AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Lorry Strike: ಕರ್ನಾಟಕ ಲಾರಿ ಮುಷ್ಕರ ಶುರು; ಲಾರಿ, ಟ್ರಕ್ ಸಂಚಾರ ಸ್ಥಗಿತ

ಕರ್ನಾಟಕ ಲಾರಿ ಮುಷ್ಕರ: ಡಿಸೇಲ್ ದರ ಏರಿಕೆ ಖಂಡಿಸಿ ಹಾಗೂ ಇತರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರು ಕರೆ ನೀಡಿರುವ ಕರ್ನಾಟಕ ಮುಷ್ಕರ ಸೋಮವಾರ ಮಧ್ಯರಾತ್ರಿಯಿಂದ ಆರಂಭವಾಗಿದೆ. ಬೆಂಗಳೂರು, ಮೈಸೂರು ಸೇರಿದಂತೆ ಅನೇಕ ಕಡೆಗಳಲ್ಲಿ ಲಾರಿಗಳ ಹಾಗೂ ಟ್ರಕ್​ಗಳ ಸಂಚಾರ ಸ್ಥಗಿತಗೊಂಡಿದೆ.

Karnataka Lorry Strike: ಕರ್ನಾಟಕ ಲಾರಿ ಮುಷ್ಕರ ಶುರು; ಲಾರಿ, ಟ್ರಕ್ ಸಂಚಾರ ಸ್ಥಗಿತ
ಯಶವಂತಪುರದ ಟ್ರಕ್ ಟರ್ಮಿನಲ್​ನಲ್ಲಿ ಲಾರಿಗಳು ಸಾಲು ಸಾಲಾಗಿ ನಿಂತಿವೆ
ರಾಮ್​, ಮೈಸೂರು
| Edited By: |

Updated on: Apr 15, 2025 | 7:31 AM

Share

ಬೆಂಗಳೂರು, ಏಪ್ರಿಲ್ 15: ಡೀಸೆಲ್ ದರ ಏರಿಕೆ (Diesel Price Hike) ವಿರೋಧಿಸಿ ಲಾರಿ ಮಾಲೀಕರ ಸಂಘ ಕರೆ ನೀಡಿರುವ ಅನಿರ್ದಿಷ್ಟಾವಧಿ ಮುಷ್ಕರ (Lorry Strike) ಸೋಮವಾರ ಮಧ್ಯರಾತ್ರಿಯಿಂದ ಆರಂಭವಾಗಿದೆ. ಬೆಂಗಳೂರಿನಲ್ಲಿ (Bengaluru) ಲಾರಿ ಹಾಗೂ ಟ್ರಕ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಯಶವಂತಪುರದ ಟ್ರಕ್ ಟರ್ಮಿನಲ್​ನಲ್ಲಿ ಲಾರಿಗಳು ಸಾಲು ಸಾಲಾಗಿ ನಿಂತಿರುವ ದೃಶ್ಯ ಕಂಡು ಬಂದಿದೆ. ದಿನಸಿ, ತರಕಾರಿ, ಎಲೆಕ್ಟ್ರಾನಿಕ್ ವಸ್ತುಗಳನ್ನು ಸಗಾಟ ಮಾಡುವ ಲಾರಿಗಳು ಸಂಚಾರ ಸ್ಥಗಿತಗೊಳಿಸಿವೆ. ಹೆದ್ದಾರಿ ಹಾಗೂ ನಿಲ್ದಾಣಗಳಲ್ಲಿ ಲಾರಿ ನಿಲ್ಲಿಸಿ ಚಾಲಕರು ಕೂಡ ಮುಷ್ಕರದಲ್ಲಿ ಭಾಗಿಯಾಗಿದ್ದಾರೆ.

ಸಂಸ್ಕೃತಿಕ ನಗರ ಮೈಸೂರಿನಲ್ಲಿ ಕೂಡ ಲಾರಿ ಮತ್ತು ಗೂಡ್ಸ್ ವಾಹನಗಳ ಸಂಚಾರ ಸಂಪೂರ್ಣ ಬಂದ್ ಆಗಿದೆ. ಮೈಸೂರಿನ ಬಂಡಿಪಾಳ್ಯ ಮಾರುಕಟ್ಟೆ ಬಳ್ಳಿ ನೂರಾರು ಲಾರಿಗಳು ನಿಂತಿವೆ.

ಲಾರಿ ಮಾಲೀಕರ ಬೇಡಿಕೆಗಳೇನು?

  • ರಾಜ್ಯ ಸರ್ಕಾರ ಡೀಸೆಲ್​ ಮೇಲಿನ ತೆರಿಗೆ ಹೆಚ್ಚಳ ಆದೇಶ ಹಿಂಪಡೆಯಬೇಕು
  • ರಾಜ್ಯದ ಹೆದ್ದಾರಿ ಟೋಲ್​​​​ಗಳಲ್ಲಿನ ಹಣ ವಸೂಲಿ ತಡೆಯಬೇಕು
  • ಗಡಿಗಳಲ್ಲಿ ಆರ್​ಟಿಒ ಚೆಕ್​​ಪೋಸ್ಟ್​ಗಳನ್ನು ತೆರವು ಮಾಡಬೇಕು
  • ಎಫ್​ಸಿ ಫಿಟ್ನೆಸ್​ ಶುಲ್ಕ ಏರಿಕೆ ಮಾಡಿರುವುದನ್ನು ಹಿಂಪಡೆಯಬೇಕು
  • ಗೂಡ್ಸ್​​​ ವಾಹನಗಳಿಗೆ ಬೆಂಗಳೂರು ಪ್ರವೇಶ ನಿರ್ಬಂಧ ಆದೇಶ ಹಿಂಪಡೆಯಬೇಕು
  • ಲಾರಿ ಚಾಲಕರ ಮೇಲಿನ ಹಲ್ಲೆ, ದೌರ್ಜನ್ಯಗಳನ್ನು ತಡೆಯಬೇಕು

ಲಾರಿ ಚಾಲಕರು ಹೇಳುವುದೇನು?

ಗಂಡ ಹೆಂಡಿರ ಜಗಳದಲ್ಲಿ ಕೂಸು ಬಡವಾಗಿದಂತಾಗಿದೆ ನಮ್ಮ ಸ್ಥಿತಿ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಜಗಳದಲ್ಲಿ ನಮಗೆ ಸಮಸ್ಯೆ ಆಗಿದೆ. ಹೀಗಾಗಿ ಲಾರಿ ಮುಷ್ಕರಕ್ಕೆ ಸಂಪೂರ್ಣ ಬೆಂಬಲ ನೀಡಿದ್ದೇವೆ ಎಂದು ಲಾರಿ ಚಾಲಕ ಕುಮಾರ್ ಎಂಬವರು ಮೈಸೂರಿನಲ್ಲಿ ‘ಟಿವಿ9’ಗೆ ತಿಳಿಸಿದ್ದಾರೆ. ಪ್ರತಿ ನಿತ್ಯ ನೂರಾರು ಲಾರಿಗಳು ಓಡಾಡುತ್ತಿದ್ದವು. ಇಂದು ಒಂದೇ ಒಂದು ಲಾರಿ‌ ರಸ್ತೆಗಿಳಿಯುವುದಿಲ್ಲ. ನಮ್ಮ ಬೇಡಿಕೆ ಈಡೇರಿಸುವವರೆಗೂ ಲಾರಿ ಓಡಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ
Image
ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಹಲವೆಡೆ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆ
Image
ಬೆಂಗಳೂರು ಹೈವೇಯಲ್ಲಿ 3 ಬಾರಿ ಪಲ್ಟಿಯಾದ ನೀರಿನ ಟ್ಯಾಂಕರ್; ವಿಡಿಯೋ ವೈರಲ್
Image
ಸಂವಿಧಾನಕ್ಕೆ ಅಪಚಾರ ಆರೋಪ: ಸಚಿವ ಕೆಎನ್​ ರಾಜಣ್ಣ ವಿರುದ್ಧ ದಾಖಲಾಯ್ತು ದೂರು
Image
ಹುಬ್ಬಳ್ಳಿ ಎನ್‌ಕೌಂಟರ್‌ ಕೇಸ್​: ಪಿಎಸ್​ಐ ಅನ್ನಪೂರ್ಣಗೆ ಮೆಚ್ಚುಗೆಯ ಮಹಾಪೂರ

ಎಲ್ಲಾ ಅಗತ್ಯ ವಸ್ತುಗಳ ಬೆಲೆ‌ ಜಾಸ್ತಿ ಆಗಿದೆ, ಬಾಡಿಗೆ ಮಾತ್ರ ಜಾಸ್ತಿ ಮಾಡಿಲ್ಲ. ಲಾರಿ ಮಾಲೀಕರು ಹಾಗೂ ಚಾಲಕರ ಸಮಸ್ಯೆಯನ್ನು ಯಾರೂ ಆಲಿಸುತ್ತಿಲ್ಲ. ಇದೆಲ್ಲವೂ ಗ್ಯಾರಂಟಿ ಎಫೆಕ್ಟ್. ನಮ್ಮಿಂದ ಕಿತ್ತು ಅವರಿಗೆ ಕೊಡುತ್ತಿದ್ದಾರೆ. ಮಹಿಳೆಯರು ಯಾರೂ ಉಚಿತ ಕೇಳಿರಲಿಲ್ಲ, ಕೊಡುವುದಿದ್ದರೆ 60 ವರ್ಷ ಮೇಲ್ಪಟ್ಟವರಿಗೆ ನೀಡಿ ಎಂದು ಚಾಲಕ ಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ: ಲಾರಿ ಮುಷ್ಕರ, ಅಗತ್ಯ ವಸ್ತುಗಳ ಸಾಗಾಟಕ್ಕೆ ತಟ್ಟಲಿದೆ ಬಿಸಿ

ಮೈಸೂರಿನ ದೇವರಾಜ ಅರಸು ಟ್ರಕ್ ಟರ್ಮಿನಲ್‌ನಲ್ಲಿ ನೂರಾರು ಲಾರಿಗಳು ನಿಂತಿವೆ. ನೂರಾರು ಲಾರಿಗಳನ್ನು ನಿಲ್ಲಿಸಿ ಹೋಗಿದ್ದಾರೆ. ಬೆಳಗ್ಗೆಯಿಂದ ಯಾರು ಸಹಾ ಬಂದಿಲ್ಲ. ಮಾಮೂಲಿಯಾಗಿ ಬೆಳಗ್ಗೆ ಹೊತ್ತು ಹೆಚ್ಚು ಲಾರಿಗಳು ಸಂಚರಿಸುತ್ತಿದ್ದವು. ಆದರೆ ಇವತ್ತು ಒಂದು ಲಾರಿ ಸಹಾ ಹೋಗಿಲ್ಲ ಎಂದು ಟ್ರಕ್ ಟರ್ಮಿನಲ್ ಉಸ್ತುವಾರಿ ಸತ್ಯ ತಿಳಿಸಿದ್ದಾರೆ.

ಲಾರಿ ಮುಷ್ಕರಕ್ಕೆ ಟ್ಯಾಕ್ಸಿ ಚಾಲಕರಿಂದ ಬೆಂಬಲ: ಸಂಚಾರಕ್ಕಿಲ್ಲ ತಡೆ

ಲಾರಿ ಮುಷ್ಕರಕ್ಕೆ ಟ್ಯಾಕ್ಸಿ ಚಾಲಕರು ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ, ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಎಂದಿನಂತೆ ಟ್ಯಾಕ್ಸಿಗಳು ಸಂಚರಿಸುತ್ತಿವೆ. ಒಲಾ‌, ಉಬರ್, ಏರ್ಪೋಟ್ ಟ್ಯಾಕ್ಸಿ ಸೇರಿದಂತೆ ಎಲ್ಲಾ ಕ್ಯಾಬ್​ಗಳು ಸಂಚಾರ ಮಾಡುತ್ತಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ram
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ