AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾರಿ ಮಾಲೀಕರ ಜೊತೆಗಿನ ಮುಖ್ಯಮಂತ್ರಿ ಸಂಧಾನ ಸಭೆ ವಿಫಲ

Karnataka Lorry Strike: ಡೀಸೆಲ್ ದರ ಏರಿಕೆ ಮತ್ತು ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಲಾರಿ ಮಾಲೀಕರು ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಡೆಸಿದ ಸಂಧಾನ ಸಭೆ ವಿಫಲವಾಗಿದ್ದು, ಲಾರಿ ಮಾಲೀಕರು ತಮ್ಮ ನಿರ್ಧಾರದಲ್ಲಿ ಅಚಲರಾಗಿದ್ದಾರೆ. ಅನಿರ್ದಿಷ್ಟಾವಧಿ ಧರಣಿ ನಡೆಸುವುದಾಗಿ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಹೇಳಿದ್ದಾರೆ.

ಲಾರಿ ಮಾಲೀಕರ ಜೊತೆಗಿನ ಮುಖ್ಯಮಂತ್ರಿ ಸಂಧಾನ ಸಭೆ ವಿಫಲ
ಸಿಎಂ ಸಿದ್ದರಾಮಯ್ಯ
ವಿವೇಕ ಬಿರಾದಾರ
|

Updated on: Apr 15, 2025 | 8:55 PM

Share

ಬೆಂಗಳೂರು, ಏಪ್ರಿಲ್​ 15: ಡೀಸೆಲ್​ (Diesel) ದರ ಇಳಿಕೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಲಾರಿ ಮಾಲೀಕರು (Lorry owner) ಮುಷ್ಕರ ಆರಂಭಿಸಿದ್ದಾರೆ. ಮುಷ್ಕರ ಕೈಬಿಡುವಂತೆ ಲಾರಿ ಮಾಲೀಕರ ಸಂಘದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಂಗಳವಾರ (ಏ.15) ನಡೆಸಿದ ಸಭೆ ವಿಫಲವಾಗಿದೆ. ಮುಷ್ಕರ ನಿಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರೂ ಲಾರಿ ಮಾಲೀಕರ ಸಂಘ ಒಪ್ಪದ ಹಿನ್ನೆಲೆಯಲ್ಲಿ ಸುದೀರ್ಘ ಒಂದೂವರೆ ಗಂಟೆ ನಡೆದ ಸಂಧಾನ ಸಭೆ ವಿಫಲವಾಗಿದೆ.

ಹೀಗಾಗಿ ಮತ್ತೊಮ್ಮೆ ಸಭೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಅವರು, ಮುಖ್ಯಮಂತ್ರಿಗಳ ಜೊತೆಗಿನ ಸಂಧಾನ ಸಭೆ ವಿಫಲವಾಗಿದೆ. ಯಾವುದೇ ಕಾರಣಕ್ಕೂ ಮುಷ್ಕರದಿಂದ ಹಿಂದೆ ಸರಿಯಲ್ಲ. ನಾವು ತೀರ್ಮಾನ ಮಾಡಿಯಾಗಿದೆ. ಮುಖ್ಯಮಂತ್ರಿಗಳು ಮುಷ್ಕರ ಹಿಂಪಡೆಯಲು ಹೇಳಿದರು, ಆದ್ರೆ, ಆಗಲ್ಲ ಅಂದ್ವಿ. ನಾಳೆಯಿಂದ ಅನಿರ್ದಿಷ್ಟಾವಧಿ ಉಗ್ರ ಹೋರಾಟ ಮಾಡ್ತೇವೆ ಎಂದು ಹೇಳಿದರು.

ಆಟೋ, ರಿಕ್ಷಾದಂತೆ ಲಾರಿ ಮಾಲೀಕರಿಗೆ ದರ ಫಿಕ್ಸ್ ಮಾಡಿ. ಲಾರಿ ಮಾಲೀಕರಿಗೆ ಬಾಡಿಗೆ ದರ ಫಿಕ್ಸ್​ ಮಾಡಬೇಕು. ಡೀಸೆಲ್ ದರ ಎಷ್ಟಾದರೂ ಏರಿಕೆ ಮಾಡಲಿ, ಆದ್ರೆ, ಫಿಕ್ಸ್ ರೇಟ್​​ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೇರವಾಗಿ ಹೇಳಿದ್ದೇವೆ. ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯುವುದಿಲ್ಲ ಎಂದರು.

ಇದನ್ನೂ ಓದಿ
Image
ಲಾರಿ ಮುಷ್ಕರ ನಿಶ್ಚಿತ: ಸರ್ಕಾರ ಕರೆದರೆ ಮಾತುಕತೆಗೆ ಸಿದ್ಧವೆಂದ ಷಣ್ಮುಗಪ್ಪ
Image
ಇಂದು ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ, ಅಗತ್ಯ ವಸ್ತುಗಳಿಗೆ ತಟ್ಟಲಿದೆ ಬಿಸಿ
Image
ಡೀಸೆಲ್​ ದರ ಏರಿಕೆ ಖಂಡಿಸಿ ಏ. 14 ರಂದು ಲಾರಿ ಮಾಲೀಕರ ಮುಷ್ಕರ
Image
HSRP ನಂಬರ್​ ಪ್ಲೇಟ್ ಅಳವಡಿಕೆ ಗಡುವು ಮತ್ತೆ ವಿಸ್ತರಣೆ

ಸಭೆ ಬಳಿಕ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಹೇಳಿಕೆ

ಡೀಸೆಲ್ ದರ ಇಳಿಸುವಂತೆ, ಟೋಲ್ ದರ ತೆಗೆಯುವಂತೆ ಲಾರಿ ಮಾಲೀಕರು ಮುಖ್ಯಮಂತ್ರಿಗಳಿಗೆ ತಿಳಿಸಿದ್ದು, ಅವರು ನಿರ್ಧಾರ ತೆಗೆದುಕೊಳ್ಳುತ್ತಾರೆ. ಹಳೆಯ ವೆಹಿಕಲ್ ಫಿಟ್ನೆಸ್‌ ಸರ್ಟಿಫಿಕೆಟ್‌ ಡ್ರಾಫ್ಟ್‌ನಲ್ಲಿದ್ದು, ಇನ್ನೂ ಅಂತಿಮವಾಗಿಲ್ಲ. ದರ ನಿಗದಿ ವೇಳೆ ಸಭೆ ಕರೆಯುವುದಾಗಿ ಹೇಳಿದ್ದೇನೆ. ಕೆಲ ರಾಜ್ಯಗಳಲ್ಲಿ ಚೆಕ್‌ಪೋಸ್ಟ್‌ ತೆಗೆದಿದ್ದಾರೆ. ಆ ರಾಜ್ಯಗಳಲ್ಲಿ ಅಧ್ಯಯನ ನಡೆಸಿ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು. ಈ ಸಂಬಂಧ ಮೂರು ತಿಂಗಳ ಸಮಯ ಕೇಳಿದ್ದೇವೆ.

ಪೀಕ್ ಅವರ್​ನಲ್ಲಿ ನಗರದೊಳಗೆ ಪ್ರವೇಶಕ್ಕೆ ಅವಕಾಶ ಕೊಡಿ ಎಂದು ಲಾರಿ ಮಾಲೀಕರು ಕೇಳಿದರು. ಗೃಹ ಸಚಿವರು ಕೂಡ ಸಭೆಯಲ್ಲಿ ಭಾಗಿಯಾಗಿದ್ದರು, ಅವರು ಉತ್ತರ ನೀಡಿದ್ದಾರೆ. ಮುಷ್ಕರ ಮಾಡಬೇಡಿ ಅಂತ ಮುಖ್ಯಮಂತ್ರಿಗಳು ಒತ್ತಾಯ ಪೂರ್ವಕವಾಗಿ ಹೇಳಿದ್ದಾರೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಇದನ್ನೂ ಓದಿ: ಲಾರಿ ಮುಷ್ಕರ; 2 ಲಕ್ಷ ಲಾರಿ ಸ್ಥಗಿತ, ಲಾರಿ ಸಂಘಟನೆಗಳ ಬೇಡಿಕೆಗಳೇನು?

ರಾಮಲಿಂಗಾ ರೆಡ್ಡಿ ಜೊತೆ ಸಭೆ

ಏಪ್ರಿಲ್​ 14 ಮಧ್ಯರಾತ್ರಿಯಿಂದ ಲಾರಿ ಮಾಲೀಕರು ಮುಷ್ಕರ ಆರಂಭಿಸಿದ್ದಾರೆ. ಇಂದು ಮೊದಲಿಗೆ ಲಾರಿ ಮಾಲೀಕರ ಸಂಘದೊಂದಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸಭೆ ನಡೆಸಿದರು. ಆದರೆ, ಮೊದಲ ಸಭೆ ವಿಫಲವಾಯಿತು. ನಂತರ, ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಾರಿ ಮಾಲೀಕರ ಸಂಘದ ಜೊತೆ ಸಭೆ ನಡೆಸಿದರು. ಈ ಸಭೆಯೂ ಕೂಡ ವಿಫಲವಾಯಿತು.

ವರದಿ: ಈರಣ್ಣ ಬಸವ

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್