TV9 Kannada Karnataka Karnataka Lokayukta Releases BJP Congress And JDS MLAs Name Who not submitting property details
ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಸದ ಕರ್ನಾಟಕದ 6 ಸಚಿವರು, 66 ಶಾಸಕರು, 28 MLC: ಯಾರ್ಯಾರು ಗೊತ್ತಾ?
ಸಾರ್ವಜನಿಕ ರಂಗದಲ್ಲಿರುವ ರಾಜಕಾರಣಿಗಳು ಪ್ರತಿ ವರ್ಷ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕು. ಆದರೆ ಕರ್ನಾಟಕದ 66 ವಿಧಾನಸಭಾ ಸದಸ್ಯರು (ಶಾಸಕರು) ತಮ್ಮ ಆಸ್ತಿ ವಿವರ ನೀಡಿಲ್ಲ. ಈ ಮೂಲಕ ಕಾನೂನು ಸುವ್ಯವಸ್ಥೆಯ ಬಗ್ಗೆ ಮಾತಾಡುವ ಶಾಸಕರೇ ನಿಯಮವನ್ನು ಉಲ್ಲಂಘಿಸಿದ್ದಾರೆ. ಇನ್ನು ಆಸ್ತಿ ವಿವರ ಸಲ್ಲಿಸದ ಶಾಸಕ ಪಟ್ಟಿಯನ್ನು ಲೋಕಾಯುಕ್ತ ಬಿಡುಗಡೆ ಮಾಡಿದ್ದು, ಆ ಪಟ್ಟಿಯಲ್ಲಿ ಯಾವೆಲ್ಲಾ ಶಾಸಕರು ಇದ್ದಾರೆ ಎನ್ನುವ ವಿವರ ಇಲ್ಲಿದೆ.
ಬೆಂಗಳೂರು, (ನವೆಂಬರ್ 06): ಲೋಕಾಯುಕ್ತ (Karnataka Lokayukta) ಕಾಯ್ದೆಯ ಸೆಕ್ಷನ್ 22(1) ಮತ್ತು (2)ರ ಪ್ರಕಾರ ವಿಧಾನಸಭೆ, ವಿಧಾನಪರಿಷತ್ ಸದಸ್ಯರು ಪ್ರತಿ ವರ್ಷ ಜೂನ್ 30ರೊಳಗೆ ತಮ್ಮ ಹಾಗೂ ಕುಟುಂಬದ ಸದಸ್ಯರ ಆಸ್ತಿ ವಿವರವನ್ನು ನಿಗದಿತ ನಮೂನೆಯಲ್ಲಿ ಲೋಕಾಯುಕ್ತಕ್ಕೆ ಸಲ್ಲಿಸಬೇಕು. ಆದ್ರೆ, ಇದುವರೆಗೂ ಕರ್ನಾಟಕದ 6 ಸಚಿವರು, 66 ಶಾಸಕರು, 28 ವಿಧಾನಪರಿಷತ್ ಸದಸ್ಯರು(ಎಂಎಲ್ಸಿ) ಇದುವರೆಗೂ 2024-25ನೇ ಸಾಲಿನ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಿಲ್ಲ. ಹೀಗಾಗಿ ಲೋಕಾಯುಕ್ತ, ಆಸ್ತಿ ವಿವರ ಸಲ್ಲಿಸದ ಶಾಸಕರ ಹೆಸರುಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ ಆಡಳಿರೂಢ ಕಾಂಗ್ರೆಸ್, ವಿರೋಧ ಪಕ್ಷ ಬಿಜೆಪಿ ಹಾಗೂ ಜೆಡಿಎಸ್ನ ಒಟ್ಟು 66 ಶಾಸಕರು ಇದ್ದಾರೆ.
ಆಸ್ತಿ ವಿವರ ಸಲ್ಲಿಸದ ಶಾಸಕರ ಪಟ್ಟಿ
ಕೆ.ಎನ್ ರಾಜಣ್ಣ(ಕಾಂಗ್ರೆಸ್, ಲಕ್ಷ್ಮಣ ಸವದಿ(ಕಾಂಗ್ರೆಸ್) , ಖನೀಜ್ ಫಾತಿಮಾ(ಕಾಂಗ್ರೆಸ್), ಜಿ.ಜನಾರ್ದನ ರೆಡ್ಡಿ (ಕೆಆರ್ಪಿಪಿ), ವಿನಯ ಕುಲಕರ್ಣಿ (ಕಾಂಗ್ರೆಸ್), ಬಿ ಕೆ ಸಂಗಮೇಶ್ವರ್ (ಕಾಂಗ್ರೆಸ್), ನಯನಾ ಮೊಟಮ್ಮ (ಕಾಂಗ್ರೆಸ್) , ಬಿ. ಸುರೇಶ್ ಗೌಡ (ಬಿಜೆಪಿ) , ಕೆ.ಗೋಪಾಲಯ್ಯ (ಬಿಜೆಪಿ), ಸಿ.ಪಿ.ಯೋಗೇಶ್ವರ (ಕಾಂಗ್ರೆಸ್), ಹೆಚ್.ಡಿ ರೇವಣ್ಣ (ಜೆಡಿಎಸ್), ಸಿ. ಪುಟ್ಟರಂಗಶೆಟ್ಟಿ (ಕಾಂಗ್ರೆಸ್),
ಆಸ್ತಿ ವಿವರ ಸಲ್ಲಿಸದ ಸಚಿವರ ಹೆಸರುಗಳು
ಕೆ.ಹೆಚ್.ಮುನಿಯಪ್ಪ- ಆಹಾರ ಮತ್ತು ನಾಗರಿಕ ಪೂರೈಕೆ, ಗ್ರಾಹಕ ವ್ಯವಹಾರ ಸಚಿವ
ದಿನೇಶ್ ಗುಂಡೂರಾವ್- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ
ಬಿ.ಝಡ್. ಜಮೀರ್ ಅಹ್ಮದ್ ಖಾನ್-, ವಸತಿ, ವಕ್ಸ್ ಮತ್ತು ಅಲ್ಪ ಸಂಖ್ಯಾತ ಸಚಿವ
ರಹೀಮ್ ಖಾನ್- ಹಜ್, ಪೌರಾಡಳಿತ ಸಚಿವ
ಕೆ. ವೆಂಕಟೇಶ್- ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ
Published On - 6:50 pm, Thu, 6 November 25
ರಮೇಶ್ ಬಿ. ಜವಳಗೇರಾ
ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್ ಮಾಧ್ಯಮದಿಂದ. ಒನ್ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.