AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Lorry Strike: ಕರ್ನಾಟಕ ಲಾರಿ ಮುಷ್ಕರ ಶುರು; ಲಾರಿ, ಟ್ರಕ್ ಸಂಚಾರ ಸ್ಥಗಿತ

ಕರ್ನಾಟಕ ಲಾರಿ ಮುಷ್ಕರ: ಡಿಸೇಲ್ ದರ ಏರಿಕೆ ಖಂಡಿಸಿ ಹಾಗೂ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ಕರೆ ನೀಡಿರುವ ಕರ್ನಾಟಕ ಮುಷ್ಕರ ಸೋಮವಾರ ಮಧ್ಯರಾತ್ರಿಯಿಂದ ಆರಂಭವಾಗಿದೆ. ಬೆಂಗಳೂರು, ಮೈಸೂರು ಸೇರಿದಂತೆ ಅನೇಕ ಕಡೆಗಳಲ್ಲಿ ಲಾರಿಗಳ ಹಾಗೂ ಟ್ರಕ್​ಗಳ ಸಂಚಾರ ಸ್ಥಗಿತಗೊಂಡಿದೆ.

Karnataka Lorry Strike: ಕರ್ನಾಟಕ ಲಾರಿ ಮುಷ್ಕರ ಶುರು; ಲಾರಿ, ಟ್ರಕ್ ಸಂಚಾರ ಸ್ಥಗಿತ
ಯಶವಂತಪುರದ ಟ್ರಕ್ ಟರ್ಮಿನಲ್​ನಲ್ಲಿ ಲಾರಿಗಳು ಸಾಲು ಸಾಲಾಗಿ ನಿಂತಿವೆ
ರಾಮ್​, ಮೈಸೂರು
| Edited By: |

Updated on: Apr 15, 2025 | 7:31 AM

Share

ಬೆಂಗಳೂರು, ಏಪ್ರಿಲ್ 15: ಡೀಸೆಲ್ ದರ ಏರಿಕೆ (Diesel Price Hike) ವಿರೋಧಿಸಿ ಲಾರಿ ಮಾಲೀಕರ ಸಂಘ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರ (Lorry Strike) ಸೋಮವಾರ ಮಧ್ಯರಾತ್ರಿಯಿಂದ ಆರಂಭವಾಗಿದೆ. ಬೆಂಗಳೂರಿನಲ್ಲಿ (Bengaluru) ಲಾರಿ ಹಾಗೂ ಟ್ರಕ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಯಶವಂತಪುರದ ಟ್ರಕ್ ಟರ್ಮಿನಲ್​ನಲ್ಲಿ ಲಾರಿಗಳು ಸಾಲು ಸಾಲಾಗಿ ನಿಂತಿರುವ ದೃಶ್ಯ ಕಂಡು ಬಂದಿದೆ. ದಿನಸಿ, ತರಕಾರಿ, ಎಲೆಕ್ಟ್ರಾನಿಕ್ ವಸ್ತುಗಳನ್ನು ಸಗಾಟ ಮಾಡುವ ಲಾರಿಗಳು ಸಂಚಾರ ಸ್ಥಗಿತಗೊಳಿಸಿವೆ. ಹೆದ್ದಾರಿ ಹಾಗೂ ನಿಲ್ದಾಣಗಳಲ್ಲಿ ಲಾರಿ ನಿಲ್ಲಿಸಿ ಚಾಲಕರು ಕೂಡ ಮುಷ್ಕರದಲ್ಲಿ ಭಾಗಿಯಾಗಿದ್ದಾರೆ.

ಸಂಸ್ಕೃತಿಕ ನಗರ ಮೈಸೂರಿನಲ್ಲಿ ಕೂಡ ಲಾರಿ ಮತ್ತು ಗೂಡ್ಸ್ ವಾಹನಗಳ ಸಂಚಾರ ಸಂಪೂರ್ಣ ಬಂದ್ ಆಗಿದೆ. ಮೈಸೂರಿನ ಬಂಡಿಪಾಳ್ಯ ಮಾರುಕಟ್ಟೆ ಬಳ್ಳಿ ನೂರಾರು ಲಾರಿಗಳು ನಿಂತಿವೆ.

ಲಾರಿ ಮಾಲೀಕರ ಬೇಡಿಕೆಗಳೇನು?

  • ರಾಜ್ಯ ಸರ್ಕಾರ ಡೀಸೆಲ್​ ಮೇಲಿನ ತೆರಿಗೆ ಹೆಚ್ಚಳ ಆದೇಶ ಹಿಂಪಡೆಯಬೇಕು
  • ರಾಜ್ಯದ ಹೆದ್ದಾರಿ ಟೋಲ್​​​​ಗಳಲ್ಲಿನ ಹಣ ವಸೂಲಿ ತಡೆಯಬೇಕು
  • ಗಡಿಗಳಲ್ಲಿ ಆರ್​ಟಿಒ ಚೆಕ್​​ಪೋಸ್ಟ್​ಗಳನ್ನು ತೆರವು ಮಾಡಬೇಕು
  • ಎಫ್​ಸಿ ಫಿಟ್ನೆಸ್​ ಶುಲ್ಕ ಏರಿಕೆ ಮಾಡಿರುವುದನ್ನು ಹಿಂಪಡೆಯಬೇಕು
  • ಗೂಡ್ಸ್​​​ ವಾಹನಗಳಿಗೆ ಬೆಂಗಳೂರು ಪ್ರವೇಶ ನಿರ್ಬಂಧ ಆದೇಶ ಹಿಂಪಡೆಯಬೇಕು
  • ಲಾರಿ ಚಾಲಕರ ಮೇಲಿನ ಹಲ್ಲೆ, ದೌರ್ಜನ್ಯಗಳನ್ನು ತಡೆಯಬೇಕು

ಲಾರಿ ಚಾಲಕರು ಹೇಳುವುದೇನು?

ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಗಿದಂತಾಗಿದೆ ನಮ್ಮ ಸ್ಥಿತಿ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜಗಳದಲ್ಲಿ ನಮಗೆ ಸಮಸ್ಯೆ ಆಗಿದೆ. ಹೀಗಾಗಿ ಲಾರಿ ಮುಷ್ಕರಕ್ಕೆ ಸಂಪೂರ್ಣ ಬೆಂಬಲ ನೀಡಿದ್ದೇವೆ ಎಂದು ಲಾರಿ ಚಾಲಕ ಕುಮಾರ್ ಎಂಬವರು ಮೈಸೂರಿನಲ್ಲಿ ‘ಟಿವಿ9’ಗೆ ತಿಳಿಸಿದ್ದಾರೆ. ಪ್ರತಿ ನಿತ್ಯ ನೂರಾರು ಲಾರಿಗಳು ಓಡಾಡುತ್ತಿದ್ದವು. ಇಂದು ಒಂದೇ ಒಂದು ಲಾರಿ‌ ರಸ್ತೆಗಿಳಿಯುವುದಿಲ್ಲ. ನಮ್ಮ ಬೇಡಿಕೆ ಈಡೇರಿಸುವವರೆಗೂ ಲಾರಿ ಓಡಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ
Image
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
Image
ಸಂವಿಧಾನಕ್ಕೆ ಅಪಚಾರ ಆರೋಪ: ಸಚಿವ ಕೆಎನ್​ ರಾಜಣ್ಣ ವಿರುದ್ಧ ದಾಖಲಾಯ್ತು ದೂರು
Image
ಹುಬ್ಬಳ್ಳಿ ಎನ್‌ಕೌಂಟರ್‌ ಕೇಸ್​: ಪಿಎಸ್​ಐ ಅನ್ನಪೂರ್ಣಗೆ ಮೆಚ್ಚುಗೆಯ ಮಹಾಪೂರ

ಎಲ್ಲಾ ಅಗತ್ಯ ವಸ್ತುಗಳ ಬೆಲೆ‌ ಜಾಸ್ತಿ ಆಗಿದೆ, ಬಾಡಿಗೆ ಮಾತ್ರ ಜಾಸ್ತಿ ಮಾಡಿಲ್ಲ. ಲಾರಿ ಮಾಲೀಕರು ಹಾಗೂ ಚಾಲಕರ ಸಮಸ್ಯೆಯನ್ನು ಯಾರೂ ಆಲಿಸುತ್ತಿಲ್ಲ. ಇದೆಲ್ಲವೂ ಗ್ಯಾರಂಟಿ ಎಫೆಕ್ಟ್. ನಮ್ಮಿಂದ ಕಿತ್ತು ಅವರಿಗೆ ಕೊಡುತ್ತಿದ್ದಾರೆ. ಮಹಿಳೆಯರು ಯಾರೂ ಉಚಿತ ಕೇಳಿರಲಿಲ್ಲ, ಕೊಡುವುದಿದ್ದರೆ 60 ವರ್ಷ ಮೇಲ್ಪಟ್ಟವರಿಗೆ ನೀಡಿ ಎಂದು ಚಾಲಕ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಲಾರಿ ಮುಷ್ಕರ, ಅಗತ್ಯ ವಸ್ತುಗಳ ಸಾಗಾಟಕ್ಕೆ ತಟ್ಟಲಿದೆ ಬಿಸಿ

ಮೈಸೂರಿನ ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ ನೂರಾರು ಲಾರಿಗಳು ನಿಂತಿವೆ. ನೂರಾರು ಲಾರಿಗಳನ್ನು ನಿಲ್ಲಿಸಿ ಹೋಗಿದ್ದಾರೆ. ಬೆಳಗ್ಗೆಯಿಂದ ಯಾರು ಸಹಾ ಬಂದಿಲ್ಲ. ಮಾಮೂಲಿಯಾಗಿ ಬೆಳಗ್ಗೆ ಹೊತ್ತು ಹೆಚ್ಚು ಲಾರಿಗಳು ಸಂಚರಿಸುತ್ತಿದ್ದವು. ಆದರೆ ಇವತ್ತು ಒಂದು ಲಾರಿ ಸಹಾ ಹೋಗಿಲ್ಲ ಎಂದು ಟ್ರಕ್ ಟರ್ಮಿನಲ್ ಉಸ್ತುವಾರಿ ಸತ್ಯ ತಿಳಿಸಿದ್ದಾರೆ.

ಲಾರಿ ಮುಷ್ಕರಕ್ಕೆ ಟ್ಯಾಕ್ಸಿ ಚಾಲಕರಿಂದ ಬೆಂಬಲ: ಸಂಚಾರಕ್ಕಿಲ್ಲ ತಡೆ

ಲಾರಿ ಮುಷ್ಕರಕ್ಕೆ ಟ್ಯಾಕ್ಸಿ ಚಾಲಕರು ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಎಂದಿನಂತೆ ಟ್ಯಾಕ್ಸಿಗಳು ಸಂಚರಿಸುತ್ತಿವೆ. ಒಲಾ‌, ಉಬರ್, ಏರ್ಪೋಟ್ ಟ್ಯಾಕ್ಸಿ ಸೇರಿದಂತೆ ಎಲ್ಲಾ ಕ್ಯಾಬ್​ಗಳು ಸಂಚಾರ ಮಾಡುತ್ತಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು