Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕ-ಮಹಾರಾಷ್ಟ್ರ ಪತ್ರಕರ್ತರ ಸಮ್ಮಿಲನ; ಡಿ.23 ರಂದು KUWJ ಘಟಕ ಉದ್ಘಾಟನೆ

ಮಹಾರಾಷ್ಟ್ರದಲ್ಲಿ ಕನ್ನಡ ಕಂಪು ಬೆಳಗಿಸುತ್ತಿರುವ ಮುಂಬಯಿಯಲ್ಲಿ ಕೆಯುಡಬ್ಲ್ಯುಜೆ ಘಟಕ ಡಿಸೆಂಬರ್ 23ಕ್ಕೆ ಚಾಲನೆಗೊಳ್ಳಲಿದೆ. ರೋನ್ಸ್ ಬಂಟ್ವಾಳ ಮತ್ತಿತರ ಸ್ನೇಹಿತರು ಈ ನಿಟ್ಟಿನಲ್ಲಿ ಮುಂಚೂಣಿಯಲ್ಲಿದ್ದು ಕನ್ನಡಿಗ ಪತ್ರಕರ್ತರ ಸಂಘಟನೆ ಮಾಡಿರುವುದು ವಿಶೇಷ. ಮುಂದೆ ಕರ್ನಾಟಕ ಮತ್ತು ಮಹಾರಾಷ್ಟ್ರ ಪತ್ರಕರ್ತರ ಸಮಾವೇಶ ಮಾಡುವ ಉದ್ದೇಶವನ್ನು KUWJ ಹೊಂದಿದೆ.

ಕರ್ನಾಟಕ-ಮಹಾರಾಷ್ಟ್ರ ಪತ್ರಕರ್ತರ ಸಮ್ಮಿಲನ; ಡಿ.23 ರಂದು KUWJ ಘಟಕ ಉದ್ಘಾಟನೆ
ಕರ್ನಾಟಕ-ಮಹಾರಾಷ್ಟ್ರ ಪತ್ರಕರ್ತರ ಸಮ್ಮಿಲನ; ಡಿ.23 ರಂದು KUWJ ಘಟಕ ಉದ್ಘಾಟನೆ (ಸಾಂದರ್ಭಿಕ ಚಿತ್ರ)Image Credit source: Getty Images
Follow us
TV9 Web
| Updated By: Rakesh Nayak Manchi

Updated on: Dec 21, 2023 | 7:15 AM

ಬೆಂಗಳೂರು, ಡಿ.21: ಮಹಾರಾಷ್ಟ್ರದಲ್ಲಿ ಕನ್ನಡ ಕಂಪು ಬೆಳಗಿಸುತ್ತಿರುವ ಮುಂಬಯಿಯಲ್ಲಿ ಕೆಯುಡಬ್ಲ್ಯುಜೆ (KUWJ) ಘಟಕ ಡಿಸೆಂಬರ್ 23ಕ್ಕೆ ಚಾಲನೆಗೊಳ್ಳಲಿದೆ. ಕೆಯುಡಬ್ಲ್ಯುಜೆ ಮಹಾರಾಷ್ಟ್ರ ಘಟಕವನ್ನು ಕೃಷಿ ಸಚಿವ ಚಲುವರಾಯಸ್ವಾಮಿ (N. Chaluvaraya Swamy) ಉದ್ಘಾಟಿಸಲಿದ್ದು, ಸ್ಪೀಕರ್ ಯು.ಟಿ.ಖಾದರ್ (U.T. Khader) ಅವರು ಸದಸ್ಯರಿಗೆ ಗುರುತಿನ ಐಡಿ ಕಾರ್ಡ್ ನೀಡಲಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಮಹಾರಾಷ್ಟ್ರ ಘಟಕದ ಅಧ್ಯಕ್ಷ ರೋನ್ಸ್ ಬಂಟ್ವಾಳ, ಕೆಯುಡಬ್ಲ್ಯುಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಡಾ.ನಾರಾಯಣಗೌಡ, ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಡಾ.ಆರ್.ಕೆ.ಶೆಟ್ಟಿ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ದೇಶದ ಆರ್ಥಿಕ ನಗರಿ ಎಂದೇ ಗುರುತಿಸಿಕೊಂಡಿರುವ ಮುಂಬಯಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ (ಕೆಯುಡಬ್ಲ್ಯುಜೆ) ತನ್ನ ವ್ಯಾಪ್ತಿ ವಿಸ್ತರಿಸುತ್ತಿದೆ. ದೂರದ ಮುಂಬಯಿಗೆ ನಾನಾ ಕಾರಣಕ್ಕಾಗಿ ಉದ್ಯೋಗ ಅರಸಿ ಹೋದ ಕನ್ನಡಿಗರ ಸಂಖ್ಯೆ ದೊಡ್ಡ ಪ್ರಮಾಣದಲ್ಲಿದೆ. ಕರಾವಳಿ ಭಾಗದ ಜನರು ನಮ್ಮದೇ ಮುಂಬಯಿ ಎನ್ನುವಷ್ಟು ಅಭಿಮಾನದಲ್ಲಿ ಅಲ್ಲಿ ನೆಲೆಸಿದ್ದಾರೆ ಎಂದರು.

ಇದನ್ನೂ ಓದಿ: ಬೆಳಗಾವಿ ಅಧಿವೇಶನ: ಕೋಟ್ ಧರಿಸಿ ತಡವಾಗಿ ಅಧಿವೇಶನಕ್ಕೆ ಬಂದ ಚಲುವರಾಯಸ್ವಾಮಿ ಕಾಲೆಳೆದ ವಿಪಕ್ಷ ನಾಯಕ ಅಶೋಕ

ಅನೇಕ ರಾಜ್ಯ ಮಟ್ಟದ ಕನ್ನಡ ಪತ್ರಿಕೆಗಳು ಮತ್ತು ಅಲ್ಲಿಯೇ ಪ್ರಕಟವಾಗುವ ಹಲವು ಸ್ಥಳೀಯ ಪತ್ರಿಕೆಗಳು ಕನ್ನಡಿಗರ ನಡುವೆ ಭಾವಸೇತುವಾಗಿರುವುದು ವಿಶೇಷ ಮತ್ತು ಅಭಿಮಾನದ ಸಂಗತಿ. ದೇಶದ ಆರ್ಥಿಕ ನಗರಿ ಎಂದೇ ಗುರುತಿಸಿಕೊಂಡಿರುವ ಮುಂಬಯಿಗೆ ಕರ್ನಾಟಕ ಕಾರ್ಯ ನಿರತ ಪತ್ರಕರ್ತರು (ಕೆಯುಡಬ್ಲ್ಯುಜೆ) ತನ್ನ ವ್ಯಾಪ್ತಿ ವಿಸ್ತರಿಸುತ್ತಿದ್ದಾರೆ.

ಹೊರನಾಡಿನ ಘಟಕವಾಗಿ ಮುಂಬಯಿ ಕನ್ನಡ ಪತ್ರಕರ್ತರು ಕೆಯುಡಬ್ಲ್ಯುಜೆ ಭಾಗವಾಗುತ್ತಿರುವುದು ಸಂತಸದ ಸಂಗತಿ. ಮಂಗಳೂರಿನಲ್ಲಿ ನಡೆದ 35ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಪ್ರತಿನಿಧಿಗಳ ಸಮಾವೇಶದಲ್ಲಿ ತೆಗೆದುಕೊಂಡ ತೀರ್ಮಾನದಂತೆ ಕೇರಳ ರಾಜ್ಯದ ಕಾಸರಗೋಡು ಕನ್ನಡ ಪತ್ರಕರ್ತರ ಘಟಕ ಪ್ರಾರಂಭವಾಗಿದ್ದು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಮಹಾರಾಷ್ಟ್ರದಲ್ಲಿ ಕನ್ನಡ ಕಂಪು ಬೆಳಗಿಸುತ್ತಿರುವ ಮುಂಬಯಿಯಲ್ಲಿ ಕೆಯುಡಬ್ಲ್ಯುಜೆ ಘಟಕ ಡಿಸೆಂಬರ್ 23ಕ್ಕೆ ಚಾಲನೆಗೊಳ್ಳಲಿದೆ. ರೋನ್ಸ್ ಬಂಟ್ವಾಳ ಮತ್ತಿತರ ಸ್ನೇಹಿತರು ಈ ನಿಟ್ಟಿನಲ್ಲಿ ಮುಂಚೂಣಿಯಲ್ಲಿದ್ದು ಕನ್ನಡಿಗ ಪತ್ರಕರ್ತರ ಸಂಘಟನೆ ಮಾಡಿರುವುದು ವಿಶೇಷ. ಮುಂದೆ ಕರ್ನಾಟಕ ಮತ್ತು ಮಹಾರಾಷ್ಟ್ರ ಪತ್ರಕರ್ತರ ಸಮಾವೇಶ ಮಾಡುವ ಉದ್ದೇಶವನ್ನು ಕೆಯುಡಬ್ಲುಜೆ ಹೊಂದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ತಮಿಳುನಾಡುನಲ್ಲಿ ಮುಂದೊಂದು ದಿನ ಬಿಜೆಪಿ ಅಧಿಕಾರಕ್ಕೆ ಬರಲಿದೆ: ಅಣ್ಣಾಮಲೈ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಕುಟುಂಬ, ಮಕ್ಕಳು, ಸಿನಿಮಾ ಇತ್ಯಾದಿ.. ಮಗಳೊಟ್ಟಿಗೆ ಮಾತಿಗೆ ಕೂತ ಶಿವಣ್ಣ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ಜೆಡಿಎಸ್ ಈಗಲೂ ಕರ್ನಾಟಕದಲ್ಲಿ ಸಾಕಷ್ಟು ಬಲಾಢ್ಯ: ನಿಖಿಲ್ ಕುಮಾರಸ್ವಾಮಿ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
ವಕ್ಫ್ ತಿದ್ದುಪಡಿ ಕಾಯ್ದೆ ಕುರಿತು ಜಮ್ಮು ಕಾಶ್ಮೀರದ ವಿಧಾನಸಭೆಯಲ್ಲಿ ಗಲಾಟೆ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
Video: ಕಚ್ಚಿದ್ದಕ್ಕೆ ಬೀದಿ ನಾಯಿಯನ್ನು ಗುಂಡಿಕ್ಕಿ ಕೊಂದ ವ್ಯಕ್ತಿ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಬೀದರ್ ಮತ್ತು ಕಲಬುರಗಿ ದರೋಡೆ ಪ್ರಕರಣಗಳ ನಡುವೆ ಲಿಂಕ್ ಇರೋ ಸಾಧ್ಯತೆ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
ಸಮಾಜ ಸ್ವಾಮೀಜಿಯನ್ನು ಕಡೆಗಣಿಸಿಲಾರಂಭಿಸಿದರೆ ಅಚ್ಚರಿಯಿಲ್ಲ: ವಿಜುಗೌಡ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ
2 ಬಾರಿ ಫೈನ್ ಕಟ್ಟಿದ ಬಳಿಕ ಹೊಸ ಸೆಲೆಬ್ರೇಷನ್ ಪರಿಚಯಿಸಿದ ದಿಗ್ವೇಶ್ ರಾಠಿ