AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಘೋಷಣೆಯಂತೆ ಲಾರಿ ಮುಷ್ಕರ ನಿಶ್ಚಿತ: ಸರ್ಕಾರ ಕರೆದರೆ ಮಾತುಕತೆಗೆ ಸಿದ್ಧವೆಂದ ಅಧ್ಯಕ್ಷ ಷಣ್ಮುಗಪ್ಪ

Lorry Strike: ಡಿಸೆಲ್ ದರ ಏರಿಕೆ, ಟೋಲ್ ಶುಲ್ಕ ಹೆಚ್ಚಳ, ಆರ್​ಟಿಒ ಅಧಿಕಾರಿಗಳ ಕಿರುಕುಳ ಸೇರಿದಂತೆ ಹಲವು ವಿಚಾರಗಳನ್ನ ಪ್ರಸ್ತಾಪಿಸಿ ಇಂದು ಮಧ್ಯರಾತ್ರಿಯಿಂದಲೇ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಕರೆ ನೀಡಿದೆ. ಈ ವಿಚಾರವಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ, ಮುಷ್ಕರದಲ್ಲಿ ಯಾವುದೇ ರೀತಿಯ ಬದಲಾವಣೆ ಇಲ್ಲ ಎಂದಿದ್ದಾರೆ.

ಘೋಷಣೆಯಂತೆ ಲಾರಿ ಮುಷ್ಕರ ನಿಶ್ಚಿತ: ಸರ್ಕಾರ ಕರೆದರೆ ಮಾತುಕತೆಗೆ ಸಿದ್ಧವೆಂದ ಅಧ್ಯಕ್ಷ ಷಣ್ಮುಗಪ್ಪ
ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ
ಗಂಗಾಧರ​ ಬ. ಸಾಬೋಜಿ
|

Updated on:Apr 14, 2025 | 7:10 PM

Share

ಬೆಂಗಳೂರು, ಏಪ್ರಿಲ್​ 14: ಬೆಲೆ ಏರಿಕೆಯಿಂದ ಕಂಗೆಟ್ಟು ಹೋಗಿರುವ ಜನಸಮಾನ್ಯರಿಗೆ ಮತ್ತೊಂದು ಬಿಸಿ ತಟ್ಟಲಿದೆ. ಇಂದು ಮಧ್ಯರಾತ್ರಿಯಿಂದಲೇ ರಾಜ್ಯದ 6 ಲಕ್ಷ ಲಾರಿಗಳ ಸಂಚಾರ ಬಂದ್ ಆಗಲಿದೆ. ಡೀಸೆಲ್ ಬೆಲೆ ಇಳಿಸುವಂತೆ ಒತ್ತಾಯಿಸಿ ಲಾರಿ ಮಾಲೀಕರ ಸಂಘ ಅನಿರ್ದಿಷ್ಠವಧಿ ಮುಷ್ಕರಕ್ಕೆ (Lorry strike) ಕರೆ ನೀಡಿದೆ. ಈ ವಿಚಾರವಾಗಿ ಮಾತನಾಡಿರುವ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ (Shanmugappa), ನಮನ್ನು ಇದುವರೆಗೂ ಯಾರು ಕರೆದು ಮಾತನಾಡಿಲ್ಲ. ಹಾಗಾಗಿ ನಾವು ಘೋಷಣೆ ಮಾಡಿದಂತೆ ಮುಷ್ಕರ ಮಾಡುವುದು ನಿಶ್ಚಿತ ಎಂದು ಹೇಳಿದ್ದಾರೆ.

ಸರ್ಕಾರ ಕರೆದರೆ ಮಾತುಕತೆಗೆ ನಾವು ಸಿದ್ಧ: ಅಧ್ಯಕ್ಷ ಷಣ್ಮುಗಪ್ಪ

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧ್ಯಕ್ಷ ಷಣ್ಮುಗಪ್ಪ, ಹಲವು ಬಾರಿ ಸಿಎಂ ಸಿದ್ದರಾಮಯ್ಯನವರಿಗೆ ನಾವು ಪತ್ರ ಬರೆದಿದ್ದೆವು. ಸರ್ಕಾರ ಕರೆದರೆ ಮಾತುಕತೆಗೆ ನಾವು ಸಿದ್ಧವಾಗಿದ್ದೇವೆ. ಕೂಡಲೇ ಲಾರಿ ಮಾಲೀಕರ ಸಮಸ್ಯೆಗಳನ್ನು ಸರ್ಕಾರ ಪರಿಹರಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: Karnataka Lorry Strike: ಇಂದು ಮಧ್ಯರಾತ್ರಿಯಿಂದಲೇ ಲಾರಿ ಮುಷ್ಕರ, ನಾಳೆಯಿಂದ ಅಗತ್ಯ ವಸ್ತುಗಳ ಸಾಗಾಟಕ್ಕೆ ತಟ್ಟಲಿದೆ ಬಿಸಿ

ಇದನ್ನೂ ಓದಿ
Image
ಅಂಚೆ ಮೂಲಕ ಮನೆ ಬಾಗಿಲಿಗೆ ಬರಲಿದೆ ಮಾವು: ಇಂದೇ ಆರ್ಡರ್​ ಮಾಡಿ
Image
ಡೀಸೆಲ್​ ದರ ಏರಿಕೆ ಖಂಡಿಸಿ ಏ. 14 ರಂದು ಲಾರಿ ಮಾಲೀಕರ ಮುಷ್ಕರ
Image
ಸಾಕಾ, ಬೇಕಾ... ಹಾಲಿನ ದರ ಏರಿಕೆ ಬೆನ್ನಲ್ಲೇ ಕಾಫಿ, ಚಹಾ ದರ ಹೆಚ್ಚಳ
Image
ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ಪತಿ: 5 ವರ್ಷ ಬಳಿಕ ಲವರ್ ಜತೆ ಸಿಕ್ಕ ಪತ್ನಿ

ಕಳೆದ 6 ತಿಂಗಳಲ್ಲಿ ಡೀಸೆಲ್ ದರ 5 ರೂ. ಹೆಚ್ಚಳ ಮಾಡಿದ್ದಾರೆ. ಇದರಿಂದ ಲಾರಿ ಮಾಲೀಕರಿಗೆ ಕಷ್ಟ ಆಗುತ್ತೆ. ರಾಜ್ಯದಲ್ಲಿ ಮೊದಲು ಕಡಿಮೆ ದರ ಇದ್ದಿದ್ದರಿಂದ ಈ ಹಿಂದೆ ಬೇರೆ ರಾಜ್ಯದ ಲಾರಿ ಚಾಲಕರು ಕರ್ನಾಟಕಕ್ಕೆ ಬರುತ್ತಿದ್ದರು. ಸರ್ಕಾರ ಕೂಡಲೇ ಡೀಸೆಲ್ ದರ ಬಗ್ಗೆ ಮರು ಪರಿಶೀಲನೆ ಮಾಡಬೇಕು ಎಂದು ಹೇಳಿದ್ದಾರೆ.

ಲಾರಿ ಮಾಲೀಕರು, ಟ್ರ್ಯಾಕ್ಟರ್​ ಮಾಲೀಕರು, ರೈತರು ಪರದಾಡುತ್ತಿದ್ದಾರೆ. ಗಡಿ ಚೆಕ್​ಪೋಸ್ಟ್​ಗಳಲ್ಲಿ ಆರ್​ಟಿಓ ಅಧಿಕಾರಿಗಳ ಸುಲಿಗೆ ನಿಲ್ಲಬೇಕು. ಬೆಂಗಳೂರು ನಗರಕ್ಕೆ ಎಂಟ್ರಿ ಆಗುವ ಲಾರಿಗಳಿಗೆ ನಿರ್ಬಂಧ ಸಡಿಲಿಸಬೇಕು. ದಿನಬಳಕೆ ವಸ್ತುಗಳ ಲಾರಿಗಳಿಗೆ ಇರುವ ನಿರ್ಬಂಧ ಸಡಿಲಿಸಬೇಕು. ಇದರಿಂದ ಚಾಲಕರು ಗಂಟೆಗಟ್ಟಲೇ ಕಾಯುವ ಸ್ಥಿತಿ ಉಂಟಾಗಿದೆ ಎಂದಿದ್ದಾರೆ.

ಕರ್ನಾಟಕ ಸರಕು ಸಾಗಾಣಿಕೆದಾರರ ಸಂಘದ ಪ್ರಮುಖ ಬೇಡಿಕೆಗಳು

  • ಡೀಸೆಲ್ ಬೆಲೆ ಹೆಚ್ಚಳ ನಿರ್ಧಾರ ಹಿಂದಕ್ಕೆ ಪಡೆಯಬೇಕು.
  • ಟೋಲ್ ದರ ಹೆಚ್ಚಳ ಮಾಡಿರುವುದು ಹಿಂಪಡೆಯಬೇಕು.
  • ಬಾರ್ಡರ್ ಚೆಕ್ ಪೋಸ್ಟ್ ತೆರವು ಮಾಡಬೇಕು.
  • FC ಶುಲ್ಕ ಹೆಚ್ಚಳ ಕೈಬಿಡಬೇಕು.
  • ಬೆಂಗಳೂರು ನಗರಕ್ಕೆ ಸರಕು ಸಾಗಣೆ ವಾಹನಗಳ ಪ್ರವೇಶಕ್ಕೆ ಇರುವ ನಿರ್ಬಂಧ ಸಡಿಲಿಕೆ ಮಾಡಬೇಕು.

ಲಾರಿ ಮುಷ್ಕರಕ್ಕೆ ಯಾರೆಲ್ಲಾ ಬೆಂಬಲ?

ಲಾರಿ ಮಾಲೀಕರ ಮುಷ್ಕರಕ್ಕೆ ಆಲ್‌ ಇಂಡಿಯಾ ಮೋಟರ್ ಟ್ರಾನ್ಸ್‌ಪೋರ್ಟ್ ಕಾರ್ಪೇರೇಷನ್, ಪೆಟ್ರೋಲ್, ಡೀಸೆಲ್ ಸಾಗಿಸುವ ಲಾರಿ ಮಾಲೀಕರು ಸೇರಿದಂತೆ 10 ಸಂಘಟನೆಗಳು ಬೆಂಬಲ ನೀಡಿವೆ. ನಾಳೆ ಒಂದು ದಿನ ಮಾತ್ರ ಟ್ಯಾಕ್ಸಿ ಸೇವೆ ಬಂದ್ ಮಾಡಲು ಏರ್ಪೋರ್ಟ್ ಟ್ಯಾಕ್ಸಿ ಡ್ರೈವರ್ ಯೂನಿಯನ್ ನಿರ್ಧರಿಸಿದೆ. ನಾಳೆಯ ಪರಿಸ್ಥಿತಿ ನೋಡಿಕೊಂಡು ಅನಿರ್ಧಿಷ್ಠವಧಿ ಮುಷ್ಕರದ ಬಗ್ಗೆ ನಿರ್ಧರಿಸಲಿದ್ದಾರೆ.

ವರದಿ: ಲಕ್ಷ್ಮೀ ನರಸಿಂಹ

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 7:10 pm, Mon, 14 April 25

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ