AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುಂಡಾಟಿಕೆ ನಿಲ್ಲಿಸದಿದ್ದರೆ ಸೋಮವಾರದಿಂದ ಮಹಾರಾಷ್ಟ್ರದ ವಾಹನಗಳನ್ನು ಎಪಿಎಂಸಿ ಒಳಗೆ ಬಿಡಲ್ಲ; APMC ನೌಕರರ ಎಚ್ಚರಿಕೆ

ಪುಂಡಾಟಿಕೆ ಮುಂದುವರಿಸಿದರೆ ಮಹಾರಾಷ್ಟ್ರದ ವಾಹನಗಳಿಗೆ ನಿರ್ಬಂಧ ವಿಧಿಸಲಾಗುವುದು ಎಂದು ಯಶವಂತಪುರದಲ್ಲಿನ ಎಪಿಎಂಸಿ ನೌಕರರು ಎಚ್ಚರಿಕೆ ನೀಡಿದ್ದಾರೆ. ಇನ್ನೊಂದೆಡೆ ಮಸಿ ಬಳಿದ ಮಹಾರಾಷ್ಟ್ರದ ಪುಂಡರಿಗೆ ಪ್ರತ್ಯುತ್ತರ ನೀಡಲು ಕರವೇ ಕಾರ್ಯಕರ್ತರು ಸಜ್ಜಾಗಿದ್ದಾರೆ.

ಪುಂಡಾಟಿಕೆ ನಿಲ್ಲಿಸದಿದ್ದರೆ ಸೋಮವಾರದಿಂದ ಮಹಾರಾಷ್ಟ್ರದ ವಾಹನಗಳನ್ನು ಎಪಿಎಂಸಿ ಒಳಗೆ ಬಿಡಲ್ಲ; APMC ನೌಕರರ ಎಚ್ಚರಿಕೆ
ಮಹಾ ಪುಂಡರಿಗೆ ಪ್ರತ್ಯುತ್ತರ ನೀಡಲು ಸಜ್ಜಾದ ಕರವೇ ಕಾರ್ಯಕರ್ತರು
TV9 Web
| Edited By: Rakesh Nayak Manchi|

Updated on:Nov 26, 2022 | 7:05 PM

Share

ಬೆಂಗಳೂರು: ಮಹಾರಾಷ್ಟ್ರದಲ್ಲಿ ಕರ್ನಾಟಕ ವಾಹನಗಳಿಗೆ ಕಪ್ಪು ಮಸಿ ಬಳಿದ ಹಿನ್ನೆಲೆ ಆಕ್ರೋಶಗೊಂಡ ನಗರದ APMC ಕಾರ್ಮಿಕ ಹಾಗೂ ಹಾಮಾಲಿ ಸಂಘಟನೆಗಳು ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದು ಎಚ್ಚರಿಕೆ ನೀಡಿವೆ. ಎಪಿಎಂಸಿಗೆ ಬರುವ ಮಹಾರಾಷ್ಟ್ರದ ವಾಹನಗಳಿಗೆ ಮಸಿ ಬಳಿದ ಸಂಘಟನೆಯ ಕಾರ್ಯಕರ್ತರು, ಪುಂಡಾಟಿಕೆಯನ್ನು ಹೀಗೆ ಮುಂದುವರಿಸಿದರೆ ಮಹಾರಾಷ್ಟ್ರ ವಾಹನಗಳನ್ನ ಒಳಗೆ ಬರಲು ಬಿಡುವುದಿಲ್ಲ. ಸೋಮವಾರದವರೆಗೆ ನಿಮಗೆ ಕಾಲಾವಕಾಶ ನೀಡುತ್ತೇವೆ. ಬಾಲ ಬಿಚ್ಚಿದರೆ ನಿಮ್ಮ ವಾಹನಗಳನ್ನು ಒಳಗೆ ಬಿಡುವುದಿಲ್ಲ ಎಂದು ಚಾಲಕರಿಗೆ ಎಚ್ಚರಿಕೆ ನೀಡಿದ್ದಾರೆ. ಯಶವಂತಪುರದಲ್ಲಿ ಇರುವ ಎಪಿಎಂಸಿಗೆ ಪ್ರತಿದಿನ ಸುಮಾರು 400ಕ್ಕೂ ಹೆಚ್ಚು ಮಹಾರಾಷ್ಟ್ರ ವಾಹನಗಳು ಬರುತ್ತವೆ.

ಇದನ್ನೂ ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸೋನಿಯಾ, ರಾಹುಲ್​ಗೆ ಜೈಲು: ಸುಬ್ರಮಣಿಯನ್ ಸ್ವಾಮಿ

ಮಹಾ ಪುಂಡರಿಗೆ ಪ್ರತ್ಯುತ್ತರ ನೀಡಲು ಸಜ್ಜಾದ ಕರವೇ

ಹುಬ್ಬಳ್ಳಿ: ಮಹಾರಾಷ್ಟ್ರದಲ್ಲಿ KSRTC ಬಸ್​​ಗಳ​​ ಮೇಲೆ ಕಲ್ಲು ತೂರಾಟ ನಡೆಸಿರುವುದನ್ನು ಖಂಡಿಸಿ ಹುಬ್ಬಳ್ಳಿ ಹೊಸ ಬಸ್​​ ನಿಲ್ದಾಣದಲ್ಲಿ ಕರ್ನಾಟಕ ರಕ್ಷಣ ವೇದಿಕೆ (ಕರವೇ) ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು ಮಹಾರಾಷ್ಟ್ರ ಬಸ್​​ಗಳಿಗೂ ಮಸಿ ಬಳಿಯಲು ಸಜ್ಜಾಗಿದ್ದಾರೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಗೋಕುಲ ರಸ್ತೆಯ ಬಸ್​​ ನಿಲ್ದಾಣದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್​​ ಕೈಗೊಳ್ಳಲಾಗಿದೆ.

ಇದನ್ನೂ ಓದಿ: ಒಕ್ಕಲು ಮಕ್ಕಳು ಒಕ್ಕಲುತನ ಮೀರಿ ಉದ್ಯಮಿಗಳಾಗಲು ಶ್ರಮಿಸಬೇಕು: ಸಚಿವ ಡಾ. ಸಿ.ಎನ್. ಅಶ್ವಥ್ ನಾರಾಯಣ್ ಕರೆ

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:05 pm, Sat, 26 November 22

Follow Us
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಅಳ್ನಾವರದಲ್ಲಿ ನಾಲ್ಕು ಗಂಟೆಗೂ ಹೆಚ್ಚು ರೈಲುಗಳ ನಿಲುಗಡೆ: ಪ್ರಯಾಣಿಕರ ಪರದಾಟ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಆರ್​ಎಸ್​ಎಸ್ ನೋಂದಣಿ ಬಗ್ಗೆ ರಾಷ್ಟ್ರಮಟ್ಟದಲ್ಲಿ ಅಭಿಯಾನ
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಪದಕ ಗೆದ್ದ ಕನ್ನಡತಿ; ಭಾರತೀಯ ವನಿತೆಯರ ಕಮಾಲ್
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
ಚಾಮರಾಜೇಶ್ವರಸ್ವಾಮಿ ಆಷಾಢ ಮಾಸದ ರಥೋತ್ಸವಕ್ಕೆ ಕ್ಷಣಗಣನೆ ಆರಂಭ
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
‘ಟಾಕ್ಸಿಕ್ ನೋಡಿದವರು ವಾಟ್​ ದಿ ಹೆಲ್​ ವಾಸ್ ದ್ಯಾಟ್ ಅಂತ ಹೊರಗೆ ಬರ್ತಾರೆ’
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಸಿಟಿ ರವಿ ಚಿಕ್ಕಮಗಳೂರಿಗೆ ಬರದಂತೆ ತಡೀತೇವೆ, ಮುಸ್ಲಿಂ ಮುಖಂಡರ ಎಚ್ಚರಿಕೆ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಭೀಕರ ಬರಕ್ಕೆ ತುತ್ತಾದ ರಾಯಚೂರು, ಲಿಂಗಸೂರಿನಲ್ಲಿ ಗುಳೆ ಹೊರಟ 40 ಸಾವಿರ ಜನ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಬೆಂಗಳೂರು: ಕ್ಯಾಬ್ಗೆ ಕಾಯುತ್ತಿದ್ದ ಯುವತಿ ಜೊತೆ ವ್ಯಕ್ತಿ ಅಸಭ್ಯ ವರ್ತನೆ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸುಬ್ರಹ್ಮಣ್ಯ, ಹನುಮನ ಲಹರಿ ಇರುವ ಪರ್ವ ದಿನ: 12 ರಾಶಿಗಳ ದಿನ ಭವಿಷ್ಯ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ