AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸದ ಕರ್ನಾಟಕದ 6 ಸಚಿವರು, 66 ಶಾಸಕರು, 28 MLC: ಯಾರ್ಯಾರು ಗೊತ್ತಾ?

ಸಾರ್ವಜನಿಕ ರಂಗದಲ್ಲಿರುವ ರಾಜಕಾರಣಿಗಳು ಪ್ರತಿ ವರ್ಷ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕು. ಆದರೆ ಕರ್ನಾಟಕದ 66 ವಿಧಾನಸಭಾ ಸದಸ್ಯರು (ಶಾಸಕರು) ತಮ್ಮ ಆಸ್ತಿ ವಿವರ ನೀಡಿಲ್ಲ. ಈ ಮೂಲಕ ಕಾನೂನು ಸುವ್ಯವಸ್ಥೆಯ ಬಗ್ಗೆ ಮಾತಾಡುವ ಶಾಸಕರೇ ನಿಯಮವನ್ನು ಉಲ್ಲಂಘಿಸಿದ್ದಾರೆ. ಇನ್ನು ಆಸ್ತಿ ವಿವರ ಸಲ್ಲಿಸದ ಶಾಸಕ ಪಟ್ಟಿಯನ್ನು ಲೋಕಾಯುಕ್ತ ಬಿಡುಗಡೆ ಮಾಡಿದ್ದು, ಆ ಪಟ್ಟಿಯಲ್ಲಿ ಯಾವೆಲ್ಲಾ ಶಾಸಕರು ಇದ್ದಾರೆ ಎನ್ನುವ ವಿವರ ಇಲ್ಲಿದೆ.

ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸದ ಕರ್ನಾಟಕದ 6 ಸಚಿವರು, 66 ಶಾಸಕರು, 28 MLC: ಯಾರ್ಯಾರು ಗೊತ್ತಾ?
Lokayukta
ರಮೇಶ್ ಬಿ. ಜವಳಗೇರಾ
|

Updated on:Nov 06, 2025 | 7:46 PM

Share

ಬೆಂಗಳೂರು, (ನವೆಂಬರ್ 06): ಲೋಕಾಯುಕ್ತ (Karnataka Lokayukta) ಕಾಯ್ದೆಯ ಸೆಕ್ಷನ್ 22(1) ಮತ್ತು (2)ರ ಪ್ರಕಾರ ವಿಧಾನಸಭೆ, ವಿಧಾನಪರಿಷತ್ ಸದಸ್ಯರು ಪ್ರತಿ ವರ್ಷ ಜೂನ್ 30ರೊಳಗೆ ತಮ್ಮ ಹಾಗೂ ಕುಟುಂಬದ ಸದಸ್ಯರ ಆಸ್ತಿ ವಿವರವನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತಕ್ಕೆ ಸಲ್ಲಿಸಬೇಕು. ಆದ್ರೆ, ಇದುವರೆಗೂ ಕರ್ನಾಟಕದ 6 ಸಚಿವರು, 66 ಶಾಸಕರು, 28 ವಿಧಾನಪರಿಷತ್ ಸದಸ್ಯರು(ಎಂಎಲ್​​ಸಿ)   ಇದುವರೆಗೂ 2024-25ನೇ ಸಾಲಿನ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ. ಹೀಗಾಗಿ ಲೋಕಾಯುಕ್ತ, ಆಸ್ತಿ ವಿವರ ಸಲ್ಲಿಸದ ಶಾಸಕರ ಹೆಸರುಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಆಡಳಿರೂಢ ಕಾಂಗ್ರೆಸ್, ವಿರೋಧ ಪಕ್ಷ ಬಿಜೆಪಿ ಹಾಗೂ ಜೆಡಿಎಸ್​​​ನ ಒಟ್ಟು 66 ಶಾಸಕರು ಇದ್ದಾರೆ.

ಆಸ್ತಿ ವಿವರ ಸಲ್ಲಿಸದ ಶಾಸಕರ ಪಟ್ಟಿ

  • ಕೆ.ಎನ್ ರಾಜಣ್ಣ(ಕಾಂಗ್ರೆಸ್, ಲಕ್ಷ್ಮಣ ಸವದಿ(ಕಾಂಗ್ರೆಸ್) , ಖನೀಜ್ ಫಾತಿಮಾ(ಕಾಂಗ್ರೆಸ್), ಜಿ.ಜನಾರ್ದನ ರೆಡ್ಡಿ (ಕೆಆರ್​​ಪಿಪಿ), ವಿನಯ ಕುಲಕರ್ಣಿ (ಕಾಂಗ್ರೆಸ್), ಬಿ ಕೆ ಸಂಗಮೇಶ್ವರ್ (ಕಾಂಗ್ರೆಸ್), ನಯನಾ ಮೊಟಮ್ಮ (ಕಾಂಗ್ರೆಸ್) , ಬಿ. ಸುರೇಶ್ ಗೌಡ (ಬಿಜೆಪಿ) , ಕೆ.ಗೋಪಾಲಯ್ಯ (ಬಿಜೆಪಿ), ಸಿ.ಪಿ.ಯೋಗೇಶ್ವರ (ಕಾಂಗ್ರೆಸ್), ಹೆಚ್.ಡಿ ರೇವಣ್ಣ (ಜೆಡಿಎಸ್​​), ಸಿ. ಪುಟ್ಟರಂಗಶೆಟ್ಟಿ (ಕಾಂಗ್ರೆಸ್),

ಆಸ್ತಿ ವಿವರ ಸಲ್ಲಿಸದ ಸಚಿವರ ಹೆಸರುಗಳು

  • ಕೆ.ಹೆಚ್‌.ಮುನಿಯಪ್ಪ- ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕ ವ್ಯವಹಾರ ಸಚಿವ
  • ದಿನೇಶ್ ಗುಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ
  • ಬಿ.ಝಡ್. ಜಮೀರ್ ಅಹ್ಮದ್ ಖಾನ್-, ವಸತಿ, ವಕ್ಸ್ ಮತ್ತು ಅಲ್ಪ ಸಂಖ್ಯಾತ ಸಚಿವ
  • ರಹೀಮ್ ಖಾನ್- ಹಜ್, ಪೌರಾಡಳಿತ ಸಚಿವ
  • ಕೆ. ವೆಂಕಟೇಶ್- ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ

Published On - 6:50 pm, Thu, 6 November 25

Follow Us
Ramesh B Jawalagera
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ