AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪತ್ರ: 50 ಸಾವಿರ ಸಿಲಿಂಡರ್ ಬೇಡಿಕೆ ಬಗ್ಗೆ ಪ್ರಸ್ತಾಪ

ಇಸ್ರೇಲ್‌-ಇರಾನ್‌ ಯುದ್ಧ 21ನೇ ದಿನಕ್ಕೆ ಕಾಲಿಟ್ಟರೆ, ಭಾರತದಲ್ಲಿ ಗ್ಯಾಸ್ ಸಂಕಷ್ಟ ಎದುರಾಗಿ 10 ದಿನವೇ ಕಳೆದಿದೆ. ಇಷ್ಟಾದ್ರೂ ಸಮಸ್ಯೆ ಬಗೆಹರಿದಿಲ್ಲ. ಇತ್ತ ಕರ್ನಾಟಕದಲ್ಲೂ ಸಿಲಿಂಡರ್​ ಅಭಾವ ಮುಂದುವರೆದಿದೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಸಮರ್ಪಕ ಹಂಚಿಕೆಗೆ ಮನವಿ ಮಾಡಿದ್ದಾರೆ.

ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಪತ್ರ: 50 ಸಾವಿರ ಸಿಲಿಂಡರ್ ಬೇಡಿಕೆ ಬಗ್ಗೆ ಪ್ರಸ್ತಾಪ
ಸಿಎಂ ಸಿದ್ದರಾಮಯ್ಯImage Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on:Mar 20, 2026 | 6:43 PM

Share

ಬೆಂಗಳೂರು, ಮಾರ್ಚ್​ 20: ದೇಶದಲ್ಲಿ ಸಿಲಿಂಡರ್ (Cylinder) ಅಭಾವದ ಸರಣಿ ಸಮಸ್ಯೆ ಮುಂದುವರೆದಿದೆ. ಇತ್ತ ಕರ್ನಾಟಕದಲ್ಲೂ ಎಲ್​​​ಪಿಜಿಗಾಗಿ ಹೋಟೆಲ್ ಮಾಲೀಕರು ನಿತ್ಯ ಪರದಾಡುತ್ತಿದ್ದಾರೆ. ಒಂದ್ಕಡೆ ಗೃಹಬಳಕೆ ಸಿಲಿಂಡರ್ ಪಡೆಯಲು ಜನರು ಮುಗಿಬಿದ್ದರೆ, ಮತ್ತೊಂದ್ಕಡೆ ವಾಣಿಜ್ಯ ಸಿಲಿಂಡರ್ ಇಲ್ಲದೆ ಹಲವು ಉದ್ಯಮಗಳು ಬಂದ್ ಆಗುತ್ತಿವೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ (cm Siddaramaiah) ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದು, ಮಧ್ಯಪ್ರವೇಶಕ್ಕೆ ಆಗ್ರಹಿಸಿದ್ದಾರೆ.

ಕೇಂದ್ರ ಸಚಿವ ಹರ್ದೀಪ್ ಸಿಂಗ್​ಗೆ ಸಿಎಂ ಪತ್ರ

ಸಿಎಂ ಸಿದ್ದರಾಮಯ್ಯ ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಪತ್ರವೊಂದನ್ನ ಬರೆದಿದ್ದರು. ಈಗ ಸಿಲಿಂಡರ್ ಸಮಸ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಮತ್ತೊಂದು ಪತ್ರ ಬರೆದಿದ್ದಾರೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್​ಗೆ ಬರೆದ ಪತ್ರದಲ್ಲಿ ರಾಜ್ಯದ ಸಿಲಿಂಡರ್​ಗಳ ಅಭಾವದ ಬಗ್ಗೆ ಉಲ್ಲೇಖಿಸಿದ್ದಾರೆ. 50 ಸಾವಿರ ಸಿಲಿಂಡರ್​ಗಳು ಬೇಕು. ಭಾರತಕ್ಕೆ ಬಂದಿರುವ ತೈಲ ಹಡಗುಗಳ ತೈಲವನ್ನ ಸಮರ್ಪಕವಾಗಿ ಹಂಚಿಕೆ ಮಾಡುವಂತೆ ಮನವಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್​

ರೆಸ್ಟೋರೆಂಟ್​ಗಳು, ಹೋಟೆಲ್​ಗಳು, ಅಡುಗೆ ತಯಾರಿಸುವ ಸಂಸ್ಥೆಗಳು ಹಾಗೂ ಪಿಜಿಗಳಲ್ಲಿ ಸಿಲಿಂಡರ್ ಅಭಾವ ಹೆಚ್ಚಾಗಿದೆ. ಹೀಗಾಗಿ 50 ಸಾವಿರ LPG ಸಿಲಿಂಡರ್​ಗಳ ಬೇಡಿಕೆಗೆ ಇದೆ. ನಾವು ದಿನಕ್ಕೆ 1000 ಸಿಲಿಂಡರ್​ಗಳನ್ನು ಮಾತ್ರ ಪೂರೈಸಲು ಸಮರ್ಥರಾಗಿದ್ದೇವೆ. ಈ ಕಾರಣಕ್ಕೆ ಹೋಟೆಲ್, ಪಿಜಿಗಳು ಮುಚ್ಚುವ ಪರಿಸ್ಥಿತಿ ಎದುರಾಗಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ವಾಣಿಜ್ಯ ಬಳಕೆ ಎಲ್​ಪಿಜಿ ಸಿಲಿಂಡರ್ ಕೊರತೆ: ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿಗೆ ಸಿಎಂ ಸಿದ್ದರಾಮಯ್ಯ ಪತ್ರ

ವಿದ್ಯಾರ್ಥಿಗಳು, ಐಟಿ ನೌಕರರು, ರೈತರು, ಡೈರಿ ಉತ್ಪಾದಕರು ಸೇರಿದಂತೆ ಅನೇಕ ಜನ ಆತಿಥ್ಯ ವಲಯದ ಮೇಲೆ ಅವಲಂಬಿತರಾಗಿದ್ದಾರೆ. ಇದೇ ರೀತಿ ಎಲ್​ಪಿಜಿ ಇಲ್ಲದೇ ಆಟೋ ರೀಕ್ಷಗಳಿಗೂ ಸಂಕಷ್ಟ ಶುರುವಾಗಿದೆ. ಭಾರತ 2 ಟ್ಯಾಂಕರ್​ಗಳನ್ನ ಸ್ವೀಕರಿಸಿದೆ. ಇದು ಸಮಸ್ಯೆಗಳನ್ನ ನಿವಾರಿಸುತ್ತದೆ. ಹೀಗಾಗಿ ಕರ್ನಾಟಕಕ್ಕೆ ಸಮರ್ಪಕ ಹಂಚಿಕೆ ಮಾಡಿ. ನಮ್ಮ ಲಭ್ಯತೆ ಚಿತಪಡಿಸಿಕೊಳ್ಳಲು ನೀವು ಹಸ್ತಕ್ಷೇಪ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:42 pm, Fri, 20 March 26

Follow Us
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಏಯ್ ಯಾರಲ್ಲಿ ಟಿಕೆಟ್.. ಬಸ್ ಕಂಡಕ್ಟರ್ ಆದ ವಿದ್ಯಾರ್ಥಿ,ವಿಡಿಯೋ ವೈರಲ್!
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
ಶ್ವಾನದ ವೇಷದಲ್ಲೇ ಜಿಲ್ಲಾಧಿಕಾರಿ ಕಚೇರಿಗೆ ಬಂದ ವ್ಯಕ್ತಿ
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
RSS ಬಗ್ಗೆ ಹೇಳಿಕೆ: ಸಚಿವ ಯತೀಂದ್ರ ವಿರುದ್ಧ ಎಸ್​​ಪಿಗೆ ಬಿಜೆಪಿ ದೂರು
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ": ಸಚಿವ ಶಿವಲಿಂಗೇಗೌಡ
ನಮ್ ವಿಷ್ಯದಲ್ಲಿ ತಲೆಹಾಕೋದು ಬೇಡ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ವಿಧಾನ ಪರಿಷತ್​​ಗೆ ನಾಗೇಂದ್ರ ಆಗಮನದ ವೇಳೆ ಗೋಬ್ಯಾಕ್​​ ಘೋಷಣೆ
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?
ತಮಿಳುನಾಡಿಗೆ ಕೆಆರ್​​ಎಸ್​ನಿಂದ ನೀರು ಹರಿಸಲಾಗ್ತಿದ್ಯಾ?: ಸಚಿವರು ಏನಂದ್ರು?