ಬೀದರ್, ಧಾರವಾಡ, ದಾವಣಗೆರೆ, ರಾಯಚೂರು, ಮಡಿಕೇರಿಯಲ್ಲಿ 200 ಲೋಕಾಯುಕ್ತ ಅಧಿಕಾರಿಗಳು ಸರ್ಕಾರಿ ಅಧಿಕಾರಿಗಳ ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಿದ್ದು, ಕೊಟ್ಯಾಂತರ ರೂ. ಜಪ್ತಿ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:56 am, Tue, 22 August 23

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ