AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಂಡಾಟಿಕೆ ನಿಲ್ಲಿಸದಿದ್ದರೆ ಸೋಮವಾರದಿಂದ ಮಹಾರಾಷ್ಟ್ರದ ವಾಹನಗಳನ್ನು ಎಪಿಎಂಸಿ ಒಳಗೆ ಬಿಡಲ್ಲ; APMC ನೌಕರರ ಎಚ್ಚರಿಕೆ

ಪುಂಡಾಟಿಕೆ ಮುಂದುವರಿಸಿದರೆ ಮಹಾರಾಷ್ಟ್ರದ ವಾಹನಗಳಿಗೆ ನಿರ್ಬಂಧ ವಿಧಿಸಲಾಗುವುದು ಎಂದು ಯಶವಂತಪುರದಲ್ಲಿನ ಎಪಿಎಂಸಿ ನೌಕರರು ಎಚ್ಚರಿಕೆ ನೀಡಿದ್ದಾರೆ. ಇನ್ನೊಂದೆಡೆ ಮಸಿ ಬಳಿದ ಮಹಾರಾಷ್ಟ್ರದ ಪುಂಡರಿಗೆ ಪ್ರತ್ಯುತ್ತರ ನೀಡಲು ಕರವೇ ಕಾರ್ಯಕರ್ತರು ಸಜ್ಜಾಗಿದ್ದಾರೆ.

ಪುಂಡಾಟಿಕೆ ನಿಲ್ಲಿಸದಿದ್ದರೆ ಸೋಮವಾರದಿಂದ ಮಹಾರಾಷ್ಟ್ರದ ವಾಹನಗಳನ್ನು ಎಪಿಎಂಸಿ ಒಳಗೆ ಬಿಡಲ್ಲ; APMC ನೌಕರರ ಎಚ್ಚರಿಕೆ
ಮಹಾ ಪುಂಡರಿಗೆ ಪ್ರತ್ಯುತ್ತರ ನೀಡಲು ಸಜ್ಜಾದ ಕರವೇ ಕಾರ್ಯಕರ್ತರು
TV9 Web
| Edited By: |

Updated on:Nov 26, 2022 | 7:05 PM

Share

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕರ್ನಾಟಕ ವಾಹನಗಳಿಗೆ ಕಪ್ಪು ಮಸಿ ಬಳಿದ ಹಿನ್ನೆಲೆ ಆಕ್ರೋಶಗೊಂಡ ನಗರದ APMC ಕಾರ್ಮಿಕ ಹಾಗೂ ಹಾಮಾಲಿ ಸಂಘಟನೆಗಳು ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದು ಎಚ್ಚರಿಕೆ ನೀಡಿವೆ. ಎಪಿಎಂಸಿಗೆ ಬರುವ ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದ ಸಂಘಟನೆಯ ಕಾರ್ಯಕರ್ತರು, ಪುಂಡಾಟಿಕೆಯನ್ನು ಹೀಗೆ ಮುಂದುವರಿಸಿದರೆ ಮಹಾರಾಷ್ಟ್ರ ವಾಹನಗಳನ್ನ ಒಳಗೆ ಬರಲು ಬಿಡುವುದಿಲ್ಲ. ಸೋಮವಾರದವರೆಗೆ ನಿಮಗೆ ಕಾಲಾವಕಾಶ ನೀಡುತ್ತೇವೆ. ಬಾಲ ಬಿಚ್ಚಿದರೆ ನಿಮ್ಮ ವಾಹನಗಳನ್ನು ಒಳಗೆ ಬಿಡುವುದಿಲ್ಲ ಎಂದು ಚಾಲಕರಿಗೆ ಎಚ್ಚರಿಕೆ ನೀಡಿದ್ದಾರೆ. ಯಶವಂತಪುರದಲ್ಲಿ ಇರುವ ಎಪಿಎಂಸಿಗೆ ಪ್ರತಿದಿನ ಸುಮಾರು 400ಕ್ಕೂ ಹೆಚ್ಚು ಮಹಾರಾಷ್ಟ್ರ ವಾಹನಗಳು ಬರುತ್ತವೆ.

ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್​ಗೆ ಜೈಲು: ಸುಬ್ರಮಣಿಯನ್ ಸ್ವಾಮಿ

ಮಹಾ ಪುಂಡರಿಗೆ ಪ್ರತ್ಯುತ್ತರ ನೀಡಲು ಸಜ್ಜಾದ ಕರವೇ

ಹುಬ್ಬಳ್ಳಿ: ಮಹಾರಾಷ್ಟ್ರದಲ್ಲಿ KSRTC ಬಸ್​​ಗಳ​​ ಮೇಲೆ ಕಲ್ಲು ತೂರಾಟ ನಡೆಸಿರುವುದನ್ನು ಖಂಡಿಸಿ ಹುಬ್ಬಳ್ಳಿ ಹೊಸ ಬಸ್​​ ನಿಲ್ದಾಣದಲ್ಲಿ ಕರ್ನಾಟಕ ರಕ್ಷಣ ವೇದಿಕೆ (ಕರವೇ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಮಹಾರಾಷ್ಟ್ರ ಬಸ್​​ಗಳಿಗೂ ಮಸಿ ಬಳಿಯಲು ಸಜ್ಜಾಗಿದ್ದಾರೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಗೋಕುಲ ರಸ್ತೆಯ ಬಸ್​​ ನಿಲ್ದಾಣದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್​​ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಒಕ್ಕಲು ಮಕ್ಕಳು ಒಕ್ಕಲುತನ ಮೀರಿ ಉದ್ಯಮಿಗಳಾಗಲು ಶ್ರಮಿಸಬೇಕು: ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಕರೆ

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:05 pm, Sat, 26 November 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್